ಬೆಂಗಳೂರು (ನ.10): ರಾಜಾ ರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಆರ್ಆರ್ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದರೆ, ಶಿರಾದಲ್ಲಿ ಇದೇ ಮೊದಲ ಬಾರಿ ಕಮಲ ಅರಳುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಎರಡು ಜಯಗಳು ಬಿಜೆಪಿ ನಾಯಕರ ಖುಷಿ ಹೆಚ್ಚಿಸಿದೆ. ಇದಕ್ಕೆ ಬಿಜೆಪಿ ನಾಯಕರು ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬಿಜೆಪಿಗೆ ಜಯಮಾಲೆ ತೊಡಿಸಿದ ಮತದಾರರಿಗೆ ಕನ್ನಡದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿಸಿದ್ದಾರೆ.
ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು.
ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ.
ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.
— Amit Shah (@AmitShah) November 10, 2020
ರಾಜರಾಜೇಶ್ವರಿ ನಗರದಲ್ಲಿ ಸ್ನೇಹಿತ @MunirathnaMLA ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ... ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರ ಪ್ರಚಾರದ ನೇತೃತ್ವ ವಹಿಸಿದ್ದು ನನಗೆ ಖುಷಿ ತಂದಿದೆ. ಜನ ನಮ್ಮ ಆಡಳಿತವನ್ನು ಮೆಚ್ಚಿದ್ದಾರೆ. ಮುನಿರತ್ನ ಅವರಿಗೆ ಅಭಿನಂದನೆಗಳು... pic.twitter.com/IYaM4ap2Wg
— R. Ashoka (ಆರ್. ಅಶೋಕ) (@RAshokaBJP) November 10, 2020
I congratulate @BJP4Karnataka Karyakartas for the huge victory in Rajarajeshwarinagara & Sira by-elections.
Deepavali has been ushered in earlier with this remarkable performance.
It is time for us to celebrate by distributing sweets & bursting Crackers.#KarnatakaWithBJP
— C T Ravi 🇮🇳 ಸಿ ಟಿ ರವಿ (@CTRavi_BJP) November 10, 2020
ಜನಸೇವೆ ಮಾಡುವ ಪ್ರಾಮಾಣಿಕ ತುಡಿತ, ಸತತ ಪ್ರಯತ್ನ, ಕಾರ್ಯಕರ್ತರ ಬೆಂಬಲ, ಹಿರಿಯ ನಾಯಕರ ಮಾರ್ಗದರ್ಶನಗಳಿದ್ದಲ್ಲಿ ಸಾರ್ವಜನಿಕ ಜೀವನದಲ್ಲಿ ಜನರ ಆಶೀರ್ವಾದ ನಿಶ್ಚಿತ. ಹೀಗೆಯೇ ಇಂದು ಐತಿಹಾಸಿಕ ಜನಾದೇಶ ಪಡೆದು ಶಿರಾ ಉಪಚುನಾವಣೆಯಲ್ಲಿ ಗೆದ್ದ ನಮ್ಮ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡರಿಗೆ ಸಿಹಿ ತಿನಿಸಿ ಅಭಿನಂದನೆ ಸಲ್ಲಿಸಲಾಯಿತು. #BJP4Sira pic.twitter.com/NuaZ3f1sAJ
— Vijayendra Yeddyurappa (@BYVijayendra) November 10, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ