• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಮುಷ್ಕರನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್; 2443 ಸಿಬ್ಬಂದಿ ಅಮಾನತು ಮಾಡಿ ಆದೇಶ ಹೊರಡಿಸಿದ ಬಿಎಂಟಿಸಿ

ಮುಷ್ಕರನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್; 2443 ಸಿಬ್ಬಂದಿ ಅಮಾನತು ಮಾಡಿ ಆದೇಶ ಹೊರಡಿಸಿದ ಬಿಎಂಟಿಸಿ

ಬೆಂಗಳೂರು ಸಾರಿಗೆ ಸಂಸ್ಥೆ

ಬೆಂಗಳೂರು ಸಾರಿಗೆ ಸಂಸ್ಥೆ

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ದರಿದ್ದಾರೆ.  ಸೋಮವಾರದವರೆಗೂ ಸರ್ಕಾರಕ್ಕೆ ಡೆಡ್ ಲೈನ್. ಆಗಲೂ ಸರ್ಕಾರ ಸ್ಪಂದಿಸದಿದ್ದರೆ ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು. 

ಮುಂದೆ ಓದಿ ...
  • Share this:

ಬೆಂಗಳೂರು: ಆರನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ 11 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿಗೆ ಕರೆ ನೀಡಿದ್ದಾರೆ. ಆದರೆ, ಸಾರಿಗೆ ನೌಕರರ ಪ್ರತಿಭಟನೆಗೆ ಸೊಪ್ಪು ಹಾಕದ ಸರ್ಕಾರ ಮುಷ್ಕರನಿರತ ಸಿಬ್ಬಂದಿ ಅಮಾನತು, ವರ್ಗಾವಣೆಯಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಇಂದು ಒಂದೇ ದಿನ 2443 ಮಂದಿ ಸಿಬ್ಬಂದಿ ಅಮಾನತುಗೊಳಿಸಿ ಬಿಎಂಟಿಸಿ ಆದೇಶ ಹೊರಡಿಸಿದೆ.


ಕೆಲಸಕ್ಕೆ ಹಾಜರಾಗುವಂತೆ ಸಿಬ್ಬಂದಿಗೆ ಬಿಎಂಟಿಸಿ ನೊಟೀಸ್ ಜಾರಿ ಮಾಡಿತ್ತು. ಆದರೆ ನಿಗಮ ಸೂಚಿಸಿದರೂ ಕೆಲಸಕ್ಕೆ ಹಾಜರಾಗದ ಹಿನ್ನಲೆಯಲ್ಲಿ 2443 ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಸಸ್ಪೆಂಡ್ ಆದವರ ಪೈಕಿ 1974 ಮಂದಿ ಹಿರಿಯ ನೌಕರರಾಗಿದ್ದಾರೆ. ನೊಟೀಸ್​ಗೆ ಪ್ರತಿಕ್ರಿಯಿಸಲು ಸೋಮವಾರದವರೆಗೆ ಅವಕಾಶ ನೀಡಲಾಗಿದೆ. ಸೋಮವಾರ ಸರಿಯಾದ ಕಾರಣ ನೀಡದಿದ್ದರೆ ಎಲ್ಲಾ ಸಿಬ್ಬಂದಿಯನ್ನು ವಜಾಗೊಳಿಸುವುದಾಗಿ  ಬಿಎಂಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.


ಇದನ್ನು ಓದಿ: Bus Strike | ಸರ್ಕಾರಕ್ಕೆ ಸೋಮವಾರದವರೆಗು ಗಡುವು, ಆಗಲೂ ಸ್ಪಂದಿಸದಿದ್ದರೆ ಜೈಲ್ ಭರೋ ಚಳವಳಿ ಆರಂಭ; ಕೋಡಿಹಳ್ಳಿ ಚಂದ್ರಶೇಖರ್


ಸಾರಿಗೆ ನೌಕರರ ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರಿಗೆ ಕೆಲಸಗಾರರ ಬಗ್ಗೆ ಸರ್ಕಾರ ತಿರಸ್ಕಾರ ಭಾವನೆ ತೋರಿಸುತ್ತಿದೆ.  ನೌಕರರ ಮನೆ ಮುಂದೆ ಹೋಗಿ ಅವರನ್ನು ಮಾನಸಿಕವಾಗಿ ಘಾಸಿಗೊಳಿಸುತ್ತಿದೆ. ಇದರಿಂದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ. ನಾವು ವಿಶ್ರಾಂತಿ ಪಡೆಯಲು ಕೊರೋನಾ ತೋರಿಸುತ್ತಿದ್ದೀರಾ. ಪ್ರಾಕೃತಿಕ ಸಮಸ್ಯೆ ಜಾಸ್ತಿ ಇರುತ್ತವೆ, ಅದನ್ನ ನಾವು ಎದುರಿಸಬೇಕು. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನು ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರಾಗಿ ನೋಡಲಾಗುತ್ತಿದೆ.  ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ದರಿದ್ದಾರೆ.  ಸೋಮವಾರದವರೆಗೂ ಸರ್ಕಾರಕ್ಕೆ ಡೆಡ್ ಲೈನ್. ಆಗಲೂ ಸರ್ಕಾರ ಸ್ಪಂದಿಸದಿದ್ದರೆ  ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಾರಿಗೆ ನೌಕರರ ಸಮಸ್ಯೆಗಳ‌ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಕೊಡುತ್ತೇವೆ.  ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಸರ್ಕಾರಕ್ಕೆ ತಿದ್ದಿ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದರು.


ಇನ್ನು ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ಒಕ್ಕೂಟಗಳಲ್ಲಿ ವೈಮನಸ್ಸು ಮೂಡಿದೆ. ಕೆ.ಎಸ್.ಆರ್.ಟಿ.ಸಿ. ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಜಂಟಿ ಕಾರ್ಯದರ್ಶಿ ಕಾಮ್ರೇಡ್ ಮುಕ್ಕೇರಿ ಅವರು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಮೋಸದ ಆಟ ಮುಗಿಯಿತು. ನಿನ್ನ ಅಸಲಿಬಣ್ಣ ಬಯಲಾಯಿತು. ನಿಮ್ಮ ಅಂದಭಕ್ತರು ಈಗ ನಿಮ್ಮನ್ನು ಸಮರ್ಥಿಸಿಕೊಳ್ಳಬಹುದು. ಆದರೆ ಬಹುಬೇಗ ಅವರಿಗೂ ನಿನ್ನ ನಿಜಸ್ಥಿತಿ ತಿಳಿಯಲಿದೆ. ನೀನು ಕಾರ್ಮಿಕರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ನಾವು ನಿನ್ನನ್ನು ಸುಮ್ಮನೆ ಬಿಡುವುದಿಲ್ಲ. ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ನಾವುಗಳು, ಈ ಕಾರ್ಮಿಕರನ್ನು ಬೆಳೆಸಿದ ನಾವುಗಳು, ಕಾರ್ಮಿಕರನ್ನು ಇನ್ನು ಮುಂದೆ ನಿಮ್ಮ ಮೋಸದ ಜಾಲಕ್ಕೆ ಬಲಿಯಾಗಲು ಬಿಡುವುದಿಲ್ಲ. ಇಷ್ಟು ದಿವಸ ಪರದೆಯ ಹಿಂದೆ ನಿಂತು ಕಾಮ್ರೇಡ್ ಅನಂತಸುಬ್ಬರಾಯರನ್ನು, ಶರ್ಮಾಜಿಯವರನ್ನು ಅವಮಾನಿಸುತ್ತಾ, ತೋರಿಕೆಗಾಗಿ ಮಾತ್ರ ಗುರುಗಳು, ಗುರುಗಳು ಅಂತ ನಾಟಕವಾಡುತ್ತಿರುವುದು ನಮಗೆ ಮೊದಲೇ ಗೊತ್ತಿತ್ತು. ಈಗ ಬಹಿರಂಗವಾಗಿ ವಿಡಿಯೋದಲ್ಲಿ ಮಾತಾಡಿ ನಿಮ್ಮ ಅಸಲಿಯತ್ತು ತೋರಿಸಿದ್ದೀರಾ. ನಿಮ್ಮ ಅಸಲಿಯತ್ತು ಹೊರಗೆ ಬರಬೇಕಾಗಿತ್ತು, ಅದಕ್ಕಾಗಿ ನಾವು ಕಾಯುತ್ತಿದ್ದೆವು. ಈಗ ಬಂದಾಯ್ತು. ನಾವು ಕೂಡ ಇನ್ನುಮುಂದೆ ಸೆಡ್ಡುಹೊಡೆದು ಓಪನ್ನಾಗಿ ಮೈದಾನಕ್ಕೆ ಬರುತ್ತೇವೆ. ಈ ಸಂಸ್ಥೆಯನ್ನು, ಕಾರ್ಮಿಕರನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಕಾಪಾಡಿಯೇ ಕಾಪಾಡುತ್ತೇವೆ ಎಂದು ಕಾಮ್ರೇಡ್ ಮುಕ್ಕೇರಿ ಅವರು ಹೇಳಿದ್ದಾರೆ.

First published: