• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bengaluru Namma Metro: ಬೆಳಗ್ಗೆ 7ರಿಂದ ಸಂಜೆ 6ರವರೆಗೆ ನಮ್ಮ ಮೆಟ್ರೋ ಸೇವೆ; 50% ಪ್ರಯಾಣಿಕರಿಗೆ ಮಾತ್ರ ಅವಕಾಶ

Bengaluru Namma Metro: ಬೆಳಗ್ಗೆ 7ರಿಂದ ಸಂಜೆ 6ರವರೆಗೆ ನಮ್ಮ ಮೆಟ್ರೋ ಸೇವೆ; 50% ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರಿನ ನಮ್ಮ ಮೆಟ್ರೋ

ಬೆಂಗಳೂರಿನ ನಮ್ಮ ಮೆಟ್ರೋ

ಈ ಮೊದಲು ಬೆಳಗ್ಗೆ 7ರಿಂದ ಬೆಳಗ್ಗೆ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತೀ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆ ಪ್ರಯಾಣಿಕರಿಗೆ ಲಭ್ಯವಿತ್ತು.

  • Share this:

    ಬೆಂಗಳೂರು(ಜು.01): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಹಂತ-ಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಲಾಗುತ್ತಿದೆ. ಸದ್ಯಕ್ಕೆ 2ನೇ ಹಂತದ ಅನ್​ಲಾಕ್ ಕರ್ನಾಟಕದಲ್ಲಿ ಜಾರಿಯಲ್ಲಿದೆ. ಕೆಲವು ಷರತ್ತುಗಳೊಂದಿಗೆ ಬಸ್ ಹಾಗೂ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ, ಜುಲೈ 1ರಿಂದ ಬೆಂಗಳೂರು ಮೆಟ್ರೋದಲ್ಲಿ ಜನರು ಬೆಳಗ್ಗೆಯಿಂದ ಸಂಜೆವರೆಗೂ ಪ್ರಯಾಣಿಸಬಹುದಾಗಿದೆ.


    ಈ ಮೊದಲು ಬೆಳಗ್ಗೆ 7ರಿಂದ ಬೆಳಗ್ಗೆ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತೀ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆ ಪ್ರಯಾಣಿಕರಿಗೆ ಲಭ್ಯವಿತ್ತು.


    ಈಗ ಈ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿರುವ ಬಿಎಂಆರ್​ಸಿಎಲ್​, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಿಗೆ ನಮ್ಮ ಮೆಟ್ರೋ ಸೇವೆ ಲಭ್ಯವಿರಲಿದೆ ಎಂದು ಹೇಳಿದೆ. ಜೊತೆಗೆ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.


    ಇದನ್ನೂ ಓದಿ:Cooking Oil Price: ಗೃಹಿಣಿಯರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತಂತೆ..!


    ಜನರು ಕಡ್ಡಾಯವಾಗಿ ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಜನದಟ್ಟಣೆಯ ಸಂದರ್ಭದಲ್ಲಿ 5 ‌ನಿಮಿಷಕ್ಕೆ ಒಂದರಂತೆ,  ಜನದಟ್ಟಣೆ  ಇಲ್ಲದ ವೇಳೆ 15 ನಿಮಿಷಕ್ಕೆ ಒಂದರಂತೆ  ಮೆಟ್ರೋ ರೈಲುಗಳು ಸಂಚಾರ ಮಾಡುತ್ತವೆ ಎಂದು ಬಿಎಂಆರ್​​ಸಿಎಲ್​​​​ ಹೇಳಿದೆ.


    ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಮೆಟ್ರೋ ಸಂಚಾರ ಇರುತ್ತದೆ. ಶನಿವಾರ ಮತ್ತು ಭಾನುವಾರ ವೀಕೆಂಡ್​ ಕರ್ಫ್ಯೂ ಇರುವ ಹಿನ್ನೆಲೆ, ಮೆಟ್ರೋ ಸಂಚಾರ ಇರಲ್ಲ. ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದಾಗಿದೆ. ನಮ್ಮ ಮೆಟ್ರೋ ಸ್ಟೇಷನ್ ಗಳಲ್ಲಿ ಟೋಕನ್ ನೀಡಲಾಗುತ್ತಿದೆ.


    ಇದನ್ನೂ ಓದಿ:LPG Price Hike: ಗ್ರಾಹಕರಿಗೆ ಶಾಕಿಂಗ್​ ನ್ಯೂಸ್; ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ಏರಿಕೆ


    ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಮೆಟ್ರೋ ರೈಲುಗಳನ್ನು ಕಡಿಮೆ ಮಾಡುವ ಅಥವಾ ಹೆಚ್ಚು ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೂಡ ಬಿಎಂಆರ್​ಸಿಎಲ್​ ಹೇಳಿದೆ. ಈ ಹಿಂದೆ ಬೆಳಗ್ಗೆ 7 ರಿಂದ 11 ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ಮೆಟ್ರೋ ಸಂಚಾರವಿತ್ತು.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:Latha CG
    First published: