• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bengaluru: ಪೊಲೀಸ್ ಸಿಬ್ಬಂದಿಯ ಕೆಲಸಕ್ಕೆ ಭಾರೀ ಮೆಚ್ಚುಗೆ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

Bengaluru: ಪೊಲೀಸ್ ಸಿಬ್ಬಂದಿಯ ಕೆಲಸಕ್ಕೆ ಭಾರೀ ಮೆಚ್ಚುಗೆ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ವಿದ್ಯಾರ್ಥಿಗೆ ಸಹಾಯ

ವಿದ್ಯಾರ್ಥಿಗೆ ಸಹಾಯ

Hoysala Police: ಹೊಯ್ಸಳ ವಾಹನದಲ್ಲಿಯೇ ವಿದ್ಯಾರ್ಥಿಯನ್ನು ಕರೆದುಕೊಂಡು ಹೋಗಲಾಗಿದೆ. ಇದೀಗ ಹೊಯ್ಸಳ ಸಿಬ್ಬಂದಿಗಳಾದ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

  • News18 Kannada
  • 3-MIN READ
  • Last Updated :
  • Bangalore, India
  • Share this:

ಬೆಂಗಳೂರು: ನಗರದ  ಹೊಯ್ಸಳ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆ ಶನಿವಾರ (ಮೇ 19) ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಮೇ 19ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kantheerava Stadium) ಪ್ರಮಾಣ ವಚನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಈ ಹಿನ್ನೆಲೆ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ದೊಡ್ಡಮಟ್ಟದಲ್ಲಿಯೇ ಟ್ರಾಫಿಕ್ (Bengaluru Traffic) ಜಾಮ್ ಉಂಟಾಗಿತ್ತು. ಇನ್ನು ಅಂದೇ ಸಿಇಟಿ ಪರೀಕ್ಷೆ ಇತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಪೊಲೀಸರು ಎಚ್ಚರಿಕೆ ತೆಗೆದುಕೊಂಡಿದ್ದಾರೆ.


ಶನಿವಾರ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯನ್ನು ಕೊತ್ತನೂರು ಹೊಯ್ಸಳ ಪೊಲೀಸ್ ಸಿಬ್ಬಂದಿ ಮೆಜೆಸ್ಟಿಕ್​ ಬಸ್ ನಿಲ್ದಾಣದಿಂದ ಕೋರಮಂಗಲದ ಜೆಎನ್​​ಸಿ ಕಾಲೇಜಿಗೆ ಕೇವಲ 15 ನಿಮಿಷದಲ್ಲಿ ಕರೆದುಕೊಂಡು ಹೋಗಿ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಂಡಿದ್ದಾರೆ.


ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ


ಹೊಯ್ಸಳ ವಾಹನದಲ್ಲಿಯೇ ವಿದ್ಯಾರ್ಥಿಯನ್ನು ಕರೆದುಕೊಂಡು ಹೋಗಲಾಗಿದೆ. ಇದೀಗ ಹೊಯ್ಸಳ ಸಿಬ್ಬಂದಿಗಳಾದ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.


ಇದನ್ನೂ ಓದಿ:  Bengaluru Rains: ಭಾರೀ ಮಳೆ ಸೂಚನೆ ​ಬೆನ್ನಲ್ಲೇ ಸಂಚಾರಿ ಪೊಲೀಸರು ಅಲರ್ಟ್; ಸಿಬ್ಬಂದಿಗೆ ಹೊಸ ಟಾಸ್ಕ್



ಧನ್ಯವಾದ ಹೇಳಿದ ವಿದ್ಯಾರ್ಥಿ


ಟ್ರಾಫಿಕ್​ನಿಂದಾಗಿ ಮಧ್ಯಾಹ್ನ 1.45ಕ್ಕೆ ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದೆ. ಆದ್ರೆ ಪರೀಕ್ಷೆ 2 ಗಂಟೆ ಆರಂಭವಾಗುತ್ತಿತ್ತು. ಆಗ ನಾನು ಹೊಯ್ಸಳ ಪೊಲೀಸ್ ಸಿಬ್ಬಂದಿಯ ಸಹಾಯ ತೆಗೆದುಕೊಂಡೆ. ಸೈರನ್ ಹಾಕಿಕೊಂಡು ಕೇವಲ 15 ನಿಮಿಷದಲ್ಲಿಯೇ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಕ್ಕೆ ಪೊಲೀಸ್ ಸಿಬ್ಬಂದಿಗೆ ನನ್ನ ಧನ್ಯವಾದಗಳು ಎಂದು ವಿದ್ಯಾರ್ಥಿ ಹೇಳಿದ್ದಾನೆ.

top videos
    First published: