ಸಿಎಂ ಯೋಗಿ ಆದಿತ್ಯನಾಥ್ ಕಾರ್ಯಕ್ರಮ: ತನ್ನ ಮಗು ಎತ್ತಿಕೊಂಡು ಕೆಲಸ ಮಾಡಿದ ಮಹಿಳಾ ಕಾನ್ಸ್ಟೇಬಲ್
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ದಿನಗಳ ಕಾಲ ಉತ್ತಪ್ರಪದೇಶದ ನೋಯ್ಡಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, 1,452 ಕೋಟಿ ರೂ. ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
news18-kannada Updated:March 2, 2020, 6:25 PM IST

ತನ್ನ ಮಗುವನ್ನು ಕಂಕುಳಿನಲ್ಲಿ ಇರಿಸಿಕೊಂಡು ಕೆಲಸ ಮಾಡುತ್ತಿರುವ ಮಹಿಳಾ ಕಾನ್ಸ್ಟೇಬಲ್
- News18 Kannada
- Last Updated: March 2, 2020, 6:25 PM IST
ನವದೆಹಲಿ(ಮಾ.02): ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರು ತನ್ನ ಕಂಕುಳಿನಲ್ಲಿ ಒಂದೂವರೆ ವರ್ಷದ ಪುಟ್ಟ ಮಗು ಇರಿಸಿಕೊಂಡು ಕರ್ತವ್ಯ ನಿಭಾಯಿಸಿದ ಅಪರೂಪದ ಘಟನೆ ಉತ್ತಪ್ರದೇಶದಲ್ಲಿ ಕಂಡು ಬಂದಿದೆ. ಹೀಗೆ ವೃತ್ತಿ ಮತ್ತು ಕುಟುಂಬ ಎರಡನ್ನೂ ಒಟ್ಟಿಗೆ ಸಮರ್ಥವಾಗಿ ನಿಭಾಯಿಸಿದ ಮಹಿಳಾ ಕಾನ್ಸ್ಟೇಬಲ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಉತ್ತರಪ್ರದೇಶದ ನೋಯ್ಡಾದಲ್ಲಿ ಸರ್ಕಾರದಿಂದ ಕಾರ್ಯಕ್ರಮವೊಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಸಿಎಂ ಕಾರ್ಯಕ್ರಮದಲ್ಲಿ ಭದ್ರತೆಗಾಗಿ ಹಲವು ಪೊಲೀಸರನ್ನು ನಿಯೋಜಿಸಲಾಗಿಯತ್ತು. ಇಲ್ಲಿನ ಭದ್ರತೆಗಾಗಿ ನೆರೆದಿದ್ದ ಪೊಲೀಸರ ಪೈಕಿ ಪ್ರಮುಖ ಆಕರ್ಷಣೆಯಾಗಿ ಕಂಡದ್ದು ಕಾನ್ಸ್ಟೆಬಲ್ ಪ್ರೀತಿ ರಾಣಿ. ಕಾನ್ಸ್ಟೇಬಲ್ ಪ್ರೀತಿ ರಾಣಿ ಎಂಬುವರು ತನ್ನ ಕಂಕುಳಿನಲ್ಲಿ ಒಂದೂವರೆ ವರ್ಷದ ಪುಟ್ಟ ಮಗು ಇರಿಸಿಕೊಂಡು ಕರ್ತವ್ಯ ನಿಭಾಯಿಸಿದರು. ಈ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಎಲ್ಲರಿಗೂ ಮಾದರಿಯಾಗಿ ಕಂಡರು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಕಾನ್ಸ್ಟೇಬಲ್ ಪ್ರೀತಿ ರಾಣಿ, ಮಗುವಿನ ರಕ್ಷಣೆ ಮತ್ತು ಕಾರ್ಯಕ್ರಮದ ಭದ್ರತೆ ನಮ್ಮ ಕರ್ತವ್ಯ. ಮಗುವಿನ ತಂದೆ ಪರೀಕ್ಷೆ ಬರೆಯಲು ಹೋಗಿದ್ದಾರೆ. ಹಾಗಾಗಿ ಮಗುವನ್ನು ಇಲ್ಲಿಗೆ ಕರೆದುಕೊಂಡು ಬರಬೇಕಾದ ಅನಿವಾರ್ಯ ಪರಿಸ್ಥಿತಿ. ಮಗುವಿನಷ್ಟೇ ನನಗೆ ಕರ್ತವ್ಯ ಮುಖ್ಯ ಎಂದರು.
ಇದನ್ನೂ ಓದಿ: ಓಮರ್ ಅಬ್ದುಲ್ಲಾರಿಂದ ಸಾರ್ವಜನಿಕ ವ್ಯವಸ್ಥೆಗೆ ಅಪಾಯ: ಸುಪ್ರೀಂಗೆ ತಿಳಿಸಿದ ಜಮ್ಮು-ಕಾಶ್ಮೀರ ಸರ್ಕಾರ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ದಿನಗಳ ಕಾಲ ಉತ್ತಪ್ರಪದೇಶದ ನೋಯ್ಡಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, 1,452 ಕೋಟಿ ರೂ. ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.
ಉತ್ತರಪ್ರದೇಶದ ನೋಯ್ಡಾದಲ್ಲಿ ಸರ್ಕಾರದಿಂದ ಕಾರ್ಯಕ್ರಮವೊಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಸಿಎಂ ಕಾರ್ಯಕ್ರಮದಲ್ಲಿ ಭದ್ರತೆಗಾಗಿ ಹಲವು ಪೊಲೀಸರನ್ನು ನಿಯೋಜಿಸಲಾಗಿಯತ್ತು. ಇಲ್ಲಿನ ಭದ್ರತೆಗಾಗಿ ನೆರೆದಿದ್ದ ಪೊಲೀಸರ ಪೈಕಿ ಪ್ರಮುಖ ಆಕರ್ಷಣೆಯಾಗಿ ಕಂಡದ್ದು ಕಾನ್ಸ್ಟೆಬಲ್ ಪ್ರೀತಿ ರಾಣಿ.

ತನ್ನ ಮಗುವನ್ನು ಕಂಕುಳಿನಲ್ಲಿ ಇರಿಸಿಕೊಂಡು ಕೆಲಸ ಮಾಡುತ್ತಿರುವ ಮಹಿಳಾ ಕಾನ್ಸ್ಟೇಬಲ್
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಕಾನ್ಸ್ಟೇಬಲ್ ಪ್ರೀತಿ ರಾಣಿ, ಮಗುವಿನ ರಕ್ಷಣೆ ಮತ್ತು ಕಾರ್ಯಕ್ರಮದ ಭದ್ರತೆ ನಮ್ಮ ಕರ್ತವ್ಯ. ಮಗುವಿನ ತಂದೆ ಪರೀಕ್ಷೆ ಬರೆಯಲು ಹೋಗಿದ್ದಾರೆ. ಹಾಗಾಗಿ ಮಗುವನ್ನು ಇಲ್ಲಿಗೆ ಕರೆದುಕೊಂಡು ಬರಬೇಕಾದ ಅನಿವಾರ್ಯ ಪರಿಸ್ಥಿತಿ. ಮಗುವಿನಷ್ಟೇ ನನಗೆ ಕರ್ತವ್ಯ ಮುಖ್ಯ ಎಂದರು.
ಇದನ್ನೂ ಓದಿ: ಓಮರ್ ಅಬ್ದುಲ್ಲಾರಿಂದ ಸಾರ್ವಜನಿಕ ವ್ಯವಸ್ಥೆಗೆ ಅಪಾಯ: ಸುಪ್ರೀಂಗೆ ತಿಳಿಸಿದ ಜಮ್ಮು-ಕಾಶ್ಮೀರ ಸರ್ಕಾರ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ದಿನಗಳ ಕಾಲ ಉತ್ತಪ್ರಪದೇಶದ ನೋಯ್ಡಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, 1,452 ಕೋಟಿ ರೂ. ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.