ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ (Shreyas Iyer) ಬಗ್ಗೆ ಬಿಸಿಸಿಐ (BCCI) ವೈದ್ಯಕೀಯ ತಂಡ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಬಿಸಿಸಿಐ ನೀಡಿರುವ ಅಪ್ಡೇಟ್ ಪ್ರಕಾರ, ಬುಮ್ರಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಪುನರ್ವಸತಿ ಆರಂಭಿಸಿದ್ದಾರೆ. ಬುಮ್ರಾ ಇತ್ತೀಚೆಗೆ ನ್ಯೂಜಿಲೆಂಡ್ನಲ್ಲಿ ಬೆನ್ನಿನ ಕೆಳಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಅದು ಯಶಸ್ವಿಯಾಗಿದೆ. ಅಂದಿನಿಂದ ಅವರಿಗೆ ಯಾವುದೇ ನೋವು ಇಲ್ಲ. ಅದೇ ಸಮಯದಲ್ಲಿ, ಶ್ರೇಯಸ್ ಅಯ್ಯರ್ ಅವರು ಮುಂದಿನ ವಾರ ಕೆಳ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ. ಜೊತೆಗೆ ಅದರ ನಂತರ NCA ಸೇರಿಕೊಳ್ಳಲಿದ್ದಾರೆ. ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ವಿಶ್ವಕಪ್ಗೆ ಮೊದಲು ಬುಮ್ರಾ ಫಿಟ್ ಆಗಬಹುದು ಎಂದು ಬಿಸಿಸಿಐ ತಿಳಿಸಿದೆ. ಬಿಸಿಸಿಐ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ಅಧಿಕೃತವಾಗಿ ಬಿಡುಗಡೆ ಮಾಡಿದೆ.
ಬಿಸಿಸಿಐ ಬಿಗ್ ಅಪ್ಡೇಟ್:
ಬಿಸಿಸಿಐ ಬಿಡುಗಡೆ ಮಾಡಿದ ವೈದ್ಯಕೀಯ ಅಪ್ಡೇಟ್ನಲ್ಲಿ, ಜಸ್ಪ್ರೀತ್ ಬುಮ್ರಾ ನ್ಯೂಜಿಲೆಂಡ್ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ, ಅದು ಯಶಸ್ವಿಯಾಗಿದೆ ಮತ್ತು ಅವರು ನೋವು ಅನುಭವಿಸುತ್ತಿಲ್ಲ. 6 ವಾರಗಳ ಶಸ್ತ್ರಚಿಕಿತ್ಸೆಯ ನಂತರ ಪುನರ್ವಸತಿ ಪ್ರಾರಂಭಿಸಲು ತಜ್ಞರು ಬುಮ್ರಾಗೆ ಸಲಹೆ ನೀಡಿದ್ದರು. ಇದಾದ ಬಳಿಕ ಬುಮ್ರಾ ಶುಕ್ರವಾರದಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್ ಆರಂಭಿಸಿದ್ದಾರೆ ಎಂದು ತಿಳಿಸಿದೆ.
🚨 NEWS 🚨
Medical Update: Jasprit Bumrah and Shreyas Iyer
Details 🔽 #TeamIndiahttps://t.co/LKYAQi5SIn
— BCCI (@BCCI) April 15, 2023
ಇದನ್ನೂ ಓದಿ: RCB vs DC: ಆರ್ಸಿಬಿ ತಂಡದ ಪರ ಕಣಕ್ಕಿಳಿದ ಕನ್ನಡಿಗ, ಐಪಿಎಲ್ಗೆ ಪಾದಾರ್ಪಣೆ ಮಾಡಿದ ವೈಶಾಖ್
ಕಳೆದ ವರ್ಷದಿಂದ ಬುಮ್ರಾ ಮೈದಾನದಿಂದ ದೂರ:
ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಅಕ್ಟೋಬರ್ನಿಂದ ಕ್ರಿಕೆಟ್ ಮೈದಾನದಿಂದ ದೂರವಾಗಿದ್ದಾರೆ. ಅವರು ಕಳೆದ ವರ್ಷ ಟಿ20 ವಿಶ್ವಕಪ್ನಿಂದ ವಂಚಿತರಾಗಿದ್ದರು ಮತ್ತು ಜೂನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಿಂದಲೂ ತಪ್ಪಿಸಿಕೊಳ್ಳಲಿದ್ದಾರೆ. ಅಲ್ಲದೇ ಇಂಜುರಿ ಸಮಸ್ಯೆಯಿಂದ ಬುಮ್ರಾ ಐಪಿಎಲ್ 2023ರ 16ನೇ ಸೀಸನ್ನಿಂದಲೂ ಹೊರಗುಳಿದಿದ್ದಾರೆ.
ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೆಳ ಬೆನ್ನಿನ ಗಾಯದಿಂದ ಚೇತರಿಸಿಕೊಂಡ ನಂತರ ಶ್ರೇಯಸ್ ಅಯ್ಯರ್ ಪುನರಾಗಮನ ಮಾಡಿದರು. ಆದರೆ, ಈ ಟೆಸ್ಟ್ ಸರಣಿಯಲ್ಲಿ ಅವರ ಹಳೆಯ ನೋವು ಮತ್ತೆ ಕಾಣಿಸಿಕೊಂಡಿತು. ಈ ಕಾರಣಕ್ಕಾಗಿ, ಅವರು ಸಂಪೂರ್ಣ ಟೆಸ್ಟ್ ಸರಣಿಯನ್ನು ಸಹ ಆಡಲು ಸಾಧ್ಯವಾಗಲಿಲ್ಲ ಮತ್ತು ಐಪಿಎಲ್ನಿಂದಲೂ ಹೊರಗುಳಿದಿದ್ದರು. ನಿತೀಶ್ ರಾಣಾ ಅವರ ಬದಲಿಗೆ ಐಪಿಎಲ್ 2023 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಅವರು ಭಾಗವಹಿಸುವ ನಿರೀಕ್ಷೆಯಿಲ್ಲ. ಆದರೆ ಈ ಇಬ್ಬರೂ ಆಟಗಾರರು ಮುಂಬರಲಿರುವ ಐಸಿಸಿ ಏಕದಿನ ವಿಶ್ವಕಪ್ ವೇಳೆಗೆ ಮತ್ತೆ ಟೀಂ ಇಂಡಿಯಾಗೆ ಮರಳುವ ಸೂಚನೆ ನೀಡಿದ್ದಾರೆ. ಈ ಮೂಲಕ ಐಪಿಎಲ್ ನಡುವೆ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಸಿಕ್ಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ