ನವದೆಹಲಿ: ವಿಶ್ವವನ್ನೇ ನಡುಗಿಸಿದ ಕೊರೊನಾ ವೈರಸ್ (Covid 19) ಆತಂಕ ಇನ್ನೂ ದೂರವಾಗಿಲ್ಲ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು 2023-24ರ ಕೇಂದ್ರ ಬಜೆಟ್ ಮಂಡಣೆ (Union Budget 2023) ಮಾಡಿದ್ದಾರೆ. ಅಂದಹಾಗೇ, ಮುಂಬರುವ ಸಾರ್ವತ್ರಿಕ ಚುನಾವಣೆಗೂ (General elections 2024) ಮೊದಲು ಮೋದಿ ಸರ್ಕಾರ ಮಂಡಿಸಿರುವ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ (PM Modi)ಅವರು ಆರೋಗ್ಯ ಮತ್ತು ರಕ್ಷಣಾ ಕ್ಷೇತ್ರಗಳು (Health and Defense Sector) ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ಪ್ರಸ್ತಾಪಿಸಿದ್ದರು. ಇಂದಿನ ಬಜೆಟ್ನಲ್ಲೂ ಕೇಂದ್ರ ಸರ್ಕಾರ ಈ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಆರೋಗ್ಯ, ಔಷಧ ಮತ್ತು ವೈದ್ಯಕೀಯ ಸಾಧನಗಳ ವಿಭಾಗಗಳಿಗೆ ಸಂಬಂಧಿಸಿದಂತೆ ಬಜೆಟ್ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.
ಈ ವರ್ಷ ಬಜೆಟ್ನಲ್ಲಿ ಆರೋಗ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ತಂತ್ರಜ್ಞಾನದ ನೆರವು ಪಡೆದುಕೊಂಡು, ಸಾರ್ವಜನಿಕ ಆರೋಗ್ಯ ನಿರ್ವಹಣೆಯನ್ನು ಸ್ಮಾರ್ಟ್ ಆಗಿಸಿ, ಜನರ ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಅಡಿಪಾಯವನ್ನು ಸೃಷ್ಟಿಸಲು ಒತ್ತು ನೀಡಲಾಗಿದೆ.
प्रगति, उन्नति और नई गति का बजट!
समाज के हर वर्ग को समर्पित, स्वास्थ्य, शिक्षा, ऊर्जा सुरक्षा, युवा उत्थान व आम आदमी को राहत देने वाले इस #AmritKaalBudget को पेश करने हेतु FM @NSitharaman जी का अभिनंदन।
यह बजट PM @NarendraModi जी के अमृत काल के भारत का निर्माण करने वाला बजट है।
— Dr Mansukh Mandaviya (@mansukhmandviya) February 1, 2023
2014 ರಿಂದ ಸ್ಥಾಪಿತವಾಗಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಆ ಮೂಲಕ ನುರಿತ ಆರೋಗ್ಯ ಸಿಬ್ಬಂದಿಯ ಲಭ್ಯತೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಿದ್ದಾರೆ.
ಇದುವರೆಗೂ ದೇಶದ 102 ಕೋಟಿ ಜನರಿಗೆ 220 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: Budget 2023: ಬಡವರಿಗೆ ಸರ್ಕಾರದ ಗಿಫ್ಟ್, ಉಚಿತ ಆಹಾರ ಧಾನ್ಯಕ್ಕೆ 2 ಲಕ್ಷ ಕೋಟಿ ಮೀಸಲು, ಸಂಪೂರ್ಣ ವೆಚ್ಚ ಇನ್ನು ಕೇಂದ್ರದ್ದೇ!
2047ರ ವೇಳೆಗೆ ಸಿಕಲ್-ಸೆಲ್ ಅನೀಮಿಯಾ ರೋಗವನ್ನು ದೇಶದಿಂದ ತೊಡೆದು ಹಾಕಲು ಮಿಷನ್ ಸ್ಥಾಪನೆ ಮಾಡೋದಾಗಿ ಘೋಷಣೆ ಮಾಡಲಾಗಿದೆ. ಸಿಕಲ್-ಸೆಲ್ ಅನೀಮಿಯಾ ಎಂಬುವುದು ರಕ್ತಹೀನತೆಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ದೇಶದ ಬುಡಕಟ್ಟು ಜನಾಂಗದಲ್ಲಿ ಹೆಚ್ಚು ಕಾಡುತ್ತಿರುವ ಸಿಲಕ್ ಸೆಲ್ ಅನಿಮೀಯಾ ರೋಗ ನಿವಾರಣೆಗೆ 0-40 ವರ್ಷ ವಯಸ್ಸಿನ 7 ಕೋಟಿ ಜನರ ಆರೋಗ್ಯ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಈ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸೀತಾರಾಮನ್ ಹೇಳಿದ್ದಾರೆ.
ಔಷಧಿ (ಫಾರ್ಮಾಸ್ಯುಟಿಕಲ್ಸ್) ಉದ್ಯಮದಲ್ಲಿ ಹೊಸ ಹೊಸ ಸಂಶೋಧನೆಗಾಗಿ ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಮತ್ತು ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
By creating jobs through investments in infrastructure projects paired with increased spending on agriculture, housing, healthcare and manufacturing sectors will help create more opportunities for everyone and help in driving economic growth further ahead!
— Rajnath Singh (@rajnathsingh) February 1, 2023
ಇದನ್ನೂ ಓದಿ: Union Budget 2023: ಪ್ರತಿ ರಾಜ್ಯದಲ್ಲಿ 1 ಯುನಿಟಿ ಮಾಲ್ ಆರಂಭ! ಏನಿದು?
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಕ್ಸಲೆನ್ಸ್)ಯ ಮೂರು ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಈ ಕ್ಷೇತ್ರಗಳಲ್ಲಿ ಈಗಾಗಲೇ ಸಂಶೋಧನೆಗಳನ್ನು ನಡೆಸಿರುವ ಸಂಸ್ಥೆಗಳು ಹಾಗೂ ತಜ್ಞರು ಇದರಲ್ಲಿ ಪಾಲುದಾರರಾಗುತ್ತಾರೆ. ಆರೋಗ್ಯ ಕ್ಷೇತ್ರದ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ (ಪಿಪಿಪಿ) ಅವಕಾಶ ನೀಡಿ, ಆ ಮೂಲಕ ಅತ್ಯಾಧುನಿಕ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗುತ್ತದೆ. ಇವುಗಳನ್ನು ಕೃಷಿ, ಆರೋಗ್ಯ ಸೇರಿದಂತೆ ಸುಸ್ಥಿರ ವ್ಯವಸ್ಥೆಯ ಕ್ಷೇತ್ರಗಳಲ್ಲಿ ಬಳಕೆ ಮಾಡಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
2022-23 ರ ಬಜೆಟ್ನಲ್ಲಿ, ಹಿಂದಿನ ವರ್ಷಕ್ಕಿಂತ 16.5 ಶೇಕಡಾ ಹೆಚ್ಚು, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 86,200 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದರು. 2023ರ ಬಜೆಟ್ನಲ್ಲಿ ಈ ವಲಯಕ್ಕೆ ಶೇಕಡಾ 20 ರಿಂದ 30 ರಷ್ಟು ಹೆಚ್ಚಿನ ಹಣವನ್ನು ಮೀಸಲಿಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಅದರಲ್ಲೂ ವಿಮೆ, ಲಸಿಕೆಗಳು, ತಂತ್ರಜ್ಞಾನ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷೆ ಮಾಡಲಾಗಿತ್ತು.
ಇನ್ನು 2022-23ರ ಬಜೆಟ್ನಲ್ಲಿ ಈ ಹಿಂದಿಗಿಂತ ಹೆಚ್ಚಿನ ಅನುದಾನ ಪಡೆದ ಸಚಿವಾಲಯಗಳಲ್ಲಿ ಮೊದಲ ಸ್ಥಾನವನ್ನು ಸಂವಹನ ಸಚಿವಾಲಯ ಪಡೆದುಕೊಂಡಿತ್ತು, ಶೇಕಡಾ 93ರಷ್ಟು ಹೆಚ್ಚಿನ ಅನುದಾನ ನೀಡಲಾಗಿತ್ತು. ಆ ಬಳಿಕ ರಸ್ತೆ ಮತ್ತು ಸಾರಿಗೆ ಸಚಿವಾಲಯ ಹಾಗೂ ಜಲ ಶಕ್ತಿ ಸಚಿವಾಲಯಗಳ ಕ್ರಮವಾಗಿ ಸ್ಥಾನ ಪಡೆದಿದ್ದವು. ಈ ಪೈಕಿ ರಕ್ಷಣಾ ಸಚಿವಾಲಯವು 2022-23ರಲ್ಲಿ ಅತಿ ಹೆಚ್ಚು ಅಂದರೆ 5,25,166 ಕೋಟಿ ರೂಪಾಯಿ, ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ರೂ. 2022-23ರಲ್ಲಿ 86,201 ಕೋಟಿ ರೂಪಾಯಿ ಘೋಷಿಸಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ