IPL 2019, Qualifier 1: ಪಂದ್ಯ ಆರಂಭಕ್ಕೂ ಮುನ್ನ ಧೋನಿ ಪಡೆಗೆ ದೊಡ್ಡ ಆಘಾತ!

ಎಂ ಎಸ್ ಧೋನಿ (CSK ತಂಡದ ನಾಯಕ)

ಎಂ ಎಸ್ ಧೋನಿ (CSK ತಂಡದ ನಾಯಕ)

IPL 2019, MI vs CSK: ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ಮುಂಬೈ ಇಂಡಿಯನ್ಸ್​ ತಂಡ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ಗೆ ಸವಾಲೊಡ್ಡಲಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಸಿಎಸ್​​ಕೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

  • News18
  • 3-MIN READ
  • Last Updated :
  • Share this:

ಚೆನ್ನೈ (ಮೇ. 07): ಐಪಿಎಲ್ 12ನೇ ಆವೃತ್ತಿ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಲೀಗ್ ಹಂತದ ಎಲ್ಲ ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿವೆ. ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಎಂ ಚಿದಂಬರಂ ಕ್ರೀಡಾಂಗಣ ಸಜ್ಜಾಗಿದೆ. ಮೊದಲ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್​ ತಂಡ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ಗೆ ಸವಾಲೊಡ್ಡಲಿದೆ.

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​​​ಗೆ ಅರ್ಹತೆ ಪಡೆಯಲಿದೆ. ಸೋತ ತಂಡ 2ನೇ ಕ್ವಾಲಿಫೈಯರ್​​ನಲ್ಲಿ ಎಲಿಮಿನೇಟರ್​ನಲ್ಲಿ ಗೆದ್ದ ತಂಡವನ್ನ ಎದುರಿಸಲಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೆ ಬಹುಮುಖ್ಯ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಸಿಎಸ್​​ಕೆ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.

ಸಿಎಸ್​ಕೆ ತಂಡದ ಪ್ರಮುಖ ಬ್ಯಾಟ್ಸ್​ಮನ್​​ ಕೇದರ್ ಜಾಧವ್ ಭುಜದ ನೋವಿನಿಂದ ಬಳಲುತ್ತಿದ್ದು, ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಚೆಂಡು ಬಡಿದ ಪರಿಣಾಮ ಎಡಭುಜದ ನೋವಿಗೆ ಒಳಗಾಗಿ ಜಾಧವ್ ಮೈದಾನ ತೊರೆದಿದ್ದರು. ಹೀಗಾಗಿ ಉಳಿದ ಪಂದ್ಯಗಳಿಗೆ ಜಾಧವ್ ಲಭ್ಯವಿರುವುದು ಅನುಮಾನ ಎಂದು ಹೇಳಲಾಗಿತ್ತು. ಸದ್ಯ ಅಧಿಕೃತವಾಗಿ ಈ ಮಾಹಿತಿ ಹೊರಬಿದ್ದಿದ್ದು, ಐಪಿಎಲ್​​ 12ನೇ ಆವೃತ್ತಿಯಿಂದ ಜಾಧವ್​​ಗೆ ವಿಶ್ರಾಂತಿ ನೀಡಲಾಗಿದೆ.

ಇದನ್ನೂ ಓದಿ: IPL 2019: ಕೊಹ್ಲಿ ಮೇಲಿನ ಕೋಪಕ್ಕೆ ಚಿನ್ನಸ್ವಾಮಿಯಲ್ಲಿ ಬಾಗಿಲು ಮುರಿದ ಅಂಪೈರ್

 



ಪ್ರಮುಖ ಹಂತದಲ್ಲೇ ಸ್ಟಾರ್ ಆಟಗಾರ ತಂಡ ತೊರೆದಿರುವುದು ಧೋನಿ ಪಡೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಲ್ಲದೆ ಇವರ ಬದಲು ಯಾವ ಆಟಗಾರನನ್ನು ಕಣಕ್ಕಿಳಿಸುವುದು ಎಂಬ ಗೊಂದಲ ಮುಂದಾಗಿದೆ. ಮುರಳಿ ವಿಜಯ್ ಈ ಆವೃತ್ತಿಯಲ್ಲಿ ಕೇವಲ ಒಂದು ಪಂದ್ಯವನ್ನಷ್ಟೆ ಆಡಿದ್ದರು. ಜೊತೆಗೆ ಫಾರ್ಮ್​ ವೈಫಲ್ಯ ಕೂಡ ಅನುಭವಿಸುತ್ತಿದ್ದಾರೆ. ಹೀಗಾಗಿ ಜಾಧವ್ ಜಾಗಕ್ಕೆ ಯಾವ ಆಟಗಾರನನ್ನು ಆಯ್ಕೆ ಮಾಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು