ಬೆಂಗಳೂರು (ಜ. 28): ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದೇಶ ಪೂರ್ವಕವಾಗಿ ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದಾರೆ. ಅಮಾಯಕ ಬೀದಿ ಬದಿಯ ನಾಯಿ ಮೇಲೆ ಇವರು ದೌರ್ಜನ್ಯ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಕೂಡ ವ್ಯಕ್ತವಾಗಿದೆ. ಈ ಪ್ರಕರಣಕ್ಕೆ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನಲೆ ಈ ಕುರಿತು ಹುಳಿಮಾವು ಪೊಲೀಸರು ನಿವೃತ್ತ ಅಧಿಕಾರಿ ಮೇಲೆ ಪ್ರಕರಣ ದಾಖಲಿಸಿದ್ದಾರೆ. 65 ವರ್ಷದ ನಾಗೇಶಯ್ಯ ಈ ಕೃತ್ಯ ಎಸಗಿದವರು. ತಮ್ಮ ಮಗನೊಂದಿಗೆ ಕಾರಿನಲ್ಲಿ ಹೋಗಿದ್ದ ನಾಗೇಶಯ್ಯ, ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಗಾಡಿ ಹತ್ತಿಸಿದ್ದಾರೆ. ನಾಯಿಯನ್ನು ಹಾರನ್ ಮಾಡಿ ಓಡಿಸುವ ಯತ್ನ ನಡೆಸದೆ ಮೂಕ ಜೀವಿಯ ಮೇಲೆ ಈ ರೀತಿ ಅಮಾನವೀಯವಾಗಿ ವರ್ತಿಸಿದ ಅವರ ಕಾರ್ಯಕ್ಕೆ ವಿರೋಧ ವ್ಯಕ್ತವಾಗಿದೆ. ಇನ್ನು ನಿವೃತ್ತ ಅಧಿಕಾರಿ ಉದ್ದೇಶ ಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಸಿಸಿಟಿವಿ ಸಾಕ್ಷಿಯಾಗಿದೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
What an absolutely disgusting human being to have done this to a hapless stray. https://t.co/M2QFTKWmEc pic.twitter.com/1OMR6sUR8G
— Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@AiyshwaryaM) January 27, 2021
He was a retired police officer!!
How did he treat people when he was a cop?
I hope he is punished severely! https://t.co/b5BCb5g6CP
— Lavanya Ballal | ಲಾವಣ್ಯ ಬಲ್ಲಾಳ್ (@LavanyaBallal) January 27, 2021
ಘಟನೆ ಕುರಿತು ಕಾಂಗ್ರೆಸ್ ನಾಯಕಿ ಐಶ್ವರ್ಯಾ ಮಂಚನಹಳ್ಳಿ ಮಹದೇವ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿಟಿಜನ್ ಫಾರ್ ಅನಿಮಲ್ ಬರ್ತ್ ಕಂಟ್ರೋಲ್, ಬಿಬಿಎಂಪಿ ಮತ್ತು ನಾಗೇಶ್ ವಿರುದ್ಧ ದೂರು ದಾಖಲಿಸಿ ಚಿಕಿತ್ಸೆ ನೀಡಿದ ವೈದ್ಯರ ಕ್ರಮವನ್ನು ಶ್ಲಾಘಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ