ಭಾರತದ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರು ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಕಾರು (Car) ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಗಾಯಗೊಂಡಿದ್ದಾರೆ. ಉತ್ತರಾಖಂಡ್ನ ರೂರ್ಕಿ ಬಳಿ ಅಪಘಾತಕ್ಕೀಡಾದ ತನ್ನ ಬೆನ್ಜ್ ಕಾರನ್ನು ಪಂತ್ ಓಡಿಸುತ್ತಿದ್ದರು ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ಇನ್ನೂ ಈ ಘಟನೆಯಲ್ಲಿ ರಿಷಬ್ ಪಂತ್ ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಷಭ್ ಪಂತ್ ತಲೆ, ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮನೆಗೆ ಹೋಗ್ತಿದ್ದ ವೇಳೆ ನಡೀತು ಭೀಕರ ಅಪಘಾತ!
ಭಾರತದ ಸ್ಟಾರ್ ವಿಕೆಟ್ಕೀಪರ್ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಬ್ ಪಂತ್ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ.
ಡಿವೈಡರ್ಗೆ ಡಿಕ್ಕಿ ಹೊಡೆದ ರಿಷಭ್!
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಬೆಳಗ್ಗೆ 5.15 ಸುಮಾರಿಗೆ ಅಪಘಾತ!
ಉತ್ತರಾಖಂಡದ ಮಂಗಳೌರ್ ಬಳಿ ಇಂದು ಬೆಳಗ್ಗೆ 5.15ರ ಸುಮಾರಿಗೆ ಅಪಘಾತಕ್ಕೀಡಾದ ಕ್ರಿಕೆಟಿಗ ರಿಷಬ್ ಪಂತ್ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ನಂತರ ಅವರ ಕಾರು ಸುಟ್ಟು ಕರಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ತಪಾಸಣೆಗಾಗಿ ಅವರನ್ನು ಡೆಹ್ರಾಡೂನ್ಗೆ ಕರೆತರಲಾಗುತ್ತಿದೆ
ಕಾಲು ಮುರಿದುಕೊಂಡ ರಿಷಭ್ ಪಂತ್!
ರಿಷಭ್ ಪಂತ್ ಅವರು ಒಬ್ಬರೇ ಕಾರಿನಲ್ಲಿ ತೆರಳುತ್ತಿದ್ದರು ಎಂದು ಮಾಹಿತಿ ದೊರೆತಿದೆ. ಜೊತೆಗೆ ಪ್ಲಾಸ್ಟಿಕ್ ಸರ್ಜರಿಯ (Plastic Surgery) ಅವಶ್ಯಕತೆ ಇರುವುದಾಗಿ ವರದಿಯಾಗಿದೆ.
ಅಭಿಮಾನಿಗಳಿಗೆ ಆಘಾತ!
ಮತ್ತೊಂದೆಡೆ, ಪಂತ್ ಅಪಘಾತದ ಸುದ್ದಿಯಿಂದ ಕ್ರಿಕೆಟ್ ಅಭಿಮಾನಿಗಳು ಮತ್ತು ಕ್ರಿಕೆಟಿಗರು ಆಘಾತಕ್ಕೊಳಗಾಗಿದ್ದಾರೆ. ರಿಷಬ್ ಪಂತ್ ಗೆ ಧೈರ್ಯ ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ರಿಷಬ್ ಪಂತ್ ಅಪಘಾತಕ್ಕೆ ಸಂಬಂಧಿಸಿದ ಫೋಟೋಗಳು ನೆಟ್ನಲ್ಲಿ ವೈರಲ್ ಆಗುತ್ತಿವೆ.
ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಪಂತ್ ಕಾಲು ಮುರಿತ, ಈ ವರ್ಷ ರಿಷಭ್ ಕೆರಿಯರ್ ಕಥೆ ಏನು?
ತಾಯಿಗೆ ಸರ್ಪ್ರೈಸ್ ನೀಡಲು ಹೊರಟ್ಟಿದ್ದ ಪಂತ್!
ತಮ್ಮ ತಾಯಿಗೆ ಸರ್ಪ್ರೈಸ್ ನೀಡಲು ರಿಷಭ್ ಪಂತ್ ಮನೆ ಕಡೆ ಹೊರಟಿದ್ದರು. ಈ ವೇಳೆ ಅಪಘಾತವಾಗಿದೆ. ಈ ವಿಚಾರ ತಿಳಿದ ಪಂತ್ ಪೋಷಕರು ಕೂಡ ಕಣ್ಣೀರಿಟ್ಟಿದ್ದಾರೆ. ಒನ್ಡೇ ವಿಶ್ವಕಪ್ನಲ್ಲಿ ಸ್ಥಾನ ಪಡೆದು ದೊಡ್ಡ ಮಟ್ಟದಲ್ಲಿ ಹೆಸರು ಮಾಡಬೇಕೆಂಬ ಆಸೆಯನ್ನು ಪಂತ್ ಹೊಂದಿದ್ದರು. ಆದರೆ, ಈಗ ಈ ರೀತಿ ಘಟನೆ ನಡೆದಿರುವುದು, ನಿಜಕ್ಕೂ ಅಭಿಮನಿಗಳಿಗೆ ಬೇಸರ ಮೂಡಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ