ಬೆಂಗಳೂರು (ಡಿ. 14): ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಸದ್ಯ ಏಕದಿನ ಸರಣಿಗೆ ಸಜ್ಜಾಗುತ್ತಿದೆ. ಇದಕ್ಕಾಗಿ ಈಗಾಗಲೇ ಕೊಹ್ಲಿ ಪಡೆ ಚೆನ್ನೈ ತಲುಪಿದೆ. ಆದರೆ, ಮೊದಲ ಪಂದ್ಯ ಆರಂಭಕ್ಕೂ ಮುನ್ನ ಭಾರತಕ್ಕೆ ಮಗದೊಂದು ಆಘಾತ ಉಂಟಾಗಿದೆ.
ಈಗಾಗಲೇ ಇಂಜುರಿಯಿಂದ ಗುಣಮುಖರಾಗದ ಕಾರಣ ಶಿಖರ್ ಧವನ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಇವರ ಬದಲು ಮಯಾಂಕ್ ಅಗರ್ವಾಲ್ಗೆ ಅವಕಾಶ ಕಲ್ಪಿಸಲಾಗಿದೆ.
IND vs WI: ನಾಳೆ ಮೊದಲ ಏಕದಿನ ಫೈಟ್; ಟೀಂ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ
ಹೀಗಿರುವಾಗ ಟೀಂ ಇಂಡಿಯಾದ ಮತ್ತೊಬ್ಬ ಪ್ರಮುಖ ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ವಿಂಡೀಸ್ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ.
ಸ್ನಾಯು ಸೆಳೆತಕ್ಕೊಳಗಾಗಿರುವ ಭುವಿ ವಿಂಡೀಸ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ತಿಳಿಸಿದ್ದು, ಭುವಿ ಜಾಗಕ್ಕೆ ಶಾರ್ದೂಲ್ ಠಾಕೂರ್ಗೆ ಅವಕಾಶ ನೀಡಲಾಗಿದೆ.
UPDATE 📰: @imShard to replace
Bhuvneshwar Kumar in #TeamIndia squad for the @Paytm ODI series starting tomorrow in Chennai against the West Indies. #INDvWI
Details - https://t.co/bZyscTF1Dk pic.twitter.com/9ow10ojUti
— BCCI (@BCCI) December 14, 2019
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ