ನವದೆಹಲಿ: ಎಐಸಿಸಿ (AICC) ಕಚೇರಿಯಲ್ಲಿ ಸಿದ್ದರಾಮಯ್ಯ (Siddaramaiah) ನೂತನ ಸಿಎಂ ಮತ್ತು ಡಿಕೆ ಶಿವಕುಮಾರ್ (KPCC DK Shivakumar) ಉಪ ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. ನವದೆಹಲಿಯ ಮೌರ್ಯ ಹೋಟೆಲ್ ಬಳಿ ನೂತನ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಮಾಧ್ಯಮ ಸಿಬ್ಬಂದಿ, ನಿಮ್ಮ ಮೊದಲ ಪ್ರತಿಕ್ರಿಯೆ ಏನು ಎಂದು ಕೇಳಿದರು. ಹೈಕಮಾಂಡ್ ಷರತ್ತುಗಳ (Congress High Command Conditions) ನಡುವೆ ಸಿಎಂ ಆಗಿರೋದಕ್ಕೆ ನಿಮಗೆ ಖುಷಿಯಾಗಿದೆಯಾ ಎಂಬ ಆಯಾಮದ ಪ್ರಶ್ನೆಯನ್ನು ಸಿದ್ದರಾಮಯ್ಯ ಅವರಿಗೆ ಕೇಳಲಾಯ್ತು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಏನ್.. ಹೇಳಯ್ಯಾ ನಾನು? ಎಐಸಿಸಿ ತೆಗೆದುಕೊಂಡಿರುವ ನಿರ್ಧಾರವೇ ನನ್ನದು ಎಂದು ಹೇಳಿ ಹೋಟೆಲ್ ಒಳಗೆ ನಡೆದರು.
ಸಿದ್ದರಾಮಯ್ಯ ಟ್ವೀಟ್
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ.
ಸಿದ್ದರಾಮಯ್ಯ ಆಯ್ಕೆಗೆ ಕಾರಣಗಳೇನು?
1.ಲೋಕಸಭೆ ಚುನಾವಣೆ
2.ಅಹಿಂದ ಮತ ಬ್ಯಾಂಕ್
3.ರಾಹುಲ್ ಗಾಂಧಿ ಬೆಂಬಲ
4.ಸಮುದಾಯದ ನಾಯಕ, ಶಾಸಕರ ಬೆಂಬಲ
5.ಎಲ್ಲೂ ಶಕ್ತಿ ಪ್ರದರ್ಶನ ಮಾಡದಿರೋದು
ಇದನ್ನೂ ಓದಿ: Karnataka DCM: ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ, ಎಕ್ಸ್ಟ್ರಾ ಪವರ್ ಏನೂ ಇಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಮನೆ ಮುಂದೆ ರಾರಾಜಿಸುತ್ತಿರುವ ಫ್ಲೆಕ್ಸ್ಗಳು
2ನೇ ಬಾರಿ ಸಿಎಂ ಪಟ್ಟ ಅಲಂಕರಿಸುತ್ತಿರುವ ಸಿದ್ದರಾಮಯ್ಯ ಅವರ ಮನೆ ಮುಂದೆ ಶುಭಾಶಯ ಕೋರಿ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಶುಭ ಕೋರಲು ಅಭಿಮಾನಿಗಳು ಆಗಮಿಸುವ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ