• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Exit Poll ಬಳಿಕ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ, ಡಿಕೆಶಿ ಫುಲ್ ಅಲರ್ಟ್

Exit Poll ಬಳಿಕ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ, ಡಿಕೆಶಿ ಫುಲ್ ಅಲರ್ಟ್

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ

Siddaramaiah And DK Shivakumar: ಸಮೀಕ್ಷೆಗಳಲ್ಲಿ ಪಕ್ಷಕ್ಕೆ ಮುನ್ನಡೆ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸುರ್ಜೇವಾಲಾ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಎಲ್ಲಾ ನಾಯಕರಿಗೆ ಸೂಚನೆ ನೀಡಿದ್ದಾರಂತೆ.

  • Share this:

ಬೆಂಗಳೂರು: ಸಮೀಕ್ಷೆಗಳಲ್ಲಿ (Exit Poll) ಮುನ್ನಡೆ ಬರುತ್ತಿದ್ದಂತೆ ಕಾಂಗ್ರೆಸ್​​​ (Congress) ಕುರ್ಚಿ ಲೆಕ್ಕ ಶುರುವಾಗಿದೆ. ಮುಖ್ಯಮಂತ್ರಿ ರೇಸ್​ನಲ್ಲಿರೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ (KPCC President DK Shivakumar) ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಹೈ ಅಲರ್ಟ್ ಆಗಿದ್ದಾರೆ. ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್​​ ನಾಯಕರು ಅಭ್ಯರ್ಥಿಗಳ ಬೆನ್ನತ್ತಿದ್ದಾರೆ. ಗೆಲ್ಲುವ ಸಾಧ್ಯತೆ ಇರೋ ಅಭ್ಯರ್ಥಿಗಳಿಗೆ ಇಬ್ಬರೂ ನಾಯಕರು ಕರೆ ಮಾಡಿದ್ದಾರೆ ಎನ್ನಲಾಗ್ತಿದೆ. ಹೈವೋಲ್ಟೇಜ್, 50:50, ಟಫ್ ಫೈಟ್​​ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಿದ್ದು, ಸಮೀಕ್ಷೆ ಲೆಕ್ಕ ಆಧರಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.


ಅಂತಿಮವಾಗಿ ಶಾಸಕರಿಂದಲೇ ಸಿಎಂ ಆಯ್ಕೆ ಎಂಬ ಸಂದೇಶವನ್ನು ಹೈಕಮಾಂಡ್ ರವಾನಿಸಿದ ಹಿನ್ನೆಲೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಗೆಲ್ಲೋ ಅಭ್ಯರ್ಥಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಈಗಿನಿಂದಲೇ ಶಾಸಕರನ್ನು ಸಳೆಯುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿದು ಬಂದಿದೆ.


ರಣ್​ದೀಪ್​ ಸುರ್ಜೇವಾಲಾ ಸಲಹೆ


ಸಮೀಕ್ಷೆಗಳಲ್ಲಿ ಪಕ್ಷಕ್ಕೆ ಮುನ್ನಡೆ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸುರ್ಜೇವಾಲಾ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಎಲ್ಲಾ ನಾಯಕರಿಗೆ ಸೂಚನೆ ನೀಡಿದ್ದಾರಂತೆ.


After exit poll survey siddaramaiah and dk shivakumar contacts possible winners mrq
ಸಿದ್ದು-ಡಿಕೆಶಿ ಸ್ಪರ್ಧೆ!


ಇಂದು ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣ್​ದೀಪ್​ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.




ಇದನ್ನೂ ಓದಿ:  Chikkamagaluru: ಇವಿಎಂ ಯಂತ್ರಗಳನ್ನೇ ಮರೆತು ಹೋದ ಅಧಿಕಾರಿಗಳು; ಸಾರ್ವಜನಿಕರಿಂದ ಆಕ್ರೋಶ


ಬಿಜೆಪಿ ಅಲರ್ಟ್ 


ಎಕ್ಸಿಟ್ ಪೋಲ್​ ಬರುತ್ತಿದ್ದಂತೆ ಬಿಜೆಪಿ ಕೂಡ ಅಲರ್ಟ್ ಆಗಿದೆ. ಈ ಬಾರಿ ಅತಂತ್ರ ಫಲಿತಾಂಶ ಬರೋ ಸಾಧ್ಯತೆ ಇರೋದ್ರಿಂದ ಬಿಜೆಪಿ ನಾಯಕರು ಫುಲ್ ಟೆನ್ಷನ್ ಆಗಿದ್ದಾರೆ. ಎಕ್ಸಿಟ್ ಪೋಲ್ ತಲೆಕೆಳಗಾಗುತ್ತೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

First published: