• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಬೆಂಗಳೂರಿನಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ; ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರಿನಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ; ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ( AITUC) ಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಸುಮಾರು ಐದರಿಂದ ಹತ್ತು ಸಾವಿರ ಕಾರ್ಯಕರ್ತೆಯರು ಸೇರುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಮುಂದೆ ಓದಿ ...
  • Share this:

    ಬೆಂಗಳೂರು(ಮಾ.02): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಲು-ಸಾಲು ಪ್ರತಿಭಟನೆಗಳು ನಡೆಯಲಿವೆ. ಒಂದೆಡೆ ಸಾರಿಗೆ ನೌಕರರ ಮುಷ್ಕರ, ಇನ್ನೊಂದೆಡೆ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್​ ಪ್ರತಿಭಟನೆ, ಮಗದೊಂದೆಡೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಅಂಗನವಾಡಿ ಕಾರ್ಯಕರ್ತೆಯರು ಬೃಹತ್​ ರ್ಯಾಲಿಗೆ ಕರೆ ನೀಡಿದ್ದಾರೆ. ಅದರಂತೆ, ಸರ್ಕಾರ ವಿರುದ್ಧ ಪ್ರತಿಭಟನೆ ನಡಸಲು ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. 


    ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ರ್ಯಾಲಿ ಬೆಳಿಗ್ಗೆ 11 ಗಂಟೆಗೆ ಶುರುವಾಗಲಿದೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ಸಾಗಲಿದೆ. ಪ್ರಮುಖ ಬೇಡಿಕೆಗಳನ್ನಿಟ್ಟು ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.


    ಪ್ರಮುಖ ಬೇಡಿಕೆಗಳು


    • ಪಿಂಚಣಿ ಯೋಜನೆಯನ್ನ ಜಾರಿಗೆ ತರಬೇಕು.

    • ಸೇವಾ ನಿರತ ಆಧಾರದಲ್ಲಿ ಗೌರವಧನ ನೀಡಬೇಕು.

    • ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಇಎಸ್ ಐ ಸೌಲಭ್ಯಗಳನ್ನು ಒದಗಿಸಿಕೊಟ್ಟಿಲ್ಲ, ಅದನ್ನು ಮಾಡಬೇಕು

    • ಎಲ್ ಕೆ ಜಿ ಹಾಗೂ ಯು.ಕೆ.ಜಿ ತರಗತಿಗಳನ್ನ ಅಂಗನವಾಡಿಗಳಲ್ಲೆ ಆರಂಭಿಸಬೇಕು.

    • ಮಿನಿ ಅಂಗನವಾಡಿಗಳನ್ನ ಉನ್ನತೀಕರಿಸುವ ಜೊತೆಗೆ ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನ ನೇಮಕಾತಿ ಮಾಡಬೇಕು.

    • ಬಿಎಲ್ ಓ ಜವಾಬ್ದಾರಿಯಿಂದ ಕಾರ್ಯರ್ತೆಯರಿಗೆ ಬಿಡುಗಡೆ ಸಿಗಬೇಕು.

    • ಕೊವೀಡ್ 19 ರ ಪರಿಹಾರವನ್ನ ನೀಡಬೇಕು.


    ಇಂದು ಬೆಂಗಳೂರಿನಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ; ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

    ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ( AITUC) ಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಸುಮಾರು ಐದರಿಂದ ಹತ್ತು ಸಾವಿರ ಕಾರ್ಯಕರ್ತೆಯರು ಸೇರುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.


    ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಿಂದಲೂ ಸಾಕಷ್ಟು ಸಂಖ್ಯೆಯಲ್ಲು ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಿದ್ದಾರೆ. ಪ್ರತಿಭಟನೆಯ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ರ್ಯಾಲಿ ಹೊರಡುವ ಹಿನ್ನೆಲೆ. ಟ್ರಾಫಿಕ್ ಜಾಮ್​ ಉಂಟಾಗುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರ ವಹಿಸಬೇಕಿದೆ.


    ಇನ್ನು, ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಜನ ಸಾಮಾನ್ಯರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಬೆಳಿಗ್ಗೆ 10:30ಕ್ಕೆ ಸಿಟಿ ರೈಲ್ವೆ ನಿಲ್ದಾಣದ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಪಾದಯಾತ್ರೆ ಹೊರಟು, ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆವರೆಗೆ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದ ಪ್ರತಿಭಟನೆ ನಡೆಯಲಿದೆ.


    ಪ್ರತಿಭಟನೆಯಲ್ಲಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳಕರ್, ಸೌಮ್ಯ ರೆಡ್ಡಿ, ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವು ಮಹಿಳಾ ಕಾಂಗ್ರೆಸ್ ಮುಂಖಡರು, ಜೊತೆಗೆ  ಕಾಂಗ್ರೆಸ್ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ.

    Published by:Latha CG
    First published: