Bengaluru: ಬಿಎಂಟಿಸಿ ಬಸ್​ಗೆ ಏಕಾಏಕಿ ತಗುಲಿದ ಬೆಂಕಿ, ನಿರ್ವಾಹಕ ಸಜೀವ ದಹನ!

ಸುಟ್ಟು ಕರಕಲಾದ ಬಿಎಂಟಿಸಿ ಬಸ್

ಸುಟ್ಟು ಕರಕಲಾದ ಬಿಎಂಟಿಸಿ ಬಸ್

ಡಿಪೋ 31ಕ್ಕೆ ಸೇರಿದ ಬಿಎಂಟಿಸಿ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ. ಈ ವೇಳೆ ಬಸ್​ನಲ್ಲೇ ಮಲಗಿದ್ದ ಮುತ್ತಯ್ಯಸ್ವಾಮಿ ಹೊರಬರಲಾಗದೇ ಅಲ್ಲೇ ಸುಟ್ಟು ಮೃತಪಟ್ಟಿದ್ದಾರೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು(ಮಾ.10): ಬೆಳಗ್ಗಿನ ಜಾವ ಸುಮಾರು ನಾಲ್ಕು ಗಂಟೆಗೆ ಬಿಎಂಟಿಸಿ ಬಸ್​​ಗೆ(BMTC Bus) ಏಕಾಏಕಿ ಬೆಂಕಿ ತಗುಲಿದ ಪರಿಣಾಮ ಬಸ್​ನಲ್ಲಿದ್ದ ನಿರ್ವಾಹಕ (Bus Conductor) ಸಜೀವ ದಹನಗೊಂಡಿದ್ದಾರೆ. ಹೌದು ಡಿಪೋ 31ಕ್ಕೆ ಸೇರಿದ ಬಿಎಂಟಿಸಿ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿದೆ 9Fire Tragedy). ಈ ವೇಳೆ ಬಸ್​ನಲ್ಲೇ ಮಲಗಿದ್ದ ಮುತ್ತಯ್ಯಸ್ವಾಮಿ ಹೊರಬರಲಾಗದೇ ಅಲ್ಲೇ ಸುಟ್ಟು ಮೃತಪಟ್ಟಿದ್ದಾರೆ.


ಮೃತ ನಿರ್ವಾಹಕ 45 ವರ್ಷದ ಮುತ್ತಯ್ಯಸ್ವಾಮಿ ಮೂಲತಃ ಗದಗ ಮೂಲದವರು. ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ನಿರ್ವಾಹಕರಾಗದ್ದರು. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕ ಅದರಲ್ಲೇ ಮಲಗಿದ್ದರು. ಆದರೆ ಇಂದು ಬೆಳಗ್ಗಿನ ಜಾವ ಸುಮಾರು 4.26 ಕ್ಕೆ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.


ಇದನ್ನೂ ಓದಿ:  Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್


ಹೀಗಿರುವಾಗ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮುತ್ತಯ್ಯ ಸ್ವಾಮಿ ಪ್ರಜ್ಞಾಹೀನರಾಗಿ ಮಲಗಿದಲ್ಲೇ ಸುಟ್ಟು ಕರಕಲಾಗಿದ್ದಾರೆ. ಚಾಲಕ ಶೌಚಕ್ಕೆ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಅವರು ಪಾರಾಗಿದ್ದಾರೆ.


ಮೃತ ಮುತ್ತಯ್ಯಸ್ವಾಮಿ


ಅಗ್ನಿ ಅವಘಡ ಸಂಭವಿಸಿದ ಬಸ್​ 2016 ರಲ್ಲಿ ಟಾಟಾ ಕಂಪನಿಯಿಂದ ಖರೀದಿಸಲಾಗಿದ್ದು, ಬಿಎಸ್ 4 2016 ಮಾಡೆಲ್​ನದ್ದಾಗಿದೆ. ಸದ್ಯ ಈ ದುರಂತದಿಂದ ಚಾಲಕ ಶಾಕ್​ಗೊಳಗಾಗಿದ್ದು, ಮುತ್ತಯ್ಯ ಸ್ವಾಮಿ ಸಾವಿಗೆ ಯಾರು ಹೊಣೆ ಎಂಬ ಪ್ರಶ್ನೆ ಎದ್ದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗದೀರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.


ಇದನ್ನೂ ಓದಿ: CM Bommai: ಸಿಎಂ ಬೊಮ್ಮಾಯಿ ಸನ್ಮಾನ ತಿರಸ್ಕರಿಸಿದ ಖ್ಯಾತ ಟೆನಿಸ್​ ಆಟಗಾರ




ಇತ್ತ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಹೊತ್ತಿಕೊಳ್ಳಲು ಕಾರಣವೇನು ಎಂಬುವುದನ್ನು ಪತ್ತೆಹಚ್ಚುತ್ತಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಗೆ ಲಿಂಗಧೀರನಹಳ್ಳಿಯಿಂದ ಈ ಬಸ್ ಕೆ.ಆರ್ ಮಾರ್ಕೆಟ್ ಗೆ ತೆರಳಬೇಕಿತ್ತು. ಈವರೆಗೆ ಮೆಜೆಸ್ಟಿಕ್ ಗೆ ತೆರಳ್ತಿದ್ದ ಈ ಬಸ್​ನ ರೂಟ್​ ಮಾರ್ಕೆಟ್​ಗೆ ಬದಲಿಸಲಾಗಿತ್ತು.

Published by:Precilla Olivia Dias
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು