ಬೆಂಗಳೂರು (ಜೂನ್ 26): ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಗುರುವಾರ ಬೆಳಗ್ಗೆ ನಡುರಸ್ತೆಯಲ್ಲೇ ರೇಖಾ ಅವರ ಕತ್ತು ಸೀಳಿ, ದೇಹಕ್ಕೆ 12 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಕಾಲಿಗೆ ನಿನ್ನೆ ಗುಂಡು ಹಾರಿಸಿ, ಬಂಧಿಸಿದ್ದ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ರೇಖಾ ಕೊಲೆ ಆರೋಪಿಗಳಾದ ಸೂರ್ಯ ಮತ್ತು ಪೀಟರ್ ಮೇಲೆ ಫೈರಿಂಗ್ ನಡೆಸಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಸ್ಟೀಫನ್, ಅಜಯ್, ಪುರುಷೋತ್ತಮ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುರುಷೋತ್ತಮ್ ಈ ಕೊಲೆಯ ದೃಶ್ಯಗಳು ರೆಕಾರ್ಡ್ ಆಗದಂತೆ ಆ ಏರಿಯಾದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ತಿರುಗಿಸಿದ್ದ. ನಿನ್ನೆ ಮಧ್ಯಾಹ್ನ ಪೀಟರ್ ಮತ್ತು ಸೂರ್ಯನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಒಟ್ಟು ಐವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: Bangalore Murder: ಬೆಂಗಳೂರಿನ ನಡುರಸ್ತೆಯಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕತ್ತು ಸೀಳಿ ಬರ್ಬರ ಹತ್ಯೆ
ಕದಿರೇಶ್ ಅವರ ಅಕ್ಕ ಮಾಲಾಳ ಶಿಷ್ಯನಾಗಿದ್ದ ಪುರುಷೋತ್ತಮ್ ಈ ಹಿಂದೆ ನಡೆದ ರೌಡಿ ಶೀಟರ್ ಶೋಭಾನ್ ಕೊಲೆ ಕೇಸ್ ನಲ್ಲೂ ಆರೋಪಿಯಾಗಿದ್ದ. ಸಿಸಿಟಿವಿಗಳನ್ನ ಪುರುಷೋತ್ತಮ್ ಡೈವರ್ಷನ್ ಮಾಡಿದ ಹಿನ್ನಲೆ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸೂರ್ಯನ ಪ್ಲಾನಿನಂತೆ ಕೊಲೆ ನಡೆದ ಏರಿಯಾದ ಸಿಸಿಟಿವಿಗಳ ಡೈವರ್ಷನ್ ಚೇಂಜ್ ಮಾಡಿದ್ದ ಪುರುಷೋತ್ತಮ್ ಇದೀಗ ಪೊಲೀಸರ ವಶದಲ್ಲಿದ್ದಾನೆ.
ಪೀಟರ್ ಹಾಗೂ ಸೂರ್ಯನ ಜೊತೆಗೂಡಿ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ರೇಖಾ ಕದಿರೇಶ್ ಕಚೇರಿ ಸುತ್ತಮುತ್ತ ಸಿಸಿಟಿವಿಗಳ ಡೈವರ್ಟ್ ಮಾಡಿ, ಈ ಮೂವರು ಆಕೆಯ ಚಲನವಲನಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ನಿನ್ನೆಯೇ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕೊಲೆ ಪ್ರಕರಣದಲ್ಲಿ ಮೂವರು ಭಾಗಿಯಾಗಿರುವುದು ಸಾಬೀತಾಗಿರುವುದರಿಂದ ಬಂಧಿಸಲಾಗಿದೆ. ಕೊಲೆ ಬಳಿಕ ಬೆಂಗಳೂರಿನಲ್ಲಿ ಅಡಗಿದ್ದ ಮೂವರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ: Shocking News: ಮಾಂತ್ರಿಕನಿಂದ ದಿನವೂ ಕನಸಲ್ಲೇ ಅತ್ಯಾಚಾರ!; ಮಹಿಳೆಯ ದೂರು ಕೇಳಿ ಪೊಲೀಸರೇ ಶಾಕ್
ನಿನ್ನೆ ಮಧ್ಯಾಹ್ನ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಮಾರಕಾಸ್ತ್ರಗಳಿಂದ ಹಲ್ಲೆ ಮುಂದಾದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಕಾಮಾಕ್ಷಿಪಾಳ್ಯದ ದೇವಸ್ಥಾನ ಸಮೀಪ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿತ್ತು.
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರ ಹೊಟ್ಟೆ ಭಾಗಕ್ಕೆ 8 ಬಾರಿ ಇರಿದಿದ್ದ ಸೂರ್ಯ ಬಳಿಕ ಪರಾರಿಯಾಗಿದ್ದ. ಅವರ ಕತ್ತಿನ ಭಾಗಕ್ಕೆ ನಾಲ್ಕು ಬಾರಿ ಇರಿದಿದ್ದ ಪೀಟರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ರೇಖಾ ಅವರ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಮಾರು 12 ಬಾರಿ ಇರಿದು ಕೊಲೆ ಮಾಡಲಾಗಿತ್ತು. ರೇಖಾ ಅವರನ್ನು ಕಚೇರಿಯಿಂದ ಹೊರಗೆ ಕರೆದುಕೊಂಡು ಬಂದಿದ್ದು ಕೂಡ ಇದೇ ಪೀಟರ್. ಹೊರಗೆ ಬಂದ ರೇಖಾ ಅವರ ಮೇಲೆ ಮನಬಂದಂತೆ ಇರಿದು, ಕತ್ತು ಸೀಳಿ ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ: Bangalore Crime: ಮಾಜಿ ಕಾರ್ಪೋರೇಟರ್ ರೇಖಾ ಕೊಲೆ ಪ್ರಕರಣ; ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್
ಬೆಂಗಳೂರಿನಲ್ಲಿ ಚಲವಾದಿಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಮೇಲೆ ಗುರುವಾರ ಬೆಳಗ್ಗೆ ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಚಾಕುವಿನಿಂದ ಕುತ್ತಿಗೆ ಸೀಳಿ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೋರೇಟರ್ ರೇಖಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಚಲವಾದಿಪಾಳ್ಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಬೆಳಗ್ಗೆ ಕಚೇರಿಯಿಂದ ಹೊರಗೆ ಬರುತ್ತಿದ್ದಂತೆ ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಲಾಗಿತ್ತು. ರೇಖಾ ಕದಿರೇಶ್ ಕಚೇರಿ ಮುಂದೆಯೇ ಹಲ್ಲೆ ಮಾಡಿದ ಆರೋಪಿಗಳು ಎಸ್ಕೇಪ್ ಆಗಿದ್ದರು. ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ನಡೆಸಿದ್ದ ಅವರು ಬಳಿಕ ಪರಾರಿಯಾಗಿದ್ದರು. ಇನ್ನೂ ವಿಪರ್ಯಾಸವೆಂದರೆ, ಈ ಮೊದಲು ರೇಖಾ ಅವರ ಗಂಡ ಕದಿರೇಶ್ ಅವರನ್ನು ಕೂಡ 3 ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.
ಮುಂಜಾನೆಯಿಂದಲೇ ಆಕೆಯ ಚಲನವಲನಗಳ ಮೇಲೆ ಮೂವರು ಕೊಲೆಗಾರರು ಕಣ್ಣಿಟ್ಟಿದ್ದರು. ಮುಂಜಾನೆ 8 ಗಂಟೆಯಿಂದಲೂ ಆಕೆಯ ಚಲನವಲನಗಳನ್ನು ಗಮನಿಸುತ್ತಿದ್ದರು. ಬೆಳಗ್ಗೆ ರೇಖಾ ಕದಿರೇಶ್ ಊಟ ಕೊಡುವಾಗಲೂ ಕಚೇರಿಯ ಬಳಿಯೇ ಸುತ್ತಾಡಿದ್ದ ಕೊಲೆಗಾರರು ಯಾರಿಗೂ ಅನುಮಾನ ಬಾರದ ಹಾಗೆ ಸಿಸಿ ಟಿವಿ ಕ್ಯಾಮರಾಗಳನ್ನು ಡೈವರ್ಟ್ ಮಾಡಿದ್ದರು. ಮೂರು ಸಿಸಿ ಕ್ಯಾಮರಾಗಳನ್ನು ವಿಶುವಲ್ ಕಾಣದ ಹಾಗೆ ಡೈವರ್ಷನ್ ಮಾಡಿದ್ದರು. ಬೆಳಗ್ಗೆ ಸುಮಾರು 8.30ರ ವೇಳೆಗೆ ಫುಡ್ ಕಿಟ್ ಹಂಚಿಕೆ ಆದ ಬಳಿಕ ಮನೆಗೆ ಹೋಗಿದ್ದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ 9:30ರ ಸುಮಾರಿಗೆ ಮತ್ತೆ ಕಚೇರಿಯತ್ತ ಬಂದಿದ್ದರು. ಕಚೇರಿಗೆ ಬಂದ ಕೂಡಲೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಶುರು ಮಾಡಿದ್ದರು. ಈ ವೇಳೆ ಆರೋಪಿ ಪೀಟರ್ ರೇಖಾ ಕದಿರೇಶ್ ಜೊತೆ ಮಾತನಾಡಲು ಬಂದಿದ್ದ. ಸುಮಾರು 10 ನಿಮಿಷಗಳು ಮಾತನಾಡಿ ಆಕೆಯನ್ನು ಹೊರಗಡೆ ಕರೆದುಕೊಂಡು ಬಂದಿದ್ದ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ