• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • HD Kumaraswamy| ಪೆಟ್ರೋಲ್ ಅನ್ನು GSTಗೆ ಸೇರಿಸಿದರೆ ರಾಜ್ಯದ ಆದಾಯಕ್ಕೆ ಕುತ್ತು; ಕಾಂಗ್ರೆಸ್-ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

HD Kumaraswamy| ಪೆಟ್ರೋಲ್ ಅನ್ನು GSTಗೆ ಸೇರಿಸಿದರೆ ರಾಜ್ಯದ ಆದಾಯಕ್ಕೆ ಕುತ್ತು; ಕಾಂಗ್ರೆಸ್-ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ.

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ.

ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಂದೆ ಓದಿ ...
  • Share this:

    ಬೆಂಗಳೂರು (ಜೂನ್ 13); ಕೊರೋನಾ ಬಿಕ್ಕಟ್ಟು ಹಾಗೂ ಲಾಕ್​ಡೌನ್ ಸಂಕಷ್ಟದ ನಡುವೆಯೂ ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಪರಿಣಾಮ ಜನ ಸಾಮಾನ್ಯರು ಬೆಲೆ ಏರಿಕೆಯಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್​ ಸೇರಿದಂತೆ ಅನೇಕರು ಪೆಟ್ರೋಲ್ ಬೆಲೆ ಇಳಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಅಲ್ಲದೆ, ಪೆಟ್ರೋಲ್​ ಅನ್ನು ಜಿಎಸ್​ಟಿ ಅಡಿಯಲ್ಲಿ ತರುವ ಮೂಲಕ ಅದರ ಬೆಲೆಯನ್ನು ಕಡಿತ ಮಾಡಬಹುದು ಎಂಬ ಯೋಚನೆಯನ್ನೂ ನೀಡುತ್ತಿದ್ದಾರೆ. ಆದರೆ, ಮಾಜಿ ಸಿಎಂ ಕುಮಾರಸ್ವಾಮಿ ಇದನ್ನು ಕಟುವಾಗಿ ಕಂಡಿಸಿದ್ದಾರೆ. ಅಲ್ಲದೆ, ಪೆಟ್ರೋಲ್ ಬೆಲೆಯನ್ನು ಜಿಎಸ್​ಟಿ ಅಡಿ ತಂದರೆ ರಾಜ್ಯದ ಆದಾಯಕ್ಕೆ ಕುತ್ತು ಬರುತ್ತದೆ. ಕಾಂಗ್ರೆಸ್​ ಹೋರಾಟ ಮಾಡುತ್ತಿರುವುದು ಪೆಟ್ರೋಲ್ ಬೆಲೆ ಇಳಿಸಲೋ? ಅಥವಾ ಅದನ್ನು ಜಿಎಸ್​ಟಿ ಅಡಿಯಲ್ಲಿ ತರುವುದಕ್ಕೋ?" ಎಂದು ಕಿಡಿಕಾರಿದ್ದಾರೆ.



    ಪೆಟ್ರೋಲ್​ ಅನ್ನು ಜಿಎಸ್​ಟಿ ಅಡಿಯಲ್ಲಿ ತರಬೇಕು ಎಂಬ ಕಾಂಗ್ರೆಸ್​ ಒತ್ತಾಯದ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಹೆಚ್​.ಡಿ. ಕುಮಾರಸ್ವಾಮಿ, "ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ?
    ·
    ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು GSTಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ,ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ.
    ·
    ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ.


    ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.
    ·
    ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ.


    ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ.

    ಪಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ" ಎಂದು ಹೆಚ್​.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    Published by:MAshok Kumar
    First published: