ಬೆಂಗಳೂರು (ಜು.4): 2023ರ ವಿಧಾನಸಭೆ ಚುನಾವಣೆಗೆ (Assembly Election) ಈಗಾಗಲೇ ಎಲ್ಲಾ ಪಕ್ಷಗಳು ಸಜ್ಜಾಗುತ್ತಿದೆ. ಘಟಾನುಘಟಿ ನಾಯಕರು ಯಾವ-ಯಾವ ಕ್ಷೇತ್ರಗಳಿಂದ ಅಖಾಡಕ್ಕಿಳಿಯೋದು ಅನ್ನೋ ಲೆಕ್ಕಾಚಾರ ಕೂಡ ಮಾಡ್ತಿದ್ದಾರೆ. ಕಾಂಗ್ರೆಸ್ (Congress) ಹಿರಿಯ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು 2023ರರ ಚುನಾವಣೆಯೇ ತನ್ನ ಕೊನೆಯ ಚುನಾವಣಾ ಸ್ಪರ್ಧೆ ಎಂದು ಅಧಿಕೃತವಾಗಿ ಹೇಳೋ ಮೂಲಕ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೊನೆಯ ಚುನಾವಣೆಯಲ್ಲಿ ಅವರು ಯಾವ ಕ್ಷೇತ್ರದಿಂದ ಅಖಾಡಕ್ಕೆ ಇಳೀತಾರೆ ಅನ್ನೋದೇ ದೊಡ್ಡ ಕುತೂಹಲವಾಗಿದೆ. ಎಲ್ಲೂ ಗುಟ್ಟು ಬಿಟ್ಟು ಕೊಡದ ಸಿದ್ದರಾಮಯ್ಯ, ಬಾದಾಮಿ (Badami) ಕ್ಷೇತ್ರದಲ್ಲಿ ಹೆಚ್ಚಾಗಿ ಓಡಾಡ್ತಿದ್ದಾರೆ. ಆದ್ರೆ ತಂದೆ ಅವರು ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಅನ್ನೋ ಸಣ್ಣ ಸುಳಿವನ್ನು ಶಾಸಕ ಯತೀಂದ್ರ (MLA Yathindra) ಬಿಟ್ಟುಕೊಟ್ಟಿದ್ದರು. ಇದೀಗ ತಮ್ಮ ವರುಣ ಕ್ಷೇತ್ರವನ್ನೇ ತಂದೆಗಾಗಿ ತ್ಯಾಗ ಮಾಡಲು ಮುಂದಾಗಿದ್ದಾರೆ.
ತಂದೆಗಾಗಿ ವರುಣಾ ಕ್ಷೇತ್ರವನ್ನೇ ಬಿಟ್ಟುಕೊಡುವೆ
ತಂದೆಗಾಗಿ ಕ್ಷೇತ್ರದ ತ್ಯಾಗಕ್ಕೂ ಸಿದ್ದರಾಗಿರೋದಾಗಿ ಪುತ್ರ ಯತೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತಾಡಿದ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗಾಗಿ ವರುಣಾ ಕ್ಷೇತ್ರ ಬಿಟ್ಟುಕೊಡುತ್ತೇನೆ. ಜನರು ಹಾಗೂ ಪಕ್ಷ ಅಪೇಕ್ಷಿಸಿದರೆ ಸಿದ್ದರಾಮಯ್ಯ ವರುಣಾದಲ್ಲೇ ಸ್ಪರ್ಧೆ ಮಾಡಲಿ. ನಾನು ಅವರ ಬೆಂಬಲಕ್ಕೆ ನಿಂತು ಅವರ ಗೆಲುವಿಗೆ ಶ್ರಮಿಸುತ್ತೇನೆ. ನಾನು ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಸಿದ್ದರಾಮಯ್ಯ ಗೆಲ್ಲಿಸುವ ಕೆಲಸ ಮಾಡುತ್ತೇನೆ. ಅದು ನನ್ನ ಕರ್ತವ್ಯ ಎಂದ್ರು.
ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಲ್ಲ
ಸಿದ್ದರಾಮಯ್ಯ ವರುಣಾಗೆ ಬಂದ ತಕ್ಷಣ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು ಆತರದ ಯಾವ ಚಿಂತನೆಯನ್ನು ಮಾಡಿಲ್ಲ. ಕ್ಷೇತ್ರದ ಆಯ್ಕೆ ವಿಚಾರಕ್ಕೆ ಇನ್ನೂ ಬಹಳಷ್ಟು ಸಮಯ ಇದೆ. ಬಹಳಷ್ಟು ಕ್ಷೇತ್ರಗಳಿಂದ ಸಿದ್ದರಾಮಯ್ಯ ಗೆ ಆಹ್ವಾನ ಇದೆ. ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಅಳೆದು ತೂಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ತಾರೆ. ಕ್ಷೇತ್ರದ ಆಯ್ಕೆ ಬಗ್ಗೆ ತುರ್ತಾಗಿ ಚರ್ಚೆ ಮಾಡಿಲ್ಲ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ.
ಇದನ್ನೂ ಓದಿ: Bengaluru Property Prices: ಬೆಂಗಳೂರಿನ ಯಾವ ಏರಿಯಾದಲ್ಲಿ ಫ್ಲಾಟ್ಗಳ ಬೆಲೆ ಎಷ್ಟಿದೆ? ಇಲ್ಲಿದೆ ವಿವರ
ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನವಲ್ಲ
ಸಿದ್ದರಾಮೋತ್ಸವದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ, ಇದು ಶಕ್ತಿ ಪ್ರದರ್ಶನ ಅಲ್ಲ, ಇದು ಕೇವಲ ತಂದೆಯ ಹುಟ್ಟುಹಬ್ಬದ ಅಮೃತ ಮಹೋತ್ಸವ ಅಷ್ಟೇ. ಇದರಲ್ಲಿ ರಾಜಕೀಯ ಹುಡುಕಬೇಡಿ. ಕಾಕತಾಳಿಯವಾಗಿ ಚುನಾವಣೆಯ ವರ್ಷವೇ ಅವರ ಅಮೃತ ಮಹೋತ್ಸವ ಬಂದಿದೆ. ಹೀಗಾಗಿ ಈ ವಿಚಾರ ಚರ್ಚೆಯಾಗುತ್ತಿದ್ದೆ. ಎಲ್ಲಾ ಪಕ್ಷದವರನ್ನೂ ಸೇರಿಸಿಕೊಂಡು ಅಮೃತ ಮಹೋತ್ಸವ ಆಚರಿಸಿದರೆ ರಾಜಕೀಯವಾಗಿ ಬೇರೆ ರೀತಿಯ ಚರ್ಚೆಗಳು ಆಗುತ್ತೆ. ಹೀಗಾಗಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಈ ಸಮಾರಂಭ ಆಯೋಜಿಸುತ್ತಿದ್ದೇವೆ.
ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳುವ ಪ್ರಶ್ನೆಯೇ ಇದರಲ್ಲಿ ಇಲ್ಲ. ಪಕ್ಷಕ್ಕೆ ಮೊದಲು ಬಹುಮತ ಬರಬೇಕು. ನಂತರ ಶಾಸಕರು, ಶಾಸಕಾಂಗದ ನಾಯಕನನ್ನು ಆಯ್ಕೆ ಮಾಡಬೇಕು. ಹೈಕಮಾಂಡ್ ತನ್ನ ನಿಲುವು ತಿಳಿಸಬೇಕು ಅಂತವರು ಸಿಎಂ ಅಗುತ್ತಾರೆ. ಈಗಲೇ ಅದನ್ನು ಬಿಂಬಿಸಿಕೊಳ್ಳುವ ಅಗತ್ಯ ಯಾರಿಗೂ ಇಲ್ಲ ಎಂದು ಮೈಸೂರಿನಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Bengaluru: ಬೆಂಗಳೂರು ಗಾರ್ಡನ್ ಸಿಟಿಯಿಂದ ಗಾಂಜಾ ಸಿಟಿ ಆಗಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರತಾಪ ಸಿಂಹ ಏನು ಮಹಾರಾಜರಾ ?
ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ vs ಕಾಂಗ್ರೆಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತೀಂದ್ರ, ಪ್ರತಾಪಸಿಂಹ ಮಾಡದ ಕೆಲಸ ಮಾಡಿದೆ ಅಂತಾ ಹೇಳುತ್ತಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಅಂತಾ ಪ್ರಶ್ನಿಸಿದ್ದರು. ಅದೇ ಕಾರಣಕ್ಕೇ ಈ ರೀತಿಯ ವಾತಾವರಣ ನಿರ್ಮಾಣವಾಗಿದೆ. ಪ್ರತಾಪ ಸಿಂಹ ಏನು ಮಹಾರಾಜರಾ? ಎಂದು ಯತೀಂದ್ರ ಕಿಡಿಕಾರಿದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ