ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ಸ್ಪಿನ್ ಸ್ನೇಹಿ ಪಿಚ್ನಲ್ಲಿ ಭಾರತ ಎರಡೂ ಇನ್ನಿಂಗ್ಸ್ಗಳಲ್ಲಿ 109 ಮತ್ತು 163 ರನ್ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ 9 ವಿಕೆಟ್ಗಳಿಂದ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಪ್ರವೇಶಿಸಿತು. ಇಂದೋರ್ ಟೆಸ್ಟ್ ಪಂದ್ಯದ ಸೋಲಿನ ನಂತರ, ಪ್ರಸ್ತುತ ಗಾಯದಿಂದ ಬಳಲುತ್ತಿರುವ ರಿಷಭ್ ಪಂತ್ ಅವರನ್ನು ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ.
ಪಂತ್ ನೆನಪಿಸಿಕೊಂಡ ಫ್ಯಾನ್ಸ್:
ಕೆಲವು ವರ್ಷಗಳ ಹಿಂದೆ, ಅಜಿಂಕ್ಯ ರಹಾನೆ ನಾಯಕತ್ವದಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಅವರ ತವರು ನೆಲದಲ್ಲಿ ಸೋಲಿಸಿತು. ಈ ಸರಣಿಯಲ್ಲಿ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರ ಪ್ರದರ್ಶನ ಗಮನಾರ್ಹವಾಗಿತ್ತು. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಕೂಡ ಭಾರತ ತಂಡದ ಭಾಗವಾಗಿದ್ದರು. ಆದರೆ 30 ಡಿಸೆಂಬರ್ 2022ರಂದು ಅವರ ಕಾರು ಭೀಕರ ಅಪಘಾತಕ್ಕೆ ಒಳಗಾಯಿತು ಮತ್ತು ರಿಷಭ್ ಕೂಡ ಗಂಭೀರವಾಗಿ ಗಾಯಗೊಂಡರು.
Woke up this morning...
Well.......
RISHABH PANT
that's it, that's the tweet #INDvsAUSTest #BGT2023
— DK (@DineshKarthik) March 3, 2023
Miss you Rishabh Pant ❤️. #INDvsAUSTest pic.twitter.com/6L2rsydpHb
— Rajabets India🇮🇳👑 (@smileandraja) March 3, 2023
ಇನ್ನು, ಕಳೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ರಿಷಭ್ ಪಂತ್ ಏಕಾಂಗಿಯಾಗಿ ಹೋರಾಡಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಆಸೀಸ್ ವಿರುದ್ಧ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದರಲ್ಲಿಯೂ ಸ್ಪಿನ್ ಪಿಚ್ನಲ್ಲಿ ಅಬ್ಬರಿಸಿದ ಪಂತ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು.
#BCCI #RishabhPant #INDvsAUSTest #IndvsAus
Rishabh Pant Against Spinner In Turner Pitch. pic.twitter.com/uEjvb3EtJo
— Duck (@DuckInCricket) March 3, 2023
ಇದನ್ನೂ ಓದಿ: WTC 2023 ಫೈನಲ್ಗೆ ಆಸೀಸ್ ಎಂಟ್ರಿ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಟೀಂ ಇಂಡಿಯಾ ಔಟ್?
ಹೇಗಿದೆ ಪಂತ್ ಆರೋಗ್ಯ?:
ಇನ್ನು, ಕಳೆದ ವರ್ಷ ಡಿಸೆಂಬರ್ ಅಂತ್ಯದಲ್ಲಿ ರಿಷಭ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಗೊತ್ತೇ ಇದೆ. ಈ ಅಪಘಾತದಲ್ಲಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದರು. ಅಪಘಾತದಲ್ಲಿ ಅವರ ಬೆನ್ನು, ತಲೆಗಳಿಗೆ ಗಾಯಗಳಾಗಿದ್ದವು. ಅವರ ಬಲಗಾಲಿನ ಮೂರು ಅಸ್ಥಿರಜ್ಜು ಹಾಳಾಗಿತ್ತು. ಆದರೆ ವೈದ್ಯರು ಅವರ ಕಾಲಿಗೆ ಎರಡು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಅವರು ಎದ್ದು ನಿಲ್ಲುವಂತಾಗಿದ್ದು, ಯಾವಾಗ ಮತ್ತೆ ಮರಳಿ ಮೈದಾನಕ್ಕೆ ಬರುತ್ತಾರೆ ಎಂಬ ಪ್ರಶ್ನೆಗೆ ಸೌರವ್ ಗಂಗೂಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ಗಂಗೂಲಿ ರಿಷಭ್ ಪಂತ್ ಅವರ ಗಾಯಗಳ ಬಗ್ಗೆ ಪ್ರಮುಖ ನವೀಕರಣವನ್ನು ನೀಡಿದ್ದಾರೆ. ಟೀಂ ಇಂಡಿಯಾಗೆ ಆದಷ್ಟು ಬೇಗ ಕಂಬ್ಯಾಕ್ ಮಾಡುತ್ತೇನೆ ಎಂದು ಪಂತ್ ಹೇಳಿದ್ದಾರೆ. ಆದರೆ ಇದು ಒಂದು ವರ್ಷ ಅಥವಾ ಎರಡು ವರ್ಷ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ಗಂಗೂಲಿ ಹೇಳಿದ್ದಾರೆ. ಗಂಗೂಲಿ ಅವರ ಹೇಳಿಕೆಗಳನ್ನು ಗಮನಿಸಿದರೆ, ಪಂತ್ ಕನಿಷ್ಠ ಎರಡು ವರ್ಷಗಳ ಕಾಲ ಆಟದಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದಕ್ಕೆ ಪ್ರಮುಖ ಕಾರಣ ಕಾಲಿನ ಅಸ್ಥಿರಜ್ಜುಗ ಗಾಯ ಎಂದು ಹೇಳಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ