ಬೆಂಗಳೂರು(ಆ.31): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಸುಮಾರು 7 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೋರಮಂಗಲದ 80 ಅಡಿ ರಸ್ತೆಯ ಮಂಗಳ ಕಲ್ಯಾಣ ಮಂಟಪದ ಬಳಿ ಈ ದುರಂತ ಘಟನೆ ನಡೆದಿದೆ.
ಅಪಘಾತಕ್ಕೀಡಾದ ಕಾರು ಆಡಿ ಕ್ಯೂ ಎನ್ನಲಾಗಿದ್ದು, ವೇಗವಾಗಿ ಬಂದಿದ್ದೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ತಡರಾತ್ರಿ ಬಹಳ ವೇಗವಾಗಿ ಬಂದ ಕಾರು ಫುಟ್ಪಾತ್ಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿಯಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ:Fertility Issues: ಬಂಜೆತನ ಸಮಸ್ಯೆ ನಿವಾರಣೆಗೆ ಯೋಗಾಸನ ಹೇಗೆ ಸಹಾಯ ಮಾಡುತ್ತದೆ ಗೊತ್ತಾ?
ಕಾರಿನ ಮುಂಬದಿ ಸೀಟಿನಲ್ಲಿ ಮೂವರು, ಹಿಂದೆ ನಾಲ್ವರು ಕುಳಿತಿದ್ದರು. ಮೃತರೆಲ್ಲರೂ 25-30ರ ವಯೋಮಾನದವರು ಮತ್ತು ಸ್ನೇಹಿತರು. ಮೃತರಲ್ಲಿ ದಂಪತಿ ಸಹ ಇದ್ದರು. ಕರುಣಾಸಾಗರ , ಬಿಂದು (28) - ದಂಪತಿ, ಇಶಿತಾ (21), ಡಾ.ಧನುಶಾ (21), ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ (23) ಮೃತರು ಎಂದು ತಿಳಿದು ಬಂದಿದೆ. ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಕ್ಷಯ್ ಗೋಯಲ್ ಕೇರಳಾ ಮೂಲದವನು, ಉತ್ಸವ್ - ಹರ್ಯಾಣ, ರೋಹಿತ್ - ಹುಬ್ಬಳ್ಳಿ, ಕರುಣಾ ಸಾಗರ್- ಹೊಸೂರು ಮೂಲದವನು. ಉಳಿದವರು ಕೋರಮಂಗಲದ ಜೋಲೋ ಸ್ಟೇ ಪಿ.ಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಇದನ್ನೂ ಓದಿ:Xiaomi: 5ನೇ ಬಾರಿಗೆ ದರ ಹೆಚ್ಚಿಸಿದ Redmi Note 10; ಈ ಸ್ಮಾರ್ಟ್ಫೋನ್ಗೆ ಅಷ್ಟೊಂದು ಬೇಡಿಕೆ ಇದೆಯಾ?
ಕಾರಿನಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, 3 ಜನ ಯುವರಿಯರು ಹಾಗೂ 4 ಜನ ಹುಡುಗರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಮಧ್ಯರಾತ್ರಿ ಸುಮಾರು 1.30ಕ್ಕೆ ನಡೆದಿದ್ದು, ಸ್ಥಳಕ್ಕೆ ಆಡುಗೋಡಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ