ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳು ಸಿಬಿಐ ಮತ್ತು ಎಸ್ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದ್ದು, ಎನ್ಎಚ್ಆರ್ಸಿ ಸಮಿತಿ ವರದಿಯಲ್ಲಿನ ಇತರೆ ವಿಚಾರಗಳು ಮತ್ತು ಪ್ರಕ್ರಿಯೆಯ ಕುರಿತು ನಿರ್ಧರಿಸಲು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗುವುದು ಎಂದಿದ್ದು, ಪ್ರಕರಣವನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಕೇವಲ ಕುರ್ಚಿಗಾಗಿ ಕಾದಾಟ ನಡೆಸುತ್ತಿರುವ ಕಾಂಗ್ರೆಸ್: ಜನ ಆಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ವ್ಯಂಗ್ಯ
"ಟಿಎಂಸಿ ಈ ತೀರ್ಪಿನ ಬಗ್ಗೆ ಚಿಂತಿಸಿಲ್ಲ ... ನಾವು ತೀರ್ಪಿನ ಬಗ್ಗೆ ಏನನ್ನೂ ಹೇಳುತ್ತಿಲ್ಲ ಆದರೆ ಎನ್ಎಚ್ಆರ್ಸಿ ವರದಿಯು ರಾಜಕೀಯ ಪ್ರೇರಿತವಾಗಿದೆ. ತ್ರಿಪುರಾದಲ್ಲಿ ಏನಾಗುತ್ತಿದೆ? ಅವರ ನಾಯಕರು 'ತಾಲಿಬಾನಿ ಶೈಲಿಯಲ್ಲಿ ಟಿಎಂಸಿ ನಾಯಕರನ್ನು ಕೊಲ್ಲಿ' ಎಂದು ಹೇಳುತ್ತಿದ್ದಾರೆ. ಮಾನವ ಹಕ್ಕು ಆಯೋಗ ಈಗ ಎಲ್ಲಿದೆ? ನೀವು ಸುಳ್ಳು ಆರೋಪಗಳನ್ನು ಹೊರಿಸುತ್ತಿದ್ದೀರಿ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.