ಲಕ್ನೋ (ಅ.31): ಅಂತರ್ ಧರ್ಮಿಯ ಮದುವೆಗಾಗಿ ಬಲವಂತವಾಗಿ ಮತಾಂತರ ನಡೆಸಿದರೆ ಅವರನ್ನು 'ರಾಮ ನಾಮ ಸತ್ಯ ಪ್ರಯಾಣ'ಕ್ಕೆ ಕಳುಹಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ , ರಾಜ್ಯದಲ್ಲಿ 'ಲವ್ ಜಿಹಾದ್' ತಡೆಯಲು ಸರ್ಕಾರ ಕಾರ್ಯ ನಿರ್ವಹಿಸಲಿದ್ದು,ಇದಕ್ಕಾಗಿ ಕಾನೂನು ತರುವುದಾಗಿ ತಿಳಿಸಿದ್ದಾರೆ.. ವಿವಾಹದ ಸಂದರ್ಭದಲ್ಲಿ ಮತಾಂತರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈ ಕೋರ್ಟ್ ತಿಳಿಸಿದೆ. ಈ ಹೇಳಿಕೆ ಬೆನ್ನಲ್ಲೇ ಇಂದು ಮಾತನಾಡಿರುವ ಅವರು, ಲವ್ ಜಿಹಾದ್ ತಡೆಯಲಿ ಸರ್ಕಾರ ಕೆಲಸ ಮಾಡುತ್ತದೆ. ಗುರುತು ಮರೆ ಮಾಚಿ ನಮ್ಮ ಸಹೋದರರಿಯರ ಗೌರವದ ವಿರುದ್ಧ ಆಡವಾಡುವರು, ಇನ್ನಾದರೂ ತಮ್ಮ ದಾರಿ ಸರಿಪಡಿಸಿಕೊಳ್ಳದಿದ್ದರೆ, ಅವರಿಗೆ ರಾಮ್ ನಾಮ್ ಸತ್ಯ ಪ್ರಯಾಣ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಮ್ಮ ಹೇಳಿಕೆ ಬಗ್ಗೆ ಕೊನೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, 'ಲವ್ ಜಿಹಾದ್' ಮಾಫಿಯಾದಲ್ಲಿ ತೊಡಗಿರುವ ಅಪರಾಧಿಗಳಿಗೆ ಈ ಎಚ್ಚರಿಕೆ ಎಂದಿದ್ದಾರೆ.
#WATCH Allahabad HC said religious conversion isn't necessary for marriage. Govt will also work to curb 'Love-Jihad', we'll make a law. I warn those who conceal identity & play with our sisters' respect, if you don't mend your ways your 'Ram naam satya' journey will begin: UP CM pic.twitter.com/7Ddhz15inS
ಮದುವೆ ಕಾರಣದಿಂದಾಗಿ ಧರ್ಮ ಬಯಾಯಿಸಿಕೊಳ್ಳುವುದು ಮಾನ್ಯವಲ್ಲ ಎಂದು ಅಲಹಾಬಾದ್ ಕೋರ್ಟ್ ತಿಳಿಸಿದೆ. ನವ ದಂಪತಿಗಳ ಪ್ರಕರಣವೊಂದರಲ್ಲಿ ಈ ಹೇಳಿಕೆ ನೀಡಿದ್ದು, ಅವರ ಅರ್ಜಿ ವಜಾಗೊಳಿಸಲಾಗಿದೆ. ಅಂತರ್ ಧರ್ಮಿಯ ಮದುವೆಯಿಂದ ತೊಡಗು ಉಂಟಾಗಬಹುದು ಎಂದು ಪೊಲೀಸರಿಗೆ ನಿರ್ದೇಶಿಸಲು ಯುವತಿಯ ತಂದೆ ನ್ಯಾಯಾಲಯ ಮೊರೆ ಹೋಗಿದ್ದರು
ಬಲಪಂಥೀಯ ಗುಂಪುಗಳ ಪ್ರಕಾರ 'ಲವ್ ಜಿಹಾದ್' ಎಂಬುದು ಪಿತೂರಿಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಮಹಿಳೆಯರನ್ನು ಮತಾಂತರಗೊಳಿಸುವ ಉದ್ದೇಶದಿಂದ ತಮ್ಮ ನಿಜ ವ್ಯಕ್ತಿತ್ವ ಮರೆಮಾಚಿ ಅವರನ್ನು ಕೆಲವು ಯುವಕರು ಮದುವೆಯಾಗುತ್ತಾರೆ ಎನ್ನಲಾಗಿದೆ.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ