ಕೋಲ್ಕತಾ(ಜ. 02): ಬಿಸಿಸಿಐ ಅಧ್ಯಕ್ಷ, ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರಿಗೆ ಹೃದಯಾಘಾತವಾಗಿರುವ ಮಾಹಿತಿ ಬಂದಿದ್ದು, ಅವರನ್ನು ಇಲ್ಲಿಯ ವುಡ್ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ಶನಿವಾರ ಬೆಳಗ್ಗೆ ವರ್ಕೌಟ್ ಮಾಡುವ ವೇಳೆ ಅವರಿಗೆ ತಲೆಸುತ್ತು ಬಂದಿದೆ. ಎದೆ ನೋವು ಕೂಡ ಕಾಣಿಸಿಕೊಂಡು, ನಂತರ ಅವರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಯಾವ ಕಾರಣಕ್ಕೆ ಎದೆ ನೋವು ಕಾಣಿಸಿಕೊಂಡಿತು ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಇಇಜಿ, ಇಸಿಜಿ, ಇಸಿಒ ಕಾರ್ಡಿಯೋಗ್ರಫಿ ಸೇರಿದಂತೆ ವಿವಿಧ ಹೃದಯಸಂಬಂಧಿ ಪರೀಕ್ಷೆಗಳನ್ನ ನಡೆಸಲಾಗಿದೆ. ಇಸಿಒ ಕಾರ್ಡಿಯೋಗ್ರಫಿ ಪರೀಕ್ಷೆಯ ವರದಿ ಪ್ರಕಾ ಅವರಿಗೆ ಸಣ್ಣದಾಗಿ ಹೃದಯಾಘಾತವಾಗಿದೆ. ಆಸ್ಪತ್ರೆ ಕಡೆಯಿಂದ ಅಧಿಕೃತ ಮಾಹಿತಿ ಬರಬೇಕಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಚಿಕಿತ್ಸೆಗಾಗಿ ವುಡ್ಲ್ಯಾಂಡ್ಸ್ ಆಸ್ಪತ್ರೆಯ 5 ಸದಸ್ಯರ ವೈದ್ಯಕೀಯ ತಂಡವೊಂದನ್ನ ರಚಿಸಲಾಗಿದೆ. ಗಂಗೂಲಿ ಅವರಿಗೆ ಮೈಕಾರ್ಡಿಯಲ್ ಸೋಂಕು ತಗುಲಿರಬಹುದು ಎಂಬುದು ವೈದ್ಯರ ಶಂಕೆ.
ಮೂರು ದಿನಗಳ ಹಿಂದೆ ಅವರು ಈಡನ್ ಗಾರ್ಡನ್ಸ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಅವಿಷೇಕ್ ದಾಲ್ಮಿಯಾ ಅವರೊಂದಿಗೆ ಸಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಗಳ ಆಯೋಜನೆ ಬಗ್ಗೆ ಚರ್ಚೆ ನಡೆಸಿ ಸಿದ್ಧತೆಗಳನ್ನ ಪರಿಶೀಲಿಸಿದ್ದರು.
ಇದನ್ನೂ ಓದಿ: ಇದೇ ಮೊದಲ ಬಾರಿಗೆ ಜಾಹೀರಾತುವಿನಲ್ಲಿ ಕಾಣಿಸಿಕೊಂಡ ಧೋನಿ ಮಗಳು ಝೀವಾ: ಇಲ್ಲಿದೆ ವಿಡಿಯೋ
ಇದೇ ವೇಳೆ, ಆಸ್ಪತ್ರೆಗೆ ದಾಖಲಾಗಿರುವ ಸೌರವ್ ಗಂಗೂಲಿ ಅವರಿಗೆ ಶುಭಕೋರಿ ಹಲವರು ಟ್ವೀಟ್ ಮಾಡಿದ್ದಾರೆ. ಅನಿಲ್ ಕುಂಬ್ಳೆ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಗಂಗೂಲಿ ಆರೋಗ್ಯ ಚೇತರಿಕೆಗೆ ಹಾರೈಸಿದ್ದಾರೆ. ಬಂಗಾಳದ ಹಲವು ಕ್ರಿಕೆಟಿಗರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಲವು ಬಿಜೆಪಿ ಮುಖಂಡರು ಗಂಗೂಲಿ ಆರೋಗ್ಯಕ್ಕೆ ಪ್ರಾರ್ಥನೆ ಮಾಡಿದ್ದಾರೆ.
Sourav Ganguly is stable haemodynamically. He has received loading doses of dual anti platelets and statin and is undergoing primary angioplasty now: Dr Rupali Basu, MD & CEO, Woodlands https://t.co/neXSwr5UUG
— ANI (@ANI) January 2, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ