ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ವಿರುದ್ಧ ಟೀಂ ಇಂಡಿಯಾದ ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ಶಿಖರ್ ಧವನ್ ಅವರು ಆಫ್ರಿಧಿ ಹೇಳಿಕೆಗೆ ಖಡಕ್ ಉತ್ತರ ನೀಡಿದ್ದಾರೆ.
ಇತ್ತೀಚೆಗೆ ಶಾಹಿದ್ ಅಫ್ರಿದಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಆ ವೇಳೆ ಅವರು ಪಿಎಸ್ಎಲ್ ಲೀಗ್ನಲ್ಲಿ ಕಾಶ್ಮೀರಿ ತಂಡದೊಂದಿಗೆ ಆಡುತ್ತೇನೆ ಎಂದು ಹೇಳಿದ್ದರು. ನಂತರ ಕಾಶ್ಮೀರದ ಬಗ್ಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿದ್ದರು. ಮೋದಿ ಭಾರತದಲ್ಲಿ ಧಾರ್ಮಿಕ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕೊರೋನಾ ದೇಣಿಗೆಯನ್ನು ನೀಡುವ ನಿಟ್ಟಿನಲ್ಲಿ ಕಳೆದ ತಿಂಗಳು ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಅವರು ಶಾಹಿದ್ ಅಫ್ರಿದಿ ಅವರ ಫೌಂಡೇಶನ್ಗೆ ದೇಣಿಗೆ ನೀಡಿ ಎಂದು ಮನವಿ ಮಾಡಿದ್ದರು. ಈ ವಿಚಾರ ಭಾರೀ ಟೀಕೆಗೆ ಒಳಗಾಗಿತ್ತು.
ಆದರೀಗ ಭಾರತದ ಬಗ್ಗೆ ಮತ್ತು ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಅಫ್ರಿದಿ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ. ಶಾಹಿದ್ ಅಫ್ರಿದಿ ಮಾನವಿಯತೆ ಮೇರೆಗೆ ನಾನು ಮತ್ತು ಯುವರಾಜ್ ಸಿಂಗ್ ವಿಡಿಯೋ ಮಾಡಿ ಅಫ್ರಿದಿ ಫೌಂಡೇಷನ್ಗೆ ನೆರವಾಗಲು ಕೋರಿಕೊಂಡಿದ್ದೆವು. ಏಕೆಂದರೆ ವೈರಸ್ ಯಾವುದೇ ಧರ್ಮ ಅಥವಾ ಗಡಿ ನೋಡಿ ಬರುವುದಿಲ್ಲ ಎಂಬುದು ನಮ್ಮ ಭಾವನೆಯಾಗಿತ್ತು. ಆದರೀಗ ಅಫ್ರಿದಿ ಭಾರತದ ವಿರುದ್ಧ ಹೇಳಿಕೆ ನೀಡಿರುವುದರಿಂದ ನಮಗೂ ಇನ್ನು ಯಾವುದೇ ರೀತಿಯ ಸ್ನೇಹ ವಿರುವುದಿಲ್ಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
Yes NEVER AGAIN no matter what https://t.co/PZBWAEoloR
— Harbhajan Turbanator (@harbhajan_singh) May 17, 2020
ನಮ್ಮ ಪ್ರಧಾನಮಂತ್ರಿ ವಿರುದ್ಧ ಶಾಹಿದ್ ಅಫ್ರಿದಿ ಹೇಳಿಕೆ ನೀಡಿರುವುದು ನನಗೆ ಬೇಸರ ತಂದಿದೆ. ನಾನೊಬ್ಬ ಜವಬ್ದಾರಿ ನಾಗರಿಕನಾಗಿ ಮತ್ತು ದೇಶಕ್ಕಾಗಿ ಆಡಿರುವ ನಾವು ಇಂತಹ ಹೇಳಿಕೆಯನ್ನು ಸ್ವೀಕರಿಸುವುದಿಲ್ಲ. ನಾವು ಮಾನವೀಯತೆ ದೃಷ್ಠಿಯಿಂದ ನಿಮಗಾಗಿ ಮನವಿ ಮಾಡಿದ್ದೆವು. ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದಿದ್ದಾರೆ ಯುವರಾಜ್ ಸಿಂಗ್.
Really disappointed by @SAfridiOfficial‘s comments on our Hon’b PM @narendramodi ji. As a responsible Indian who has played for the country, I will never accept such words. I made an appeal on your behest for the sake of humanity. But never again.
Jai Hind 🇮🇳
— yuvraj singh (@YUVSTRONG12) May 17, 2020
Pak has 7 lakh force backed by 20 Cr ppl says 16 yr old man @SAfridiOfficial. Yet begging for Kashmir for 70 yrs. Jokers like Afridi, Imran & Bajwa can spew venom against India & PM @narendramodi ji to fool Pak ppl but won't get Kashmir till judgment day! Remember Bangladesh?
— Gautam Gambhir (@GautamGambhir) May 17, 2020
Is waqt jab saari duniya corona se lad rahi hai us waqt bhi tumko kashmir ki padi hai.
Kashmir humara tha humare hai aur humara hi rahega. Chaiyeh 22 crore le ao, humara ek, sava lakh ke barabar hai . Baaki ginti apne aap kar lena @SAfridiOfficial
— Shikhar Dhawan (@SDhawan25) May 17, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ