• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕಾಂಗ್ರೆಸ್​ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ನಿರ್ಮಾಣ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಾಂಗ್ರೆಸ್​ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ನಿರ್ಮಾಣ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಸರ್ಕಾರದ ವಿರುದ್ಧ ಕಾಂಗ್ರೆಸ್ ನಿಂದ ಹೋರಾಟ ವಿಚಾರ ಮಾತನಾಡಿದ ಡಿಕೆಶಿ, ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸದ್ಯ ಜನರ ಕಷ್ಟಕ್ಕೆ ನಾವು ಸ್ಪಂದಿಸಿಬೇಕು. ಇದು ಆರೋಗ್ಯದ ವಿಚಾರ. ಈ ಸಮಯದಲ್ಲಿ ಜನರ ಜೊತೆಗೆ ನಾವು ಇರಬೇಕು. ಈಗ ಹೋರಾಟ ಮುಖ್ಯವಲ್ಲ. ಆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು.

ಮುಂದೆ ಓದಿ ...
  • Share this:

    ಬೆಂಗಳೂರು: ಹಿರಿಯ ನಾಯಕ ಎಸ್.ಪಿ ಸಿದನ್ನಾಳ ನಮ್ಮ ಜೊತೆಗಿಲ್ಲ. ಸುರ್ಜೇವಾಲಾ ಅವರು ಕೋವಿಡ್ ಸಮಯದಲ್ಲಿ ಯಾವ ರೀತಿ ಜವಾಬ್ದಾರಿ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು. ಕಾಂಗ್ರೆಸ್ ಪಕ್ಷ ನಿಭಾಯಿಸಬೇಕಾದ ಜವಾಬ್ದಾರಿ ಬಗ್ಗೆ ಸಲಹೆ ನೀಡಿದ್ದಾರೆ. 51 ನಾಯಕರು ಸಲಹೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದರು.


    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ಮಾಡ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್ ,ಔಷಧ ಸರಬರಾಜು ಮಾಡಲು ಆಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ. ಸರ್ಕಾರ ಏಕಾಏಕಿಯಾಗಿ ಲಾಕ್ ಡೌನ್ ಘೋಷಣೆ ಮಾಡಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಜನರಿಗೆ ಆರ್ಥಿಕ ಪ್ಯಾಕೇಜ್ ನೀಡಬೇಕು. ಪ್ಯಾಕೇಜ್ ಕೊಡುವಂತೆ ನಾವು ಒತ್ತಾಯ ಮಾಡುತ್ತೇವೆ. ಯಾವ ರೀತಿ ಒತ್ತಾಯ ಮಾಡಬೇಕು ಎಂದು ಚರ್ಚೆ ಮಾಡ್ತೇವೆ ಎಂದರು.


    ಇದನ್ನು ಓದಿ: ಲಾಕ್​ಡೌನ್​ನಿಂದ ಸಂಕಷ್ಟಕ್ಕೀಡಾದ ಕಾರ್ಮಿಕರಿಗೆ 10 ಸಾವಿರ ರೂ. ಆರ್ಥಿಕ ನೆರವು ಘೋಷಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ


    ಅಕ್ಕಿ ಪ್ರಮಾಣ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಸರ್ಕಾರಕ್ಕೆ ನಾಚಿಕೆ ಆಗಬೇಕು.  ಎರಡು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಏಳು ಕೆಜಿ ಅಕ್ಕಿ ಕೊಡುತ್ತಿದ್ದೆವು.  ಅದನ್ನು ಎರಡು ಕೆಜಿ ಮಾಡಿದ್ದಾರೆ. ಇವರ ಕೈಯಿಂದ ಕೊಡುತ್ತಿದ್ದಾರಾ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.


    ಸರ್ಕಾರದ ವಿರುದ್ಧ ಕಾಂಗ್ರೆಸ್ ನಿಂದ ಹೋರಾಟ ವಿಚಾರ ಮಾತನಾಡಿದ ಡಿಕೆಶಿ, ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸದ್ಯ ಜನರ ಕಷ್ಟಕ್ಕೆ ನಾವು ಸ್ಪಂದಿಸಿಬೇಕು. ಇದು ಆರೋಗ್ಯದ ವಿಚಾರ. ಈ ಸಮಯದಲ್ಲಿ ಜನರ ಜೊತೆಗೆ ನಾವು ಇರಬೇಕು. ಈಗ ಹೋರಾಟ ಮುಖ್ಯವಲ್ಲ. ಆ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದರು.

    Published by:HR Ramesh
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು