ಮತ್ತೊಮ್ಮೆ ಕ್ರಿಕೆಟ್ ಲೋಕದ ಮೆಗಾ ಟೂರ್ನಿಗೆ ಈ ವರ್ಷ ಸಾಕ್ಷಿಯಾಗಲಿದೆ. ಹೌದು, ಈ ಬಾರಿ ಐಸಿಸಿ ಏಕದಿನ ವಿಶ್ವಕಪ್ (ICC ODI World Cup 2023) ಭಾರತದಲ್ಲಿ ನಡೆಯಲಿದೆ. ಈ ಮೆಗಾ ಟೂರ್ನಿಗಾಗಿ ಎಲ್ಲಾ ತಂಡಗಳು ಈಗಾಗಲೇ ಭರ್ಜರಿ ತಯಾರಿ ಆರಂಭಿಸಿದೆ. ಈ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡ ಪ್ರಶಸ್ತಿ ಗೆಲ್ಲಬಹುದು ಎಂದು ಮಾಜಿ ನಾಯಕ ವಾಸಿಂ ಅಕ್ರಮ್ (Wasim Akram) ಹೇಳಿದ್ದಾರೆ. ವಿಶ್ವಕಪ್ ಗೆಲ್ಲುವ ಪ್ರಬಲ ಸ್ಪರ್ಧಿಗಳ ಪೈಕಿ ಟೀಂ ಇಂಡಿಯಾ (Team India) ಕೂಡ ಇದೆ, ಆದರೆ ಬಾಬರ್ ಅಜಮ್ ತಂಡವನ್ನು ಕಡಿಮೆ ಅಂದಾಜು ಮಾಡಬಾರದು ಎಂದು ಅವರು ಹೇಳಿದ್ದಾರೆ. ವಿಶ್ವಕಪ್ನಲ್ಲಿ ಪಾಕಿಸ್ತಾನವನ್ನು ಫೇವರಿಟ್ ಎಂದು ಪರಿಗಣಿಸಲು ವಾಸಿಂ ಅಕ್ರಮ್ ಕಾರಣವನ್ನೂ ಸಹ ನೀಡಿದ್ದಾರೆ.
ಪಾಕ್ ವಿಶ್ವಕಪ್ ಗೆಲ್ಲಲಿದೆ:
ನಮ್ಮ ತಂಡ ಅದ್ಭುತವಾಗಿದೆ ಎಂದು ವಾಸಿಂ ಅಕ್ರಂ ಹೇಳಿದ್ದಾರೆ. ನಮ್ಮ ನಾಯಕ ಶ್ರೇಷ್ಠ ಆಟಗಾರ. ಇದರ ಹೊರತಾಗಿ, ನಾವು ವಿಶ್ವದ ಅತ್ಯಂತ ಬಲಿಷ್ಠ ವೇಗದ ಬೌಲಿಂಗ್ ದಾಳಿಯನ್ನು ಹೊಂದಿದ್ದೇವೆ. ಸ್ವಿಂಗ್ ಸುಲ್ತಾನ್ ಎಂದು ಕರೆಯಲ್ಪಡುವ ವಾಸಿಂ ಅಕ್ರಂ, ಸದ್ಯಕ್ಕೆ ಶಾಹೀನ್ ಅಫ್ರಿದಿ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಅವರು ಲಾಹೋರ್ ಖಲಂದರ್ಸ್ ತಂಡವನ್ನು ಸತತ ಎರಡನೇ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್ನ ಪ್ರಶಸ್ತಿಯನ್ನು ಗೆಲ್ಲಿಸಿದ್ದಾರೆ. ಅವರು ಅತ್ಯುತ್ತಮ ಆಲ್ ರೌಂಡರ್ ಆಗುವತ್ತ ಸಾಗುತ್ತಿದ್ದಾರೆ. ಪಿಎಸ್ಎಲ್ನಲ್ಲಿ ಉತ್ತಮ ಬೌಲಿಂಗ್ ಜೊತೆಗೆ ಶಾಹೀನ್ ಅಫ್ರಿದಿ ಹಲವು ಪಂದ್ಯಶ್ರೇಷ್ಠ ಇನ್ನಿಂಗ್ಸ್ಗಳನ್ನು ಆಡಿದ್ದಾರೆ.
ಈ ಕುರಿತು ಮಾತನಾಡಿದ ವಾಸಿಂ ಅಕ್ರಮ್, ಶಾಹೀನ್ ಹೊರತುಪಡಿಸಿ, ನಮ್ಮಲ್ಲಿ ಹ್ಯಾರಿಸ್ ರೌಫ್, ನಸೀಮ್ ಶಾ ಮತ್ತು ಮೊಹಮ್ಮದ್ ಹಸ್ನೈನ್ ಇದ್ದಾರೆ. ಎಹ್ಸಾನುಲ್ಲಾ ಎಸೆತಗಳ ವೇಗವನ್ನು ಜಗತ್ತು ನೋಡಿದೆ. ಅವರೊಬ್ಬ ಅತ್ಯಾಕರ್ಷಕ ಯುವ ವೇಗದ ಬೌಲರ್. ವಾಸಿಂ ಅಕ್ರಂ ಪ್ರಕಾರ, ಭಾರತದಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದ, ಇಲ್ಲಿನ ಪಿಚ್ಗಳು ಬ್ಯಾಟಿಂಗ್ ಸ್ನೇಹಿಯಾಗಿರುವುದರಿಂದ ಬಲಿಷ್ಠ ಬೌಲಿಂಗ್ ದಾಳಿ ಹೊಂದಿರುವ ತಂಡಗಳು ಹೆಚ್ಚು ಯಶಸ್ವಿಯಾಗುತ್ತವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: India vs Pakistan: ಪಾಕ್ ಆಟಗಾರನ ಮನವಿಗೆ ಅಸ್ತು ಅಂದ್ರಾ ನಮೋ? ಭಾರತ-ಪಾಕ್ ಪಂದ್ಯ ಮೋದಿ ಕೈಯಲ್ಲಿ
2011ರಲ್ಲಿ ಭಾರತದಲ್ಲಿ ನಡೆದಿತ್ತು ವಿಶ್ವಕಪ್:
2011ರಲ್ಲಿ ಭಾರತದಲ್ಲಿ ಕೊನೆಯ ಏಕದಿನ ವಿಶ್ವಕಪ್ ನಡೆದಿತ್ತು. ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕೂಡ ಪಂದ್ಯಾವಳಿಯ ಕೆಲವು ಪಂದ್ಯಗಳನ್ನು ಆಯೋಜಿಸಿತ್ತು. ಈ ಬಾರಿಯ ವಿಶ್ವಕಪ್ನಲ್ಲಿ ಕೊನೆಯ ನಾಲ್ಕರ ಘಟ್ಟ ತಲುಪುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿತ್ತು. ಆದಾಗ್ಯೂ, ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ನಲ್ಲಿ ಭಾರತ 29 ರನ್ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಇದಕ್ಕೂ ಮುನ್ನ 1996ರಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ವಿಶ್ವಕಪ್ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಈ ವಿಶ್ವಕಪ್ನ ಕ್ವಾರ್ಟರ್ ಫೈನಲ್ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಸೋಲಿಸಿ ಟೂರ್ನಿಯಿಂದ ಹೊರಬಿದ್ದಿತ್ತು.
ಮೋದಿ ಬಳಿ ಅಫ್ರಿದಿ ಮನವಿ:
ಏಷ್ಯಾಕಪ್ ಅನ್ನು ಪಾಕಿಸ್ತಾನದ ಬದಲಿಗೆ ತಟಸ್ಥ ಸ್ಥಳದಲ್ಲಿ ನಡೆಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಭಾರತ ಪ್ರವಾಸದಲ್ಲಿ ತಮ್ಮ ತಂಡಕ್ಕೆ ಬೆದರಿಕೆ ಇದೆ ಎಂದು ಶಾಹಿದ್ ಅಫ್ರಿದಿ ಹೇಳಿಕೊಂಡಿದ್ದಾರೆ. ಆದರೆ ಅವರು ಇನ್ನೂ ಬರಲು ನಿರ್ಧರಿಸಿದ್ದಾರೆ. ಏಷ್ಯಾಕಪ್ಗಾಗಿ ಭಾರತ ಪ್ರವಾಸ ಮಾಡಲು ಪಾಕಿಸ್ತಾನ ನಿರ್ಧರಿಸಿದರೆ, ಭಾರತ ತಂಡದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತದೆ ಎಂದು ಆಫ್ರಿದಿ ಹೇಳಿದ್ದಾರೆ. ಅಲ್ಲದೇ, ಅಫ್ರಿದಿ ಭಾರತ-ಪಾಕ್ ಪಂದ್ಯದ ಕುರಿತು ನಾನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿ ವಿಶೇಷ ಮನವಿ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ