• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • BJP Manifesto: ಕರುನಾಡಿನ ಮುಂದೆ ತನ್ನ ಭರವಸೆ, ಕನಸು ಬಿಚ್ಚಿಟ್ಟ ಬಿಜೆಪಿ; ಪ್ರಣಾಳಿಕೆಯಲ್ಲಿವೆ ಮಹತ್ವದ ಘೋಷಣೆಗಳು

BJP Manifesto: ಕರುನಾಡಿನ ಮುಂದೆ ತನ್ನ ಭರವಸೆ, ಕನಸು ಬಿಚ್ಚಿಟ್ಟ ಬಿಜೆಪಿ; ಪ್ರಣಾಳಿಕೆಯಲ್ಲಿವೆ ಮಹತ್ವದ ಘೋಷಣೆಗಳು

ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

  • News18 Kannada
  • 5-MIN READ
  • Last Updated :
  • Karnataka, India
  • Share this:

ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election 2023) ಹಿನ್ನೆಲೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದೆ. ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಕರುನಾಡಿನ ಜನತೆ ಮುಂದೆ ಹಲವು ಭರವಸೆಯನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಬಿಜೆಪಿ ಭರವಸೆಗಳು


ಬಿಪಿಎಲ್​ ಕುಟುಂಬಗಳಿಗೆ ಯುಗಾದಿ, ಗಣೇಶ ಮತ್ತು ದೀಪಾವಳಿ ಹಬ್ಬಕ್ಕೆ ಮೂರು ಎಲ್​ಪಿಜಿ ಸಿಲಿಂಡರ್ ಉಚಿತ


ಪ್ರತಿ ವಾರ್ಡ್​​ನಲ್ಲಿಯೂ ಅಟಲ್ ಆಹಾರ ಕೇಂದ್ರ ಸ್ಥಾಪನೆ


ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಉಚಿತವಾಗಿ ಅರ್ಧ ಲೀಟರ್ ನಂದಿನಿ ಹಾಲು ವಿತರಣೆ


ಶ್ರೀ ಅನ್ನ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಸಿರಿಧಾನ್ಯ ವಿತರಣೆ




ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ಮನೆಗಳ ನಿರ್ಮಾಣ
ಏಕರೂಪ ನಾಗರಿಕೆ ಸಂಹಿತೆ ಅಭಯ


ಮುಂದಿನ ಐದು ವರ್ಷಗಳಲ್ಲಿ 200 ಮೀನು ಕೃಷಿ ಉತ್ಪಾದನಾ ಕೇಂದ್ರಗಳ ಸ್ಥಾಪನೆ.


ಹೈನುಗಾರರಿಗೆ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್​​ಗೆ 5 ರಿಂದ 7 ರೂಪಾಯಿ ಏರಿಕೆ


ಮೊಬೈಲ್ ಪಶು ಆರೋಗ್ಯ ಕ್ಲಿನಿಕ್ ಆರಂಭ


ಪ್ರತಿ ಜಿಲ್ಲೆಯಲ್ಲಿ ಐಐಟಿ ಮಾದರಿಯ ಕೆಐಟಿ (ಕರ್ನಾಟಕ ತಂತ್ರಜ್ಞಾನ ಸಂಸ್ಥೆ) ಆರಂಭ


ಇದನ್ನೂ ಓದಿ:  Kusuma H: ಸಚಿವ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗಂಭೀರ ಆರೋಪ; ದೂರು ದಾಖಲು


ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳ ಮೇಲ್ದರ್ಜೆ


ಮೈಸೂರಿನಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ದೇಶದ ಅತಿದೊಡ್ಡ ಪುನೀತ್ ರಾಜ್​ಕುಮಾರ್ ಫಿಲ್ಮ್ ಸಿಟಿ ಸ್ಥಾಪನೆ

First published: