Accident: ಕ್ರೂಸರ್ ಪಲ್ಟಿ ಹೊಡೆದು ಭೀಕರ ಅಪಘಾತ, ಸ್ಥಳದಲ್ಲೇ 7 ಮಂದಿ ದುರ್ಮರಣ

ಅಪಘಾತಕ್ಕೀಡಾದ ಕ್ರೂಸರ್ ವಾಹನ

ಅಪಘಾತಕ್ಕೀಡಾದ ಕ್ರೂಸರ್ ವಾಹನ

ಬೆಳಗಾವಿ ಜಿಲ್ಲೆಯ ಬೆಳಗಾವಿ–ಗೋಕಾಕ್ ರಸ್ತೆಯ ಕಲ್ಯಾಳ ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಪಲ್ಟಿ ಹೊಡೆದು 7 ಮಂದಿ ಕಾರ್ಮಿಕರು ಪ್ರಾಣ ಬಿಟ್ಟಿದ್ದಾರೆ.

  • Share this:

ಬೆಳಗಾವಿ: ಇಂದು ಮುಂಜಾನೆ (Early Morning) ನಡೆದ ಭೀಕರ ಅಪಘಾತದಲ್ಲಿ (Accident) 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ (Belagavi) ಜಿಲ್ಲೆಯ ಬೆಳಗಾವಿ – ಗೋಕಾಕ್ ರಸ್ತೆಯ (Belagavi-Gokak Road) ಕಲ್ಯಾಳ ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೂಲಿ ಕಾರ್ಮಿಕರನ್ನು (Labor) ಕರೆದೊಯ್ಯುತ್ತಿದ್ದ ಕ್ರೂಸರ್ (Cruiser)  ವಾಹನ ಪಲ್ಟಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ 7 ಮಂದಿ ಸಾವನ್ನಪ್ಪಿದ್ದು, ಇನ್ನೂ 10 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಅಂತ ಹೇಳಲಾಗಿದೆ.


ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ


ಬೆಳಗಾವಿ–ಗೋಕಾಕ್ ರಸ್ತೆಯ ಕಲ್ಯಾಳ ಬ್ರಿಡ್ಜ್ ಬಳಿ ಕ್ರೂಸರ್ ವಾಹನ ಪಲ್ಟಿ ಹೊಡೆದಿದೆ. ಈ ಕ್ರೂಸರ್ ವಾಹನದಲ್ಲಿ ಸುಮಾರು 18 ಮಂದಿ ಕೂಲಿ ಕಾರ್ಮಿಕರು ಇದ್ದರು ಎನ್ನಲಾಗಿದೆ. ಚಾಲಕ ನಿರ್ಲಕ್ಷ್ಯತನದಿಂದ ಕ್ರೂಸರ್ ಓಡಿಸುತ್ತಾ ಇದ್ದ ಎನ್ನಲಾಗಿದೆ. ಕಲ್ಯಾಳ ಬ್ರಿಡ್ಜ್ ಬಳಿ ಬರುತ್ತಿದ್ದಂತೆ ಕ್ರೂಸರ್ ಪಲ್ಟಿ ಹೊಡೆದು, ದುರ್ಘಟನೆ ಸಂಭವಿಸಿದೆ.



7 ಮಂದಿ ದುರ್ಮರಣ, ಹಲವರಿಗೆ ಗಾಯ


ಕ್ರೂಸರ್ ಡಿಕ್ಕಿ ಹೊಡೆಯುತ್ತಿದ್ದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಅಡಿವೆಪ್ಪ ಚಿಲಬಾಂವಿ (27), ಬಸವರಾಜ್ ದಳವಿ (30), ಬಸವರಾಜ ಹನಮನ್ನವರ (51), ಆಕಾಶ ಗಸ್ತಿ (22), ಫಕೀರಪ್ಪ ಹರಿಜನ (55), ಮಲ್ಲಪ್ಪ ದಾಸನಟ್ಟಿ (30) ಹಾಗೂ ಬಸವರಾಜ ಸನದಿ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: Belagavi: 7 ಭ್ರೂಣಗಳ ಪತ್ತೆ ಕೇಸ್, ಹೆರಿಗೆ ಆಸ್ಪತ್ರೆ, ಸ್ಕ್ಯಾನಿಂಗ್ ಸೆಂಟರ್ ಸೀಜ್; ಸಚಿವ ಸುಧಾಕರ್ ಖಡಕ್​ ಆದೇಶ


ಮತ್ತೊಂದು ವಾಹನ ಹಿಂದಿಕ್ಕಲು ಹೋಗಿ ಪಲ್ಟಿ


ಕ್ರೂಸರ್‌ನಲ್ಲಿ ಇದ್ದವರೆಲ್ಲ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರು ಎನ್ನಲಾಗಿದೆ. ಇವರೆಲ್ಲ ಅಕ್ಕತಂಗೇರಹಾಳ ಗ್ರಾಮದಿಂದ ಸಾಂಬ್ರಾ - ಸುಳೇಭಾವಿ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿಗೆ ಹೊರಟಿದ್ದರು. ಈ ವೇಳೆ ಬೆಳಗಾವಿ- ಗೋಕಾಕ್ ರಾಜ್ಯ ಹೆದ್ದಾರಿಯಲ್ಲಿ ಮತ್ತೊಂದು ಕ್ರೂಸರ್ ವಾಹನ ಹಿಂದಿಕ್ಕಲು ಹೋಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳದ ಸೇತುವೆಗೆ ಡಿಕ್ಕಿ ಹೊಡೆದು, ಎರಡು ಸಲ ಪಲ್ಟಿ ಹೊಡೆದಿದೆ ಎನ್ನಲಾಗಿದೆ.


ಗಾಯಾಳುಗಳು ಆಸ್ಪತ್ರೆಗೆ ದಾಖಲು


ಇನ್ನು ಕ್ರೂಸರ್‌ನಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಅಂತ ಹೇಳಲಾಗಿದೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಸ್ಥಳಕ್ಕೆ ಬೆಳಗಾವಿ ಪೋಲಿಸ್ ಕಮಿಷನರ್ ಡಾ.  ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಾರಿ ಹಾಗೂ ಬಸ್‌ಗಳ ನಡುವೆ ಸರಣಿ ಅಪಘಾತ


ಇತ್ತ ಬೆಂಗಳೂರು ಗ್ರಾಮಂತರದ ಹೊಸಕೋಟೆ ಬಳಿ ಇಂದು ಲಾರಿ ಬಸ್ ಮತ್ತು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. 8 ವಾಹನಗಳು ಜಖಂ ಆಗಿವೆ. ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಘಟನೆ ನಡೆದಿದೆ. ಲಾರಿ‌ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ ನಡೆದಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.


ಇದನ್ನೂ ಓದಿ: Sister Kidnap: ತವರು ಮನೆಗೆ ಹೋದವಳು ನಾಪತ್ತೆ, ರಿಸೆಪ್ಷನ್​ಗೂ ಮುನ್ನ ತಂಗಿಯನ್ನೇ ಕಿಡ್ನ್ಯಾಪ್ ಮಾಡಿದ್ನಾ ಸಹೋದರ?


8 ಮಂದಿಗೆ ಸಣ್ಣ ಪುಟ್ಟ ಗಾಯ


ಎರಡು ಬಸ್, ಒಂದು ಲಾರಿ, ಒಂದು ಗೂಡ್ಸ್ ವಾಹನ ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 8 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತದ ರಬಸಕ್ಕೆ ಲಾರಿಯ ಮುಂಬಾಗ ಬಸ್ಸಿನ ಹಿಂಭಾಗ ಜಖಂ ಆಗಿದೆ. ಇನ್ನು ಬಸ್ಸಿನ ಹಿಂಬದಿ ಸೀಟಿನಲ್ಲಿ ಯಾರು ಇಲ್ಲದ ಕಾರಣ ಪ್ರಾಣ ಹಾನಿ ತಪ್ಪಿದೆ.

Published by:Annappa Achari
First published: