'ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧ' ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿನ ತಾಯಂದಿರ ಮತ್ತು ಹೆಣ್ಣು ಮಕ್ಕಳ ಮಾನಹಾನಿಬಗ್ಗೆ ಯೋಚಿಸುವವರಿಗೆ ವಿನಾಶ ಖಚಿತ. ಅವರು ಎಂತಹ ಶಿಕ್ಷೆ ಪಡೆಯುತ್ತಾರೆ ಎಂದರೆ ಅದು ಭವಿಷ್ಯದಲ್ಲಿ ಈ ಬಗ್ಗೆ ಉದಾಹರಣೆಯಾಗುತ್ತಾರೆ.
ಲಕ್ನೋ (ಅ.2): ಉತ್ತರ ಪ್ರದೇಶ ಸರ್ಕಾರ ಮಹಿಳೆಯ ರಕ್ಷಣೆಗೆ ಸದಾ ಬದ್ಧವಾಗಿದ್ದು, ಎಲ್ಲಾ ತಾಯಂದಿರು ಹಾಗೂ ಸಹೋದರಿಯ ಸಂರಕ್ಷಣೆ, ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಹಥ್ರಾಸ್ ಅತ್ಯಾಚಾರ ಪ್ರಕರಣ ಕುರಿತು ಇಡೀ ದೇಶದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದು, ವಿಪಕ್ಷಗಳು ಬಿಜೆಪಿ ಆಡಳಿತವನ್ನು ಟೀಕಿಸುತ್ತಿವೆ. ಯೋಗಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಅಲ್ಲಿನ ಮಹಿಳೆಯರಲ್ಲಿ ಅಭದ್ರತೆ ಕಾಡುವಂತೆ ಆಗಿದೆ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಗುವುದಿಲ್ಲ ಎಂಬ ಟೀಕಾಪ್ರಹಾರಗಳು ಕೇಳಿ ಬರುತ್ತಿದೆ. ಈ ಹಿನ್ನಲೆ ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್, ಮಹಿಳೆರ ರಕ್ಷಣೆ ನಮ್ಮ ಜವಾಬ್ದಾರಿ ಎಂದಿದ್ದಾರೆ.
उत्तर प्रदेश में माताओं-बहनों के सम्मान-स्वाभिमान को क्षति पहुंचाने का विचार मात्र रखने वालों का समूल नाश सुनिश्चित है।
इन्हें ऐसा दंड मिलेगा जो भविष्य में उदाहरण प्रस्तुत करेगा।
आपकी @UPGovt प्रत्येक माता-बहन की सुरक्षा व विकास हेतु संकल्पबद्ध है।
'ಉತ್ತರ ಪ್ರದೇಶದಲ್ಲಿನ ತಾಯಂದಿರ ಮತ್ತು ಹೆಣ್ಣು ಮಕ್ಕಳ ಮಾನಹಾನಿಬಗ್ಗೆ ಯೋಚಿಸುವವರಿಗೆ ವಿನಾಶ ಖಚಿತ. ಅವರು ಎಂತಹ ಶಿಕ್ಷೆ ಪಡೆಯುತ್ತಾರೆ ಎಂದರೆ ಅದು ಭವಿಷ್ಯದಲ್ಲಿ ಈ ಬಗ್ಗೆ ಉದಾಹರಣೆಯಾಗುತ್ತಾರೆ. ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಹಥ್ರಾಸ್ ಪ್ರಕರಣ ಮಾಸುವ ಮುನ್ನವೇ ಅಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಈ ಹಿಂದೆ ಉನ್ನಾವೋ ಪ್ರಕರಣ ಕೂಡ ರಾಜ್ಯದಲ್ಲಿ ಸುದ್ದಿ ಮಾಡಿತ್ತು
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ