• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bengaluru Rains: ಮಾನ್ಸೂನ್ ಪೂರ್ವ ಮಳೆಗೆ ಸಿಟಿ ಮಂದಿ ಕಂಗಾಲು; ಪಾಲಿಕೆ ಅಧಿಕಾರಿಗಳಿಗೆ ಡಿಕೆಶಿ ಖಡಕ್​ ಸೂಚನೆ!

Bengaluru Rains: ಮಾನ್ಸೂನ್ ಪೂರ್ವ ಮಳೆಗೆ ಸಿಟಿ ಮಂದಿ ಕಂಗಾಲು; ಪಾಲಿಕೆ ಅಧಿಕಾರಿಗಳಿಗೆ ಡಿಕೆಶಿ ಖಡಕ್​ ಸೂಚನೆ!

ಬೆಂಗಳೂರಿನಲ್ಲಿ ಭರ್ಜರಿ ಮಳೆ

ಬೆಂಗಳೂರಿನಲ್ಲಿ ಭರ್ಜರಿ ಮಳೆ

ಮಳೆಯಿಂದ ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಡಿಕೆಶಿ ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಮತ್ತೆ ಮಳೆರಾಯನ ಅಬ್ಬರ ಶುರುವಾಗಿದೆ‌. ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ (Rain) ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ರಾತ್ರಿಯಾದರೂ ಮಳೆ ಮುಂದುವರೆದಿದ್ದು, ಇದೇ ರೀತಿ ಇನ್ನೆರಡು ದಿನಗಳ ಕಾಲ ನಗರದಲ್ಲಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ (Meterological Department) ನೀಡಿದೆ.‌ ಇತ್ತ ತೀವ್ರ ಮಳೆ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ (DK Shivakumar) ಮೌಖಿಕ ಸೂಚನೆ ನೀಡಿದ್ದಾರೆ.


ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.




ಇದನ್ನೂ ಓದಿ: Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವರುಣನ ಅಬ್ಬರ; ಸಿಡಿಲಿಗೆ ಇಬ್ಬರು ಬಲಿ! ಎಲ್ಲೆಲ್ಲಿ ಏನೇನಾಯ್ತು?


ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.


ಇನ್ನು, ಮಳೆ ಪರಿಹಾರ ಕ್ರಮಗಳ ಕುರಿತಂತೆ ಪಾಲಿಕೆ ಅಧಿಕಾರಿಗಳು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಉಪ ಮುಖ್ಯಮಂತ್ರಿಗಳು ಮತ್ತು ‌ಬೆಂಗಳೂರು‌ ಅಭಿವೃದ್ಧಿ ಸಚಿವರ ಮಾರ್ಗದರ್ಶನದಂತೆ ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಅನಾಹುತ ತಡೆಯಲು ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ.


ಎಲ್ಲಾ ವಲಯಗಳ ಜಂಟಿ ಆಯುಕ್ತರು ಮತ್ತು ಕಾರ್ಯಪಾಲಕ ಅಭಿಯಂತರರು ಈಗಾಗಲೇ ಆಯಾ ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾಗಬಹುದಾದ ಪ್ರದೇಶಗಳ ವ್ಯಾಪ್ತಿಯಲ್ಲಿ ಇದ್ದು ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪಾಲಿಕೆಯ ಅರಣ್ಯ ಇಲಾಖೆಯ ಅಧಿಕಾರಿಗಳೂ ಸಹಾ ಸನ್ನದ್ಧ ಸ್ಥಿತಿಯಲ್ಲಿದ್ದು ಯಾವುದೇ ವಿಪತ್ತಿನ ಪರಿಸ್ಥಿತಿಯನ್ನು ಎದುರಿಸಿ ನಿರ್ವಹಿಸಲು ಕಾರ್ಯಪ್ರವೃತ್ತರಾಗಿದ್ದಾರೆ.


ಉಪ ಮುಖ್ಯಮಂತ್ರಿಗಳು ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಪಾಲಿಕೆ ಆಡಳಿತಾಧಿಕಾರಿಗಳು ಮತ್ತು ಮುಖ್ಯ ಆಯುಕ್ತರಿಗೆ ಈ ಕುರಿತು ನಿರ್ದೇಶನ‌ ನೀಡಿದ್ದು, ಎಲ್ಲಾ ಅಧಿಕಾರಿಗಳು ಕಾರ್ಯತತ್ಪರರಾಗಿದ್ದಾರೆ ಎಂದು ತಿಳಿಸಲಾಗಿದೆ.

First published: