• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಯುಪಿ ಚುನಾವಣೆ 2022| 300ಕ್ಕೂ ಅಧಿಕ ಸ್ಥಾನ ಗಳಿಸುವ ಓವೈಸಿ ಸವಾಲನ್ನು ಸ್ವೀಕರಿಸಿದ್ದೇನೆ; ಯೋಗಿ ಆದಿತ್ಯನಾಥ್

ಯುಪಿ ಚುನಾವಣೆ 2022| 300ಕ್ಕೂ ಅಧಿಕ ಸ್ಥಾನ ಗಳಿಸುವ ಓವೈಸಿ ಸವಾಲನ್ನು ಸ್ವೀಕರಿಸಿದ್ದೇನೆ; ಯೋಗಿ ಆದಿತ್ಯನಾಥ್

ಯೋಗಿ ಆದಿತ್ಯನಾಥ್.

ಯೋಗಿ ಆದಿತ್ಯನಾಥ್.

ಅಸಾದುದ್ದೀನ್ ಓವೈಸಿ ನಮ್ಮ ದೇಶದ ದೊಡ್ಡ ನಾಯಕ. ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಿದರೆ, ಬಿಜೆಪಿಯ ಕಾರ್ಯಕರ್ತರು ಅವರ ಸವಾಲನ್ನು ಸ್ವೀಕರಿಸುತ್ತಾರೆ ಎಂದು ಯೋಗಿ ಆದಿತ್ಯನಾಥ್ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

  • Share this:

ಉತ್ತರಪ್ರದೇಶ (ಜುಲೈ 04); ದೇಶದಲ್ಲೇ ಅತಿದೊಡ್ಡ ರಾಜ್ಯ ಎಂಬ ಹೆಗ್ಗಳಿಕೆಗೆ ಒಳಗಾಗಿರುವ ಉತ್ತರಪ್ರದೇಶದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಯಲ್ಲಿ ಗೆಲ್ಲಲೇಬೇಕು, ಮತ್ತೆ ಅಧಿಕಾರ ಹಿಡಿಯಬೇಕು ಎಂಬ ಮಹತ್ವಾಕಾಂಕ್ಷೆ ಬಿಜೆಪಿಗೆ ಇದೆ. ಎಸ್​ಪಿ, ಬಿಎಸ್​ಪಿ ಕಾಂಗ್ರೆಸ್​ ಪಕ್ಷಗಳಿಗೂ ಈ ಚುನಾವಣೆ ನಿರ್ಣಾಯಕ ವಾಗಿದೆ. ಅಲ್ಲದೆ, ಮುಂದಿನ ವರ್ಷದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಸಾದುದ್ದೀನ್​ ಓವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (All India Majlis-e-Ittehadul Muslimeen) ಪಕ್ಷವೂ ಸಹ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಿರುವುದು ಖಚಿತವಾಗಿದೆ. ಓವೈಸಿ ಅವರ AIMIM ಪಕ್ಷ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕುರಿತು ಓವೈಸಿ ಇತ್ತೀಚೆಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ಅಲ್ಲದೆ, ಈ ಚುನಾವಣೆಯಲ್ಲಿ ಬಿಜೆಪಿ 300 ಕ್ಷೇತ್ರಗಳಲ್ಲಿ ಗೆಲ್ಲುತ್ತದೆಯೇ? ಎಂದು ಸವಾಲು ಹಾಕಿದ್ದರು. ಆದರೆ, ಈ ಸವಾಲನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವೀಕರಿಸಿದ್ದಾರೆ.


ಈ ಬಗ್ಗೆ ಮಾತನಾಡಿರುವ ಯೋಗಿ ಆದಿತ್ಯನಾಥ್, "ಅಸಾದುದ್ದೀನ್ ಓವೈಸಿ ನೀಡಿರುವ ಸವಾಲನ್ನು ನಾನು ಸ್ವೀಕರಿಸಿದ್ದೇವೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ "300 ಕ್ಕೂ ಹೆಚ್ಚು ಸ್ಥಾನಗಳನ್ನು" ಗೆದ್ದು ಬಿಜೆಪಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ" ಎಂದು ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


"ಅಸಾದುದ್ದೀನ್ ಓವೈಸಿ ನಮ್ಮ ದೇಶದ ದೊಡ್ಡ ನಾಯಕ. ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಿದರೆ, ಬಿಜೆಪಿಯ ಕಾರ್ಯಕರ್ತರು ಅಸಾದುದ್ದೀನ್ ಓವೈಸಿ ಸವಾಲನ್ನು ಸ್ವೀಕರಿಸುತ್ತಾರೆ" ಎಂದು ಯೋಗಿ ಆದಿತ್ಯನಾಥ್ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.


ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಈಗಾಗಲೇ ಶುರುವಾಗಿದೆ. ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ತಮ್ಮ ಪಕ್ಷವು 2022 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 100 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಕಳೆದ ತಿಂಗಳೇ ಘೋಷಿಸಿದ್ದರು.


ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಎಸ್‌ಬಿಎಸ್‌ಪಿ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸಂಕಲ್ಪ ಮೋರ್ಚಾ ಬ್ಯಾನರ್ ಅಡಿಯಲ್ಲಿ ಓವೈಸಿ ಪಕ್ಷವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಜ್ಜಾಗಿದೆ.


ಇದನ್ನೂ ಓದಿ: Explained| 2023ರ ಚುನಾವಣೆಗೆ ಈಗಿನಿಂದಲೇ ಸಜ್ಜಾಗುತ್ತಿದ್ದಾರಾ ಡಿ.ಕೆ. ಶಿವಕುಮಾರ್​?; ಎಲ್ಲರ ಹುಬ್ಬೇರಿಸುತ್ತಿರುವ ಟ್ರಬಲ್ ಶೂಟರ್​


ವಿಧಾನಸಭಾ ಚುನಾವಣೆ ಮುಂಚಿತವಾಗಿ ನಡೆದಿರುವ ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 75 ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಗಳಲ್ಲಿ 67 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಪಕ್ಷದ ಈ ಗೆಲುವು ರಾಜ್ಯದ ಬಿಜೆಪಿ ನಾಯಕ ವಿಶ್ವಾಸವನ್ನು ಬಲಪಡಿಸಿದೆ. ಇದರಿಂದಾಗಿ ಯೋಗಿ ಆದಿತ್ಯನಾಥ್, 2022 ರ ವಿಧಾನಸಭಾ ಚುನಾವಣೆಯನ್ನು ಇದೇ ಮಾದರಿಯಲ್ಲಿ ಗೆಲ್ಲುವುದಾಗಿ ಪ್ರತಿಜ್ಞೆ ಮಾಡಿದ್ದು, "ನಾವು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಫಿಲಿಪ್ಪೈನ್ಸ್​ನಲ್ಲಿ ವಿಮಾನ ದುರಂತ; 85 ಮಂದಿ ಇದ್ದ ಮಿಲಿಟರಿ ವಿಮಾನ ಅಪಘಾತ


ಆದರೆ, ಈ ಬಾರಿಯ ಚುನಾವಣೆಯಲ್ಲಿ ಅಖಿಲೇಶ್​ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಬಿಜೆಪಿಗೆ ಕಠಿಣ ಸವಾಲು ನೀಡಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ, ಈ ಎರಡೂ ಪಕ್ಷಗಳು ಸದ್ಯಕ್ಕೆ ಒಡೆದ ಮನೆಯಾಗಿರುವುದು ಸಹ ಬಿಜೆಪಿ ಪಾಲಿಗೆ ಲಾಭವಾಗಲಿದೆ ಎಂದು ವ್ಯಾಖ್ಯಾನಿಸ ಲಾಗುತ್ತಿದೆ. ಇನ್ನೂ ಕಾಂಗ್ರೆಸ್​ ಸ್ಥಿತಿಯೂ ಇದಕ್ಕಿಂತ ಭಿನ್ನವಾಗೇನೂ ಇಲ್ಲ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: