• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ ಶುರು; ಮಲೆನಾಡು, ಕೊಡಗಿನಲ್ಲಿ 3 ದಿನ ಮಳೆ ಸಾಧ್ಯತೆ

Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ ಶುರು; ಮಲೆನಾಡು, ಕೊಡಗಿನಲ್ಲಿ 3 ದಿನ ಮಳೆ ಸಾಧ್ಯತೆ

ಮಳೆಯಿಂದ ಜಲಾವೃತವಾದ ಬೆಂಗಳೂರು

ಮಳೆಯಿಂದ ಜಲಾವೃತವಾದ ಬೆಂಗಳೂರು

Karnataka Rain Updates: ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರ, ಸಂಪಿಗೆ ರಸ್ತೆ, ಶ್ರೀನಿವಾಸನಗರ, ಗಿರಿನಗರ, ಹನುಮಂತನಗರ, ಕತ್ರಿಗುಪ್ಪೆ, ಜಯನಗರ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಸಣ್ಣಗೆ Rain ಸುರಿಯುತ್ತಿದೆ.

  • Share this:

ಬೆಂಗಳೂರು (ಜ. 6): 2 ದಿನಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಮಳೆ ಮತ್ತೆ ಇಂದು ದರ್ಶನ ಕೊಟ್ಟಿದೆ. Bengaluru ಮಲ್ಲೇಶ್ವರಂ, ರಾಜಾಜಿನಗರ, ಸಂಪಿಗೆ ರಸ್ತೆ, ಶ್ರೀನಿವಾಸನಗರ, ಗಿರಿನಗರ, ಹನುಮಂತನಗರ, ಕತ್ರಿಗುಪ್ಪೆ, ಜಯನಗರ, ಶೇಷಾದ್ರಿಪುರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಸಣ್ಣಗೆ Rain ಸುರಿಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಈಗ ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.


ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 3 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಇಂದು ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ವೇಳೆಗೆ ಉಳಿದ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯೂ ಇದೆ.


ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಜನವರಿ 8ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ: ಕುಟುಂಬ ರಾಜಕಾರಣದಲ್ಲಿ ತಪ್ಪೇನು? ದೇವೇಗೌಡರ ಬಳಿ ಒಳ್ಳೆ ತಳಿಯ ಬೀಜವಿದೆ!; ಜೆಡಿಎಸ್ ಪರ ಸಿ.ಎಂ ಇಬ್ರಾಹಿಂ ಬ್ಯಾಟಿಂಗ್


3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜ.8ರವರೆಗೂ ಇದೇ ರೀತಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ ನಿರ್ದೇಶಕ ಡಾ.ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.


ಮಲೆನಾಡು ಮಾತ್ರವಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

First published: