• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • Chetan Sharma: ಬಿಸಿಸಿಐ ಮುಖ್ಯ ಆಯ್ಕೆಗಾರ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ, ಧೋನಿಯತ್ತ ಮುಖ ಮಾಡಿದ BCCI

Chetan Sharma: ಬಿಸಿಸಿಐ ಮುಖ್ಯ ಆಯ್ಕೆಗಾರ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ, ಧೋನಿಯತ್ತ ಮುಖ ಮಾಡಿದ BCCI

ಚೇತನ್ ಶರ್ಮಾ

ಚೇತನ್ ಶರ್ಮಾ

Chetan Sharma: ಭಾರತದ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಅವರು ಕುಟುಕು ಕಾರ್ಯಾಚರಣೆಯಲ್ಲಿ ಅನೇಕ ವಿಚಾರಗಳನ್ನು ಹೇಳಿದ ಬೆನ್ನಲ್ಲೇ ಇದೀಗ ಅವರು ರಾಜೀನಾಮೆ ನೀಡಿದ್ದಾರೆ.

  • Share this:

ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ (Chetan Sharma) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಅವರು ಸ್ಟ್ರಿಂಗ್​ ಅಪರೇಷನ್​ ಸಮಯದಲ್ಲಿ ನೀಡಿದ ಹೇಳಿಕೆ ಮೂಲಕ ವಿವಾದಕ್ಕೆ ಒಳಗಾಗಿದ್ದರು. ಭಾರತದ ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ, ಭಾರತೀಯ ಆಟಗಾರರು ಗಾಯವನ್ನು ಮರೆಮಾಡಲು ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli ) ಸುಳ್ಳುಗಾರ ಎಂದು ಕರೆದಿದ್ದರು. ಅಂದಿನಿಂದ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಅವರು ತಮ್ಮ ರಾಜೀನಾಮೆಯನ್ನು ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ. ಅವರು ಎರಡನೇ ಬಾರಿಗೆ ಮುಖ್ಯ ಆಯ್ಕೆಗಾರರಾಗಿ ಆಯ್ಕೆ ಆಗಿದ್ದರು.


ಚೇತನ್ ಶರ್ಮಾ ರಾಜೀನಾಮೆ:


ಸುದ್ದಿ ಸಂಸ್ಥೆ ANI ಪ್ರಕಾರ, ಚೇತನ್ ಶರ್ಮಾ ಅವರು ತಮ್ಮ ರಾಜೀನಾಮೆಯನ್ನು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದಾರೆ, ಅದನ್ನು ಅಂಗೀಕರಿಸಲಾಗಿದೆ. 2022ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ನಂತರ, ಬಿಸಿಸಿಐ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಆಗಲೂ ಚೇತನ್ ಶರ್ಮಾ ಮುಖ್ಯ ಆಯ್ಕೆಗಾರರಾಗಿದ್ದರು. ಇದಾದ ಬಳಿಕ ಅವರಿಗೆ ಮತ್ತೆ ಈ ಜವಾಬ್ದಾರಿ ಸಿಕ್ಕಿತ್ತು. ಆದರೆ ಇದಾದ ಬಳಿಕ ವಿವಾದದಿಂದಾಗಿ ಕುರ್ಚಿ ಕಳೆದುಕೊಳ್ಳಬೇಕಾಯಿತು.



ಬಿಸಿಸಿಐ ಅಧ್ಯಕ್ಷ ಗಂಗೂಲಿಯಿಂದಾಗಿ ನಾಯಕತ್ವ ಹೋಯಿತು ಎಂದು ವಿರಾಟ್ ಕೊಹ್ಲಿ ಭಾವಿಸಿದ್ದರು ಎಂದು ಚೇತನ್ ಶರ್ಮಾ ಅವರು ಕುಟುಕು ಕಾರ್ಯಾಚರಣೆಯಲ್ಲಿ ಹೇಳಿದ್ದರು. ಇದನ್ನು ಅವರಿಗೆ ತಿಳಿಸಿದಾಗ ಇನ್ನೂ 9 ಜನ ಸದಸ್ಯರಿದ್ದರು. ಆಗ ಸೌರವ್ ಗಂಗೂಲಿ ನಾಯಕತ್ವ ತೊರೆಯುವ ಮುನ್ನ ಯೋಚಿಸಿ ಎಂದು ಹೇಳಿದ್ದರು. ಅವರು ಈ ಬಗ್ಗೆ ಗಮನ ಹರಿಸಲಿಲ್ಲ. ನಂತರ ಈ ವಿಚಾರವಾಗಿ ಮಾಧ್ಯಮಗಳಲ್ಲಿ ಸುಳ್ಳು ಹೇಳಿದ್ದರು ಎಂದು ಹೇಳುವ ಮೂಲಕ ಹೊಸ ಸಂಚಲನ ಮೂಡಿಸಿದ್ದರು.


ಇದನ್ನೂ ಓದಿ: CSK 2023: ಐಪಿಎಲ್​ ಆರಂಭಕ್ಕೂ ಮುನ್ನ ಚೆನ್ನೈ ತಂಡಕ್ಕೆ ಆಘಾತ, ಸಂಪೂರ್ಣ ಟೂರ್ನಿಯಿಂದಲೇ ಸ್ಟಾರ್​ ಬೌಲರ್​ ಔಟ್​!


ಚುಚ್ಚುಮದ್ದು ವಿವಾದ:


ಚೇತನ್ ಶರ್ಮಾ, ಟೀಂ ಇಂಡಿಯಾ ಆಟಗಾರರು ಶೇಕಡಾ 80 ರಷ್ಟು ಫಿಟ್ ಆಗಿರುವಾಗ ಚುಚ್ಚುಮದ್ದು ತೆಗೆದುಕೊಳ್ಳುವ ಮೂಲಕ 100 ಪ್ರತಿಶತ ಫಿಟ್ ಎಂದು ಸಾಬೀತುಪಡಿಸುತ್ತಾರೆ ಎಂದು ಹೇಳಿದ್ದರು. ಅದರಲ್ಲಿ ಪೆನ್ ಕಿಲ್ಲರ್ ಇಲ್ಲದಿದ್ದರೂ. ಈ ಕಾರಣದಿಂದಾಗಿ ಅವರು ಡೋಪ್ ನಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಹೇಳಿದ್ದರು. ಬಿಸಿಸಿಐ ಹೊರತಾಗಿ, ದೊಡ್ಡ ಕ್ರಿಕೆಟಿಗರು ತಮ್ಮದೇ ಆದ ವೈದ್ಯರನ್ನು ಹೊಂದಿದ್ದಾರೆ ಎಂದು ಅವರು ಹೇಳಿಕೊಂಡಿದ್ದರು. ಹಾಗೆ ಮಾಡಲು ಈ ವೈದ್ಯರು ಅವರಿಗೆ ಸಹಾಯ ಮಾಡುತ್ತಾರೆ ಎನ್ನುವ ಮೂಲಕ ಹೊಸ ವಿವಾದ ಸೃಷ್ಟಿಯಾಗಿತ್ತು.




ಆಯ್ಕೆಗಾರರ ಸಮಿತಿಗೆ ಧೋನಿ ಆಯ್ಕೆ:


ಇದೀಗ ಚೇತನ್ ಶರ್ಮಾ ಆಯ್ಕೆಗಾರರ ಸಮೀತಿಗೆ ರಾಜೀನಾಮೆ ನೀಡಿದ ಹಿನ್ನಲೆ ಅವರ ಸ್ಥಾನಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರನ್ನು ಬಿಸಿಸಿಐ ಆಯ್ಕೆ ಮಾಡಬೇಕು ಎಂಬ ಮಾತುಗಳು ಕೇಳಿಬರುತ್ತಿದೆ. ಅಲ್ಲದೇ ಬಿಸಿಸಿಐ ಮೂಲಗಳ ಪ್ರಕಾರ ಆಯ್ಕೆ ಸಮೀತಿ ಅಧ್ಯಕ್ಷರಾಗಿ ಧೋನಿ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

Published by:shrikrishna bhat
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು