ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಗೆಲ್ಲುವ ಫೇವರೇಟ್ ತಂಡವೆನಿಸಿಕೊಂಡಿದ್ದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋಲನುಭವಿಸಿತು. ಸೌತಂಪ್ಟನ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 8 ವಿಕೆಟ್ಗಳಿಂದ ಬಗ್ಗು ಬಡಿದು ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಡೆ ಚೊಚ್ಚಲ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಇದಾಗಿ ವಾರಗಳೇ ಕಳೆದರೂ ಫೈನಲ್ ಪಂದ್ಯದ ಕುರಿತಾದ ಚರ್ಚೆಗಳು ಮುಂದುವರೆದಿದೆ. ಅದರಲ್ಲೂ ಭಾರತ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈಚೆಲ್ಲಿಕೊಂಡಿತು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್, ಸೋಲಿಗೆ ಪ್ರಮುಖ ಕಾರಣವನ್ನು ವಿಶ್ಲೇಷಿಸಿದ್ದಾರೆ. ಪಠಾಣ್ ಪ್ರಕಾರ ಭಾರತ ಫೈನಲ್ ಪಂದ್ಯದಲ್ಲಿ ಸೋಲಲು ಮುಖ್ಯ ಕಾರಣ ಕಡಿಮೆ ಬ್ಯಾಟ್ಸ್ಮನ್ಗಳೊಂದಿಗೆ ಕಣಕ್ಕಿಳಿದಿರುವುದು. ತಂಡದಲ್ಲಿ ಹೆಚ್ಚುವರಿ ಬ್ಯಾಟ್ಸ್ಮನ್ ಇದ್ದಿದ್ದರೆ ಭಾರತಕ್ಕೆ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಅವಕಾಶವಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ ಇರ್ಫಾನ್ ಪಠಾಣ್.
ಭಾರತ ತಂಡವು ಆಲ್ರೌಂಡರ್ನೊಂದಿಗೆ ಕಣಕ್ಕಿಳಿದಿತ್ತು. ಆದರೆ ನ್ಯೂಜಿಲೆಂಡ್ ತಂಡದಲ್ಲಿದ್ದಂತೆ ವೇಗದ ಬೌಲರ್ ಹೊಂದಿರುವ ಆಲ್ರೌಂಡರ್ ಭಾರತ ತಂಡದಲ್ಲಿರಲಿಲ್ಲ. ಇದಾಗ್ಯೂ ಭಾರತ ಮೊದಲ ಇನಿಂಗ್ಸ್ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿತು ಎನ್ನಬಹುದು. ಆದರೆ ಎರಡನೇ ಇನಿಂಗ್ಸ್ನಲ್ಲಿ ಭಾರತದ ಬ್ಯಾಟಿಂಗ್ ನಿರಾಶಾದಾಯಕವಾಗಿತ್ತು ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.
ಏಕೆಂದರೆ ಎರಡನೇ ಇನ್ನಿಂಗ್ನಲ್ಲಿ ಚೆಂಡು ಹೆಚ್ಚು ಸ್ವಿಂಗ್ ಆಗುತ್ತಿರಲಿಲ್ಲ. ಹೀಗಾಗಿ ಭಾರತೀಯ ಬ್ಯಾಟ್ಸಮನ್ಗಳು ಹೆಚ್ಚು ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡಬೇಕಿತ್ತು. ರಿಷಭ್ ಪಂತ್ ಅತ್ಯುತ್ತಮ ಬ್ಯಾಟ್ಸ್ಮನ್ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಇದರ ಅರ್ಥ ವೇಗದ ಬೌಲರ್ಗಳಿಗೆ ಬೇಜವಾಬ್ದಾರಿಯಿಂದ ಆಡುವುದು ಎಂದರ್ಥವಲ್ಲ ಎಂದು ಇರ್ಫಾನ್ ಪಠಾಣ್ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ