• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • India vs England: ಭಾರತ-ಇಂಗ್ಲೆಂಡ್ ಟಿ-20 ಸರಣಿ ರೋಚಕತೆ ಸೃಷ್ಟಿಸಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್

India vs England: ಭಾರತ-ಇಂಗ್ಲೆಂಡ್ ಟಿ-20 ಸರಣಿ ರೋಚಕತೆ ಸೃಷ್ಟಿಸಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್

India vs England

India vs England

ಭಾರತ ಮತ್ತು ಇಂಗ್ಲೆಂಡ್ ನಡುಣ ಐದು ಪಂದ್ಯಗಳ ಟಿ-20 ಸರಣಿಗೆ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತಿಸಿದೆ.

  • Share this:

ಬೆಂಗಳೂರು (ಜ. 24): ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿಗೆ ಗೆದ್ದು ಬೀಗಿ ತವರಿಗೆ ಬಂದಿಳಿದಿರುವ ಟೀಂ ಇಂಡಿಯಾ ಸದ್ಯ ಮತ್ತೊಂದು ದೊಡ್ಡ ಸರಣಿಗೆ ಸಜ್ಜಾಗುತ್ತಿದೆ. ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸುದೀರ್ಘ ಸರಣಿಯಲ್ಲಿ 4 ಟೆಸ್ಟ್ ಪಂದ್ಯ, 5 ಟಿ-20 ಪಂದ್ಯಗಳು ಮತ್ತು 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಫೆಬ್ರವರಿ 5 ರಿಂದ ಚೆನ್ನೈನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್​ ಪಂದ್ಯ ಆರಂಭವಾಗುವ ಮೂಲಕ ಚಾಲನೆ ಸಿಗಲಿದೆ. ಟೆಸ್ಟ್ ಪಂದ್ಯಗಳು ಪ್ರೇಕ್ಷಕರಿಲ್ಲದೆ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಇದಕ್ಕೆ ಅಭಿಮಾನಿಗಳು ತುಂಬಾನೆ ಬೇಸರ ವ್ಯಕ್ತಪಡಿಸಿದ್ದರು.


ಸದ್ಯ ಟೆಸ್ಟ್​ ಸರಣಿ ಪ್ರೇಕ್ಷಕರಿಲ್ಲದೆ ನಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಟಿ-20 ಸರಣಿಯ ಹೈವೋಲ್ಟೇಜ್ ಪಂದ್ಯಕ್ಕೆ ಬಿಸಿಸಿಐ ಪ್ಲ್ಯಾನ್ ಮಾಡಿದೆ. ಐದು ಪಂದ್ಯಗಳ ಟಿ-20 ಸರಣಿಗೆ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತಿಸಿದೆ.


IPL 2021 Auction: ಹರಾಜಿನಲ್ಲಿ ಈ ವಿಶ್ವಶ್ರೇಷ್ಠ ಆಟಗಾರನನ್ನು ಖರೀದಿಸಲು ಕಣ್ಣಿಟ್ಟಿದೆ RCB?


ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, “ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ-20 ಸರಣಿಗೆ ಸ್ಟೇಡಿಯಂನಲ್ಲಿ ಶೆ. 50ರಷ್ಟು ಪ್ಲೇಕ್ಷಕರನ್ನು ಕರೆತರಲು ನಾವು ಮುಂದಾಗಿದ್ದೇವೆ. ಆದರೆ, ಇದರ ಅಂತಿಮ ತೀರ್ಮಾನವನ್ನು ನಾವು ಸರ್ಕಾರಕ್ಕೆ ಬಿಟ್ಟಿದ್ದೇವೆ“ ಎಂದು ಬಿಸಿಸಿಐ ಖಚಿತ ಮೂಲಗಳಿಂದ ತಿಳಿದುಬಂದಿದೆ.


ಫೆಬ್ರವರಿ 5 ರಿಂದ ಚೆನ್ನೈನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು, 13 ರಿಂದ 17 ರ ವರೆಗೆ 2ನೇ ಪಂದ್ಯ ನಡೆಯಲಿದೆ. ಫೆಬ್ರವರಿ 24 ರಿಂದ 28 ವರೆಗೆ ಅಹಮದಾವಾದ್​ನಲ್ಲಿ 3ನೇ ಟೆಸ್ಟ್ ಮತ್ತು ಮಾರ್ಚ್ 4 ರಿಂದ 8 ವರೆಗೆ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ನಂತರ ಅಹಮದಾಬಾದ್‌ನಲ್ಲಿ ಐದು ಪಂದ್ಯಗಳ ಟಿ-20 ಸರಣಿ ಮತ್ತು ಪುಣೆಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.


IPL 2021: ಈ ಬಾರಿಯ ಐಪಿಎಲ್ ಬಾರತದಲ್ಲೋ? ಅಥವಾ ಯುಎಇನಲ್ಲೋ?: ಹೊರಬಿತ್ತು ಮಾಹಿತಿ


ನಿನ್ನೆಯಷ್ಟೆ ತಮಿಳುನಾಡು ಕ್ರಿಕೆಟ್ ಸಂಸ್ಥೆ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳು ಪ್ರೇಕ್ಷಕರಿಲ್ಲದೆ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿವೆ ಎಂದು ಖಚಿತ ಪಡಿಸಿತ್ತು.  “ಬಿಸಿಸಿಐ ಮಾರ್ಗಸೂಚಿಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲೇ ಬಿಸಿಸಿಐ ಎಸ್‌ಒಪಿ ಸಿದ್ಧಪಡಿಸಿತ್ತು. ಬಿಸಿಸಿಐ ಮಾರ್ಗಸೂಚಿಯಂತೆ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅನುಮತಿ ನೀಡಲಾಗುತ್ತಿಲ್ಲ” ಎಂದು ಟಿಎನ್‌ಸಿಎ ಕಾರ್ಯದರ್ಶಿ ಆರ್.ಎಸ್ ರಾಮಸ್ವಾಮಿ ತಿಳಿಸಿದ್ದರು.


ಇನ್ನೂ ಇಂಗ್ಲೆಂಡ್ ಸರಣಿಗೆ ಮುಂಚಿತವಾಗಿ ಭಾರತ ತಂಡದ ಆಟಗಾರರು ಒಂದು ವಾರಗಳ ಕಾಲ ಕ್ಯಾರಂಟೈನ್‌ನಲ್ಲಿ ಕಳೆಯಲಿದ್ದು, ಈ ಸಂದರ್ಭದಲ್ಲಿ ಅವರು ಇಂಗ್ಲೆಂಡ್ ವಿರುದ್ಧ ತಮ್ಮ ಮಾರ್ಗವನ್ನು ಯೋಜಿಸಲಿದ್ದಾರೆ ಎಂದು ತಂಡದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

First published: