ಬೆಂಗಳೂರು; ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ರಾಗಿಣಿ ಬರೋಬ್ಬರಿ 140 ದಿನಗಳಿಗೂ ಹೆಚ್ಚು ಕಾಲ ಸೆರೆವಾಸ ಅನುಭವಿಸಿದ್ದಾರೆ. ಸುದೀರ್ಘ ಕಾನೂನು ಹೋರಾಟದ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜಾಮೀನು ಸಿಕ್ಕರೂ ಅವರಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಇಲ್ಲದಂತೆ ಆಗಿದೆ. ರಾಗಿಣಿ ಅವರಿಗೆ ಜಾಮೀನು ಸಿಕ್ಕಿ ಮೂರು ದಿನಗಳಾದರೂ ಬಿಡುಗಡೆ ಭಾಗ್ಯ ಇನ್ನೂ ದಕ್ಕಿಲ್ಲ. ಕಳೆದ ಗುರುವಾರ ಸುಪ್ರೀಂಕೋರ್ಟ್ ನಿಂದ ರಾಗಿಣಿ ಅವರಿಗೆ ಜಾಮೀನು ಸಿಕ್ಕಿತ್ತು.
ನಿನ್ನೆ ಮಧ್ಯಾಹ್ನದ ಬಳಿಕ ಸುಪ್ರೀಂಕೋರ್ಟ್ ಆದೇಶ ಪ್ರತಿ ಪಡೆದು ದೆಹಲಿಯಿಂದ ವಕೀಲರು ಬೆಂಗಳೂರಿಗೆ ಬಂದಿದ್ದರು. ಇಂದು ಎನ್ಡಿಪಿಎಸ್ ಕೋರ್ಟ್ನಲ್ಲಿ ಸುಪ್ರೀಂ ಕೋರ್ಟ್ ಆದೇಶ ಪ್ರತಿಯನ್ನು ವಕೀಲರು ಹಾಜರುಪಡಿಸಿದರು. ಆದರೆ ಇಂದು ರಾಗಿಣಿಗೆ ಜಾಮೀನು ಮಂಜೂರು ಮಾಡಲು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ. 3 ಲಕ್ಷ ಬಾಂಡ್, ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಹಾಗೂ 15 ದಿನಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು ಎಂಬಿತ್ಯಾದಿ ಷರತ್ತುಗಳು ವಿಧಿಸಲಾಗಿದೆ. ಈ ಷರತ್ತುಗಳನ್ನು ಪೂರೈಸಲು ರಾಗಿಣಿ ಪರ ವಕೀಲರು ಸಮಯಾವಕಾಶ ಕೇಳಿದ್ದಾರೆ.
ಇದನ್ನು ಓದಿ: ಖಾಸಗಿ ಶಾಲಾ ಶುಲ್ಕ ಭರಿಸಲು 3 ಹಂತದ ಸೂತ್ರ ಶಿಫಾರಸು, ಶೀಘ್ರವೇ ಮೊದಲನೇ ಸೂತ್ರ ಪ್ರಕಟ; ಸಚಿವ ಸುರೇಶ್ ಕುಮಾರ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ