ಬೆಂಗಳೂರಿನಲ್ಲಿ ಉದ್ಯಮಿಯ ಮಗ ಕಿಡ್ನ್ಯಾಪ್; 2 ಕೋಟಿಗೆ ಬೇಡಿಕೆ ಇಟ್ಟ ಕಿರಾತಕರು
ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡು 2 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
news18-kannada Updated:August 29, 2020, 9:19 AM IST

ಪ್ರಾತಿನಿಧಿಕ ಚಿತ್ರ
- News18 Kannada
- Last Updated: August 29, 2020, 9:19 AM IST
ಬೆಂಗಳೂರು(ಆ.29): ಬೆಂಗಳೂರಿನಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದು ಪೋಷಕರನ್ನು ಬೆಚ್ಚಿ ಬೀಳಿಸುವ ಮತ್ತೊಂದು ಸುದ್ದಿಯಾಗಿದೆ. ಮಕ್ಕಳನ್ನು ಮನೆ ಮುಂದೆ ಆಟವಾಡಲು ಬಿಟ್ಟಾಗ ಜಾಗರೂಕವಾಗಿರಿ. ಯಾಕೆಂದರೆ ದುಷ್ಕರ್ಮಿಗಳು ಮನೆ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಅಪಹರಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ನಡೆದಿದೆ. ಸದ್ಯ ಪೊಲೀಸರು ಕಿಡ್ನ್ಯಾಪ್ ಆಗಿದ್ದ ಬಾಲಕನನ್ನು ರಕ್ಷಿಸಿದ್ದಾರೆ. ಆ ಮೂಲಕ ಈ ಪ್ರಕರಣ ಸುಖಾಂತ್ಯ ಕಂಡಿದೆ.
ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡು 2 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಮೊಹಮ್ಮದ್ ಸಾದಿಕ್ ಮತ್ತು ಉಸ್ಮಾ ದಂಪತಿ 11 ವರ್ಷದ ಪುತ್ರ ಕಿಡ್ನ್ಯಾಪ್ ಆಗಿದ್ದ ಹುಡುಗ. ಇವರು ಭಾರತೀನಗರದಲ್ಲಿ ವಾಸಿಸುತ್ತಿದ್ದರು. ಅಪಹರಣಕಾರರಿಂದ ಕರೆ ಬಂದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಹುಬ್ಬಳ್ಳಿಯಲ್ಲಿ ಕಾರ್ಮಿಕ ಭವನ ಕಾಮಗಾರಿ ವೀಕ್ಷಣೆ ಮಾಡಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್
ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದರು.ಬೆಂಗಳೂರು ಪೂರ್ವ ವಿಭಾಗ ಪೊಲೀಸರು ಅಪಹರಣಕಾರರ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಿದ್ದರು. ಪೂರ್ವ ವಿಭಾಗ ಡಿಸಿಪಿ ಡಾ.ಶರಣಪಪ್ ನೇತೃತ್ವದಲ್ಲಿ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಸತತ ಕಾರ್ಯಾಚರಣೆಯ ಬಳಿಕ ಪೊಲೀಸರು ತುಮಕೂರು ಬಳಿ ಕಿಡ್ನ್ಯಾಪರ್ಸ್ ಬೆನ್ನತ್ತಿದ್ದರು.
ಕೊನೆಗೂ ಅಪಹರಣಕಾರರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾದರು. ಸದ್ಯ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡು 2 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಮೊಹಮ್ಮದ್ ಸಾದಿಕ್ ಮತ್ತು ಉಸ್ಮಾ ದಂಪತಿ 11 ವರ್ಷದ ಪುತ್ರ ಕಿಡ್ನ್ಯಾಪ್ ಆಗಿದ್ದ ಹುಡುಗ. ಇವರು ಭಾರತೀನಗರದಲ್ಲಿ ವಾಸಿಸುತ್ತಿದ್ದರು. ಅಪಹರಣಕಾರರಿಂದ ಕರೆ ಬಂದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದರು.ಬೆಂಗಳೂರು ಪೂರ್ವ ವಿಭಾಗ ಪೊಲೀಸರು ಅಪಹರಣಕಾರರ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಿದ್ದರು. ಪೂರ್ವ ವಿಭಾಗ ಡಿಸಿಪಿ ಡಾ.ಶರಣಪಪ್ ನೇತೃತ್ವದಲ್ಲಿ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಸತತ ಕಾರ್ಯಾಚರಣೆಯ ಬಳಿಕ ಪೊಲೀಸರು ತುಮಕೂರು ಬಳಿ ಕಿಡ್ನ್ಯಾಪರ್ಸ್ ಬೆನ್ನತ್ತಿದ್ದರು.
ಕೊನೆಗೂ ಅಪಹರಣಕಾರರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾದರು. ಸದ್ಯ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.