• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಡಿಜೆ ಹಳ್ಳಿ ಗಲಭೆ ಕೇಸ್​​: ಇಂದು ವಿಚಾರಣೆಗೆ ಹಾಜರಾಗುವಂತೆ ಸಂಪತ್​ ರಾಜ್​ಗೆ ಸಿಸಿಬಿ ಪೊಲೀಸರು ನೋಟಿಸ್​

ಡಿಜೆ ಹಳ್ಳಿ ಗಲಭೆ ಕೇಸ್​​: ಇಂದು ವಿಚಾರಣೆಗೆ ಹಾಜರಾಗುವಂತೆ ಸಂಪತ್​ ರಾಜ್​ಗೆ ಸಿಸಿಬಿ ಪೊಲೀಸರು ನೋಟಿಸ್​

ಸಂಪತ್ ರಾಜ್

ಸಂಪತ್ ರಾಜ್

ಗಲಭೆ ಪ್ರಕರಣದಲ್ಲಿ ಕಳೆದ ಆಗಸ್ಟ್ 18ರಂದು ಸಂಪತ್ ರಾಜ್ ಹಾಗೂ ಫ್ರೇಜರ್ ಟೌನ್ ವಾರ್ಡ್ ಕಾರ್ಪೋರೇಟರ್ ಜಾಕೀರ್ ಹುಸೇನ್​​ಗೆ ನೊಟೀಸ್ ಜಾರಿ ಮಾಡಿ ಸಿಸಿಬಿ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಂಪತ್ ರಾಜ್ ಬಳಸುತ್ತಿದ್ದ ಹೈಪೋನ್ ವಶಕ್ಕೆ‌ ಪಡೆದುಕೊಂಡಿದ್ದರು.‌

  • Share this:

ಬೆಂಗಳೂರು(ಸೆ.18): ಡಿಜಿ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ‌ ಮೇಯರ್ ಸಂಪತ್ ರಾಜ್​​ಗೆ ಮತ್ತೆ ಸಿಸಿಬಿ ನೊಟೀಸ್ ಜಾರಿ ಮಾಡಿದೆ. ಆದರೆ, ಮಾಜಿ ಮೇಯರ್​​​ಗೆ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಇಂದು ವಿಚಾರಣೆಗೆ ಹಾಜರಾಗುವುದು ಬಹುತೇಕ ಅನುಮಾನವಾಗಿದೆ. ಈಗಾಗಲೇ ನೊಟೀಸ್ ನೀಡಲು ಮನೆ ಬಳಿ ಸಿಸಿಬಿ ಪೊಲೀಸರು ಹೋಗಿದ್ದರು. ಆದರೆ ಸಂಪತ್ ರಾಜ್ ಮನೆಯಲ್ಲಿ ಇಲ್ಲದ ಕಾರಣಕ್ಕೆ ವಾಪಸ್​​ ಬಂದು ವಾಟ್ಸಾಪ್ ಮೂಲಕ ನೊಟೀಸ್ ಕಳುಹಿಸಿದ್ದರು. ನೊಟೀಸ್ ನೀಡಿದ್ದರೂ ಇದುವರೆಗೂ ಯಾವುದೇ ಸಂಪತ್ ರಾಜ್ ಪ್ರತಿಕ್ರಿಯಿಸಿರಲಿಲ್ಲ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿತ್ತು. ಆದರೀಗ ಕೊರೋನಾ‌ ಕಾಣಿಸಿಕೊಂಡಿದ್ದರಿಂದ ವಿಚಾರಣೆಗೆ ಗೈರಾಗುವ ಸಾಧ್ಯತೆಯಿದೆ. ಹೀಗಾಗಿ ಸಿಸಿಬಿ ಪೊಲೀಸರು ಮತ್ತೊಂದು ದಿನ ನೊಟೀಸ್ ನೀಡಿ ವಿಚಾರಣೆಗೆ ಕರೆಯಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.


ಗಲಭೆ ಪ್ರಕರಣದಲ್ಲಿ ಕಳೆದ ಆಗಸ್ಟ್ 18ರಂದು ಸಂಪತ್ ರಾಜ್ ಹಾಗೂ ಫ್ರೇಜರ್ ಟೌನ್ ವಾರ್ಡ್ ಕಾರ್ಪೋರೇಟರ್ ಜಾಕೀರ್ ಹುಸೇನ್​​ಗೆ ನೊಟೀಸ್ ಜಾರಿ ಮಾಡಿ ಸಿಸಿಬಿ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಂಪತ್ ರಾಜ್ ಬಳಸುತ್ತಿದ್ದ ಹೈಪೋನ್ ವಶಕ್ಕೆ‌ ಪಡೆದುಕೊಂಡಿದ್ದರು.‌ ರಿಟ್ರೈವ್​​ಗಾಗಿ ತಿವೆಂಡ್ರಮ್​​ನಲ್ಲಿರುವ ಎಫ್​​​ಎಸ್ಎಲ್​​​ಗೆ ಕಳುಹಿಸಿದ್ದರು. ಇದರ ವರದಿ ಇನ್ನಷ್ಟೇ ಬರಬೇಕಿದೆ.


ಇನ್ನು, ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ನವೀನ್ ಧರ್ಮವೊಂದರ ಪ್ರವಾದಿ ವಿರುದ್ಧ ಫೇಸ್​​ಬುಕ್​​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಇದರಿಂದ ಅಸಮಾಧಾನಗೊಂಡ ಗಲಭೆಕೋರರು ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮ‌ನೆ ಮೇಲೆ ದಾಳಿ ನಡೆಸಿದ್ದರು.


ಇದನ್ನೂ ಓದಿ: Harsimrat Kaur Badal: ಕೃಷಿ ಮಸೂದೆಗೆ ವಿರೋಧ: ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್​ ಕೌರ್​ ಬಾದಲ್​ ರಾಜೀನಾಮೆ


ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆಗಳಿಗೆ ಧ್ವಂಸಗೊಳಿಸಿದ್ದರು. ಗಲಭೆ ಹಿಂದೆ ಸಂಪತ್ ರಾಜ್ ಕೈವಾಡವಿದೆ ಎಂದು ಹೇಳಲಾಗಿತ್ತು. ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿ ಈ ಗಲಭೆಗೆ ಪ್ರಚೋದನೆ ನೀಡಿರಬಹುದು ಎಂಬ ಆರೋಪ ಕೇಳಿ ಬಂದಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಪತ್​​ ರಾಜ್ ಪುಲಕೇಶಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು‌. ಪ್ರಕರಣ ಸಂಬಂಧ ಮಾಜಿ ಮೇಯರ್ ಆಪ್ತ ಅರುಣ್​​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

Published by:Ganesh Nachikethu
First published: