• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • Vijay Hazare Trophy semifinal: ಪೃಥ್ವಿ ಶಾ ಸ್ಪೋಟಕ ಶತಕ: ಕರ್ನಾಟಕಕ್ಕೆ ಬೃಹತ್ ಟಾರ್ಗೆಟ್ ನೀಡಿದ ಮುಂಬೈ

Vijay Hazare Trophy semifinal: ಪೃಥ್ವಿ ಶಾ ಸ್ಪೋಟಕ ಶತಕ: ಕರ್ನಾಟಕಕ್ಕೆ ಬೃಹತ್ ಟಾರ್ಗೆಟ್ ನೀಡಿದ ಮುಂಬೈ

prithvi shaw

prithvi shaw

ಕರ್ನಾಟಕ ತಂಡದ ಪರವಾಗಿ ವೈಶಾಕ್ ವಿಜಯ್ ಕುಮಾರ್ 4 ವಿಕೆಟ್ ಪಡೆದು ಮಿಂಚಿದರೆ, ಪ್ರಸಿಧ್ಧ್ ಕೃಷ್ಣ 3 ವಿಕೆಟ್ ಉರುಳಿಸಿದರು. ಇನ್ನು ರೋನಿತ್ ಮೋರೆ, ಶ್ರೇಯಸ್ ಗೋಪಾಲ್ ಹಾಗೂ ಕೃಷ್ಣಪ್ಪ ಗೌತಮ್ ತಲಾ 1 ವಿಕೆಟ್ ಪಡೆದರು.

  • Share this:

    ದೆಹಲಿಯ ಪಾಲಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಮುಂಬೈ ಮುಖಾಮುಖಿಯಾಗಿದೆ. ಟಾಸ್ ಸೋತರು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಮುಂಬೈ ಆರಂಭಿಕ ಆಟಗಾರ ಪೃಥ್ವಿ ಶಾ ಅವರ ಭರ್ಜರಿ ಶತಕದ ನೆರವಿನಿಂದ 322 ರನ್​ಗಳನ್ನು ಕಲೆಹಾಕಿದೆ.


    ಇದಕ್ಕೂ ಮುನ್ನ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ರವಿಕುಮಾರ್ ಸಮರ್ಥ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ 5 ಓವರ್​ನಲ್ಲಿ ಪ್ರಸಿಧ್ದ್ ಕೃಷ್ಣ ಕರ್ನಾಟಕಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಒಂದೆಡೆ ಯಶಸ್ವಿ ಜೈಸ್ವಾಲ್ (6) ಹಾಗೂ ಆದಿತ್ಯ ತಾರೆ (16) ಬೇಗನೆ ನಿರ್ಗಮಿಸಿದರೂ, ಮತ್ತೊಂದೆಡೆ ಪೃಥ್ವಿ ಶಾ ಅಬ್ಬರಿಸಲಾರಂಭಿಸಿದ್ದರು.


    ಮೂರನೇ ವಿಕೆಟ್​ಗೆ ಶಂಸ್ ಮುಲಾನಿ (45) ಜೊತೆಗೂಡಿ 159 ರನ್​ ಜೊತೆಯಾಟವಾಡಿದ ಪೃಥ್ವಿ ಶಾ ಕರ್ನಾಟಕ ಬೌಲರುಗಳನ್ನು ಚೆಂಡಾಡಿದರು. ಅಲ್ಲದೆ ಬಿರುಸಿನ ಶತಕ ಪೂರೈಸಿದರು ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದರು. ಕೇವಲ 122 ಎಸೆತಗಳನ್ನು ಎದುರಿಸಿದ ಪೃಥ್ವಿ ಶಾ 165 ರನ್ ಬಾರಿಸಿದರು. ಈ ವೇಳೆ ಯುವ ದಾಂಡಿಗನ ಬ್ಯಾಟ್​ನಿಂದ ಸಿಡಿದದ್ದು 7 ಸಿಕ್ಸರ್ ಹಾಗೂ 17 ಬೌಂಡರಿಗಳು.


    ಇತ್ತ ಶಂಸ್ ಮುಲಾನಿ (45) ಗೌತಮ್​ಗೆ ವಿಕೆಟ್ ಒಪ್ಪಿಸಿ ಹೊರನಡೆಯುತ್ತಿದ್ದಂತೆ ಅತ್ತ ಪೃಥ್ವಿ ಶಾ (165) ವೈಶಾಖ್​ಗೆ ವಿಕೆಟ್ ನೀಡಿ ತಮ್ಮ ಸ್ಪೋಟಕ ಇನಿಂಗ್ಸ್ ಅಂತ್ಯಗೊಳಿಸಿದರು. ಆದರೆ ಅದಾಗಲೇ ಪೃಥ್ವಿ ಶಾ ಮುಂಬೈ ಸ್ಕೋರ್ ಅನ್ನು 40 ಓವರ್​ನಲ್ಲಿ 243 ರನ್​ಗೆ ತಂದು ನಿಲ್ಲಿಸಿದ್ದರು. ಇನ್ನು ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ 27 ರನ್‌ಗಳ ಕೊಡುಗೆ ನೀಡಿದರೆ, ಅಮನ್ ಹಕೀಂ ಖಾನ್ 25 ರನ್‌ ಬಾರಿಸಿದರು. ಆದರೆ ನಂತರ ಬಂದ ಬ್ಯಾಟ್ಸ್​ಮನ್​ಗಳನ್ನು ಬೇಗನೆ ಪೆವಿಲಿಯನ್​ ಕಡೆ ಕಳುಹಿಸುವಲ್ಲಿ ಯಶಸ್ವಿಯಾದ ಕರ್ನಾಟಕ ಅಂತಿಮವಾಗಿ ಮುಂಬೈ ತಂಡವನ್ನು 49.2 ಓವರ್​ನಲ್ಲಿ 322 ರನ್​ಗೆ ಆಲೌಟ್ ಮಾಡಿತು.


    ಕರ್ನಾಟಕ ತಂಡದ ಪರವಾಗಿ ವೈಶಾಕ್ ವಿಜಯ್ ಕುಮಾರ್ 4 ವಿಕೆಟ್ ಪಡೆದು ಮಿಂಚಿದರೆ, ಪ್ರಸಿಧ್ಧ್ ಕೃಷ್ಣ 3 ವಿಕೆಟ್ ಉರುಳಿಸಿದರು. ಇನ್ನು ರೋನಿತ್ ಮೋರೆ, ಶ್ರೇಯಸ್ ಗೋಪಾಲ್ ಹಾಗೂ ಕೃಷ್ಣಪ್ಪ ಗೌತಮ್ ತಲಾ 1 ವಿಕೆಟ್ ಪಡೆದರು.


    ಈ ಬೃಹತ್ ಮೊತ್ತವನ್ನು ಬೆನ್ನತ್ತಿರುವ ಕರ್ನಾಟಕ 98 ರನ್​ಗೆ 4 ಪ್ರಮುಖ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

    Published by:zahir
    First published: