• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Banglore Heli Tourism: ಗೋವಾ, ಪಾಂಡಿಚೆರಿಗೆ ಇನ್ಮೇಲೆ ಎಲ್ಲರೂ ಹೆಲಿಕಾಪ್ಟರ್​ನಲ್ಲಿ ಓಡಾಡಬಹುದು !

Banglore Heli Tourism: ಗೋವಾ, ಪಾಂಡಿಚೆರಿಗೆ ಇನ್ಮೇಲೆ ಎಲ್ಲರೂ ಹೆಲಿಕಾಪ್ಟರ್​ನಲ್ಲಿ ಓಡಾಡಬಹುದು !

ಹೆಲಿಕಾಪ್ಟರ್ (ಪ್ರಾತಿನಿಧಿಕ ಚಿತ್ರ).

ಹೆಲಿಕಾಪ್ಟರ್ (ಪ್ರಾತಿನಿಧಿಕ ಚಿತ್ರ).

ಈ ವರ್ಷದ ಏಪ್ರಿಲ್‌ನಲ್ಲಿ, ಮೈಸೂರಿನಿಂದ ಹೆಲಿಕಾಪ್ಟರ್ ಪ್ರವಾಸೋದ್ಯಮವನ್ನು ಆರಂಭಿಸುವುದು ಇಲಾಖೆಯ ಉದ್ದೇಶವಾಗಿತ್ತು. ಆದರೆ, ಸಂಸದ ಪ್ರತಾಪ ಸಿಂಗ್ ಮತ್ತು ಪರಿಸರ ಕಾರ್ಯಕರ್ತರ, ರಾಜಮನೆತನದ ವಿರೋಧದಿಂದಾಗಿ ಯೋಜನೆಯನ್ನು ಕೈಬಿಡಲಾಗಿತ್ತು.

  • Share this:

    ಬೆಂಗಳೂರು (ಜೂನ್ 23); ರಾಜ್ಯದಲ್ಲಿ ಹೆಲಿ ಟೂರಿಸಂ ಅನ್ನು ಅಭಿವೃದ್ಧಿಪಡಿಸಬೇಕು ಎಂಬುದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ. ಇದೇ ಕಾರಣಕ್ಕೆ ಉತ್ತರ ಕರ್ನಾಟಕದ ಹಂಪಿ ಉತ್ಸವ ಮತ್ತು ಮೈಸೂರಿನ ವಿಶ್ವ ವಿಖ್ಯಾತ ದಸರಾ ಉತ್ಸವದ ಸಂದರ್ಭದಲ್ಲಿ ಹೆಲಿಕಾಫ್ಟರ್​ ಮೂಲಕ ಕಡಿಮೆ ಖರ್ಚಿನಲ್ಲಿ ಪ್ರವಾಸಿಗರಿಗೆ ಇಡೀ ನಗರವನ್ನು ಸುತ್ತುವ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪ್ರವಾಸೋದ್ಯಮ ಇಲಾಖೆ, ಜಕ್ಕೂರ್ ಏರೋಡ್ರೋಮ್ ಸೇರಿದಂತೆ ನಗರದ ಪ್ರಮುಖ ಐದು ವಾಯುನೆಲೆಗಳನ್ನು ಹೆಲಿ-ಪ್ರವಾಸೋದ್ಯಮ ಉದ್ದೇಶಗಳಿಗಾಗಿ ಬಳಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಯುವ ಮತ್ತು ಕ್ರೀಡಾ ಸೇವೆಗಳ ಇಲಾಖೆ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರ (ಎಐಐ) ಯಿಂದ ಅನುಮೋದನೆ ಪಡೆದಿದೆ ಎಂದು ತಿಳಿದುಬಂದಿದೆ.


    ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಈ ಬಗ್ಗೆ ಮಾತನಾಡಿದ್ದು​, "ಜಕ್ಕೂರ್ ಅನ್ನು ಲ್ಯಾಂಡಿಂಗ್ ಮತ್ತು ಟೇಕ್-ಆಫ್ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಪ್ರವಾಸಿಗರು ಗೋವಾ, ತಮಿಳುನಾಡು, ಪಾಂಡಿಚೆರಿ ಮತ್ತು ಕೇರಳಕ್ಕೆ ಹೆಲಿಕಾಪ್ಟರ್‌ಗಳ ಮೂಲಕ ಕರೆದೊಯ್ಯಲು ಸರ್ಕ್ಯೂಟ್​ಗಳನ್ನು ಸಿದ್ಧಪಡಿಸಲಾಗುವುದು. ಹೆಲಿ-ಪ್ರವಾಸೋದ್ಯಮ ಸೇವೆಗಳನ್ನು ವಿವಿಐಪಿಗಳು ಮತ್ತು ತುರ್ತು ಸೇವೆಗಳಿಗೆ ಸಹ ಬಳುಸುವ ಯೋಚನೆ ಇದೆ" ಎಂದು ಮಾಹಿತಿ ನೀಡಿದ್ದಾರೆ.


    ಪ್ರವಾಸೋದ್ಯಮ ಇಲಾಖೆ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, "ಜಕ್ಕೂರ್‌ನಲ್ಲಿ ನಿರ್ಮಿಸಲು ಉದ್ದೇಶಿಸಲಾದ ಹೆಲಿಪೋರ್ಟ್ ಹೆಲಿಕಾಪ್ಡ್‌ಗಳನ್ನು ಹೊಂದಿದ್ದು, ಒಂದೇ ಸಮಯದಲ್ಲಿ ಆರು ಹೆಲಿಕಾಪ್ಟರ್‌ಗಳನ್ನು ಟೇಕ್-ಆಫ್ ಮಾಡಲು ಮತ್ತು ಇಳಿಯಲು ಸಾಧ್ಯವಾಗುತ್ತದೆ. ಈಗಿನಂತೆ, ಸೇವೆಗಳಿಗಾಗಿ ಮೂರು ಏಜೆನ್ಸಿಗಳನ್ನು ಸಹ ಅಂತಿಮಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.


    ಇದನ್ನೂ ಓದಿ: Delta Plus Variant in India| ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳು; ಇವು ಮೂರನೇ ಅಲೆಯ ಸೂಚನೆಯೇ?


    ಬೆಂಗಳೂರಿನ ಹೊರತಾಗಿ, ಮೈಸೂರು, ಮಂಗಳೂರು, ಬಳ್ಳಾರಿ ಧಾರವಾಡ ಮತ್ತು ಕಲಬುರಗಿ ಸೇರಿದಂತೆ ರಾಜ್ಯದ ಇತರ ಪ್ರದೇಶಗಳಲ್ಲಿ ಹೆಲಿ-ಪ್ರವಾಸೋದ್ಯಮವನ್ನು ಪ್ರಾರಂಭಿಸಲಾಗುವುದು. ಈ ಮೂಲಕ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಹೆಲಿಕಾಪ್ಟರ್ ಪ್ರಯಾಣಕ್ಕೆ ಅನುವು ಮಾಡಿಕೊಡುವುದು ಪ್ರವಾಸೋದ್ಯಮ ಇಲಾಖೆಯ ಮಹತ್ವಾಕಾಂಕ್ಷೆಯಾಗಿದೆ ಎನ್ನಲಾಗುತ್ತಿದೆ.


    ಈ ವರ್ಷದ ಏಪ್ರಿಲ್‌ನಲ್ಲಿ, ಮೈಸೂರಿನಿಂದ ಹೆಲಿಕಾಪ್ಟರ್ ಪ್ರವಾಸೋದ್ಯಮವನ್ನು ಆರಂಭಿಸುವುದು ಇಲಾಖೆಯ ಉದ್ದೇಶವಾಗಿತ್ತು. ಆದರೆ, ಸಂಸದ ಪ್ರತಾಪ ಸಿಂಗ್ ಮತ್ತು ಪರಿಸರ ಕಾರ್ಯಕರ್ತರು, ಮೈಸೂರಿನ ರಾಜಮನೆತನದವರು ಈ ಯೋಜನೆಗಾಗಿ ಹೋಟೆಲ್ ಬಳಿ ಮರಗಳನ್ನು ಕಡಿಯುವ ಪ್ರಸ್ತಾಪವನ್ನು ಆಕ್ಷೇಪಿಸಿದ ನಂತರ ವಿವಾದಕ್ಕೀಡಾಗಿ ಯೋಜನೆಯನ್ನು ಕೈಬಿಡಲಾಗಿತ್ತು.


    ಇದನ್ನೂ ಓದಿ: Corona Vaccine| ಕೊರೋನಾ ಲಸಿಕೆಯಿಂದ ಸ್ತ್ರೀ-ಪುರುಷರಲ್ಲಿ ಬಂಜೆತನ ಉಂಟಾಗುವುದಿಲ್ಲ; ಆರೋಗ್ಯ ಸಚಿವಾಲಯ ಸ್ಪಷ್ಟನೆ!


    ಪರಿಸರ ಕಾರ್ಯಕರ್ತರ ಪ್ರಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಕುಲಬರಹಳ್ಳಿಯ ನಾಲ್ಕು ಎಕರೆ ಪ್ರದೇಶದಲ್ಲಿ ಲಲಿತಾ ಮಹಲ್ ಪ್ಯಾಲೇಸ್ ಹೋಟೆಲ್ ಎದುರು ವಿವಿಧ ಜಾತಿಯ 150 ಮರಗಳನ್ನು ಕಡಿಯಲು ಉದ್ದೇಶಿಸಿತ್ತು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಮೈಸೂರಿನಲ್ಲಿ ಈ ಯೋಜನೆಯನ್ನು ಕೈಬಿಡಲಾಗಿದ್ದು, ಈಗಿನಂತೆ ಅರಮನೆ ಹೋಟೆಲ್‌ನಿಂದ ಹೆಲಿ-ಪ್ರವಾಸೋದ್ಯಮವನ್ನು ಪ್ರಾರಂಭಿಸುವ ಯೋಜನೆ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published: