• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸಮಯ ಮೀರಿ ರಸ್ತೆ ತಡೆ; ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ

ಸಮಯ ಮೀರಿ ರಸ್ತೆ ತಡೆ; ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ

ವಾಟಾಳ್ ನಾಗರಾಜ್ (ಸಾಂದರ್ಭಿಕ ಚಿತ್ರ).

ವಾಟಾಳ್ ನಾಗರಾಜ್ (ಸಾಂದರ್ಭಿಕ ಚಿತ್ರ).

ಇನ್ನು, ರೈತ ಸಂಘಟನೆಗಳ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸದ್ಯ ಮುಕ್ತಾಯವಾಗಿದೆ. ಕುರುಬೂರು ಶಾಂತಕುಮಾರ್ ಹಾಗೂ ಇತರೆ ಸಂಘಟನೆಗಳು ಪ್ರತಿಭಟನೆ ಮುಗಿಸಿ ಹೊರಟರು. ಬಳಿಕ ಪೊಲೀಸರು ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು

  • Share this:

    ಬೆಂಗಳೂರು(ಡಿ.08): ಕೃಷಿ ಮಸೂದೆ ಕಾಯ್ದೆ ವಿರೋಧಿಸಿ ಇಂದು ದೇಶಾದ್ಯಂತ ಭಾರತ್​ ಬಂದ್​ಗೆ ಕರೆ ನೀಡಿದ್ದು, ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಾಂಗ್ರೆಸ್​ ನಾಯಕರು ಕೂಡ ಭಾರತ್​ ಬಂದ್​ಗೆ ಬೆಂಬಲ ನೀಡಿದ್ದಾರೆ. ಬೆಳಗ್ಗೆಯಿಂದಲೇ ವಿವಿಧ ರೈತ ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ರಾಜ್ಯ ಕಾಂಗ್ರೆಸ್​ ನಾಯಕರು ರೈತ ಮಸೂದೆ ಕಾಯ್ದೆ ವಿರೋಧಿಸಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್, ಟೌನ್​ಹಾಲ್ ಸೇರಿದಂತೆ ಹಲವೆಡೆ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್​ ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


    ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ವಾಟಾಳ್ ನಾಗರಾಜ್, ಸಾರಾ ಗೋವಿಂದು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದರು. ಸಮಯ ಮೀರಿ ರಸ್ತೆ ತಡೆ ನಡೆಸಿ, ರಸ್ತೆ ಮಧ್ಯೆ ಪ್ರತಿಭಟನೆಗೆ ಕುಳಿತ ಕಾರಣ ವಾಟಾಳ್ ನಾಗರಾಜ್ ಹಾಗೂ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದಿದ್ದಾರೆ.


    Bharath Bandh: ಸೆಕ್ಷನ್ 144​​ ನಡುವೆಯೂ ವಿಧಾನಸೌಧದ ಬಳಿ ಕಪ್ಪು ಬಾವುಟ ಹಿಡಿದು ಕಾಂಗ್ರೆಸ್​ ನಾಯಕರ ಪ್ರತಿಭಟನೆ


    ಇಂದು ಬೆಳಗ್ಗೆಯಿಂದ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಬಂದ್ ಕಾವು ಹೆಚ್ಚಾಗಿತ್ತು. ವಿವಿಧ ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿದರು.


    ಇನ್ನು, ರೈತ ಸಂಘಟನೆಗಳ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸದ್ಯ ಮುಕ್ತಾಯವಾಗಿದೆ. ಕುರುಬೂರು ಶಾಂತಕುಮಾರ್ ಹಾಗೂ ಇತರೆ ಸಂಘಟನೆಗಳು ಪ್ರತಿಭಟನೆ ಮುಗಿಸಿ ಹೊರಟರು. ಬಳಿಕ ಪೊಲೀಸರು ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬ್ಯಾರಿಕೇಡ್ ತೆರವುಗೊಳಿಸಲಾಯಿತು. ಸುಮಾರು 7 ತಾಸುಗಳಿಂದ ಬ್ಲಾಕ್ ಆಗಿದ್ದ ರಸ್ತೆ ಈಗ ಸಂಚಾರಕ್ಕೆ ಓಪನ್ ಆಗಿದೆ.


    ರೈತ ಸಂಘಟನೆಗಳು ಪ್ರತಿಭಟನೆ ಮುಗಿಸಿ ಹೊರಟರೂ, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದವು. ಸಮಯ ಮೀರಿ ರಸ್ತೆ ತಡೆ ಮಾಡಿದ್ದರಿಂದ  ಪೊಲೀಸರು ವಾಟಾಳ್ ನಾಗರಾಜ್ ಹಾಗೂ ಇತರೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು