ಬೆಂಗಳೂರು: ಚುನಾವಣೆ ಹತ್ತಿರವಾಗ್ತಿದೆ ಕಾಂಗ್ರೆಸ್-ಬಿಜೆಪಿ (Congress-BJP) ನಡುವೆ ಜಟಾಪಟಿ ಜೋರಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಟಿಪ್ಪು ನಿಜ ಕನಸು (Tipu Nija Kanasu) ಎಂಬ ಪುಸ್ತಕ ಹಾಗೂ ನಾಟಕ (Book And Drama) ಬಿಡುಗಡೆಯಾಗಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದರ ಮಧ್ಯೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯರನ್ನೇ (Former CM Siddaramaiah) ಬಿಜೆಪಿ ಗುರಿಯಾಗಿಸಿ ‘ಸಿದ್ದು ನಿಜ ಕನಸು’ ಎನ್ನುವ ಪುಸ್ತಕ ಬಿಡುಗಡೆ ಮುಂದಾಗಿದೆ. ಇಂದು ಬೆಂಗಳೂರಿನ ಪುರಭವನದಲ್ಲಿ ‘ಸಿದ್ದು ನಿಜ ಕನಸು’ ಪುಸ್ತಕವನ್ನು (Siddu Nija Kanasu Book) ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ (Minister Ashwath Narayan) ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಹಿಂದೂ ಸಮಾಜವನ್ನ (Hindu Community) ನಡೆಸಿಕೊಂಡ ರೀತಿಯನ್ನೇ ಹೈಲೈಟ್ ಮಾಡಿ ಪುಸ್ತಕ ಬರೆದಿರುವ ನಿರೀಕ್ಷೆ ಇದ್ದು, ರಾಜ್ಯ ರಾಜಕಾರಣದಲ್ಲಿ (Karnataka Politics) ಭಾರೀ ಗಲಾಟೆ ಸೃಷ್ಠಿ ಮಾಡುವ ಸಾಧ್ಯತೆ ಇದೆ.
ಅಶ್ವಥ್ ನಾರಾಯಣ್ ಟ್ವೀಟ್
"ಸಿದ್ದು ನಿಜಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ ಎಂದು ಸಚಿವ ಅಶ್ವಥ್ ನಾರಾಯಣ್ ಟ್ವೀಟ್ ಮಾಡಿದ್ದಾರೆ
ಕಾಂಗ್ರೆಸ್ನಿಂದ ದೂರು ದಾಖಲು
ಸಿದ್ದರಾಮಯ್ಯ ಅವರ ಹೆಸರು ಬಳಸಿ ತೇಜೋವದೆ ಮಾಡಲಾಗುತ್ತಿದೆ. ಪುಸ್ತಕದ ಮುಖಪುಟದಲ್ಲಿ ಅವರ ಭಾವಚಿತ್ರವನ್ನ ವಿರೂಪಗೊಳಿಸಲಾಗಿದೆ. ಕಲ್ಪಿತ, ಅವಹೇಳನಕಾರಿ, ಪ್ರಚೋದನಕಾರಿ ಬರಹ ಈ ಪುಸ್ತಕದಲ್ಲಿದೆ. ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸಾಮರಸ್ಯ ಕದಡುವ ಕೆಲಸವಾಗಿದೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು ಮಾಡಬೇಕು ಎಂದು ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನಲ್ಲಿ ಏನಿದೆ?
ಜನವರಿ 9ರಂದು ಎಸ್.ಜೆ.ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರೂಪಗೊಳಿಸಿದ ಭಾವಚಿತ್ರವನ್ನು ಬಳಸಿ ‘ಸಿದ್ದು ನಿಜ ಕನಸುಗಳು’ ಎಂಬ ಶೀರ್ಷಿಕೆಯಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಸದರಿ ಕಾರ್ಯಕ್ರಮಕ್ಕೆ ಸಚಿವರಾದ ಅಶ್ವಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಪಠ್ಯ ಪುಸ್ತಕ ಪುನರ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದ ವಿವಾದಾತ್ಮಕ ವ್ಯಕ್ತಿ ರೋಹಿತ್ ಚಕ್ರತೀರ್ಥ ಹಾಗೂ ಇತರ ವ್ಯಕ್ತಿಗಳು ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆಹ್ವಾನ ಪತ್ರಿಕೆಯಲ್ಲಿ ಪುಸ್ತಕದ ಮುಖಪುಟ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯರ ಕುರಿತು ಅವಹೇಳನಕಾರಿ, ಕಪೋಕಲ್ಪಿತ, ಪ್ರಚೋದನಕಾರಿ ಲೇಖನಗಳನ್ನು ಒಳಗೊಂಡಿರುವುದು ಎಂದು ಸ್ಪಷ್ಟವಾಗಿದೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯ
ಆಹ್ವಾನ ಪತ್ರಿಕೆಯಲ್ಲಿರುವ ಅತಿಥಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಚಾರಗಳನ್ನು ಮತ್ತು ಒಂದು ಸಮುದಾದಯದ ವಿರುದ್ಧ ಪ್ರಚೋದನೆ ನೀಡುವ ಬರಹಗಳನ್ನು ಪ್ರಕಟಿಸುವ ಮೂಲಕ ವಿವಾದಗಳನ್ನು ಸೃಷ್ಟಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿರುತ್ತಾರೆ.
ಇದನ್ನೂಓದಿ: Janardhana Reddy: ರಾಮುಲು ನನ್ನ ಅಣ್ಣ, ಬೇರೆ ಪಕ್ಷಕ್ಕೆ ಹೋಗಲ್ಲ; ಜನಾರ್ದನ ರೆಡ್ಡಿಗೆ ಶಾಕ್ ಕೊಟ್ಟ ಸ್ವಂತ ಸಹೋದರ
ಕಾರ್ಯಕ್ರಮ ರದ್ದುಗೊಳಿಸುವಂತೆ ಮನವಿ
ಸಿದ್ದರಾಮಯ್ಯ ಅವರ ಭಾವಚಿತ್ರ ವಿರೂಪಗೊಳಿಸಿ ಸಾಮರಸ್ಯ ಕದಡುವ ಹುನ್ನಾರ ಹೊಂದಿದ್ದು, ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದರೆ ರದ್ದು ಮಾಡಬೇಕು.
"ಸಿದ್ದು ನಿಜಕನಸುಗಳು" ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ.
ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನೀವೂ ಬನ್ನಿ. pic.twitter.com/GRnvlmqGrp
— Dr. Ashwathnarayan C. N. (@drashwathcn) January 8, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ