Crime News| ಬೆಂಗಳೂರು ಅನ್ಲಾಕ್ ಆಗುತ್ತಿದ್ದಂತೆ ಆಕ್ಟಿವ್ ಆದ ಸರಗಳ್ಳರು; ನಗರದ ಎರಡು ಕಡೆ ಸರಗಳ್ಳತನ!
ರಾಜ್ಯ ಸರ್ಕಾರ ಇಂದಿನಿಂದ ಅನೇಕ ವಿಚಾರಗಳಿಗೆ ರಿಯಾಯಿತಿ ನೀಡಿ ಅನ್ಲಾಕ್ ಮಾಡಿದೆ. ಆದರೆ, ಇದನ್ನೇ ಬಳಸಿಕೊಂಡಿರುವ ನಗರದ ಕುಖ್ಯಾತ ಸರಗಳ್ಳರು, ನಗರ ಅನ್ಲಾಕ್ ಆಗುತ್ತಿದ್ದಂತೆ ಮತ್ತೆ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.
ಬೆಂಗಳೂರು (ಜೂನ್ 21); ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕು ಅಧಿಕವಾಗಿದ್ದ ಕಾರಣಕ್ಕೆ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ಲಾಕ್ಡೌನ್ ಮಾಡಲಾಗಿತ್ತು. ಹೀಗಾಗಿ ಲಾಕ್ಡೌನ್ ವೇಳೆ ಅಪರಾಧ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿತ್ತು. ಆದರೆ, ಇದೀಗ ರಾಜ್ಯದಲ್ಲಿ ಅನ್ಲಾಕ್ ಪ್ರಕ್ರಿಯೆಗಳು ಆರಂಭವಾಗಿದೆ. ರಾಜ್ಯ ಸರ್ಕಾರ ಇಂದಿನಿಂದ ಅನೇಕ ವಿಚಾರಗಳಿಗೆ ರಿಯಾಯಿತಿ ನೀಡಿ ಅನ್ಲಾಕ್ ಮಾಡಿದೆ. ಆದರೆ, ಇದನ್ನೇ ಬಳಸಿಕೊಂಡಿರುವ ನಗರದ ಕುಖ್ಯಾತ ಸರಗಳ್ಳರು, ನಗರ ಅನ್ಲಾಕ್ ಆಗುತ್ತಿದ್ದಂತೆ ಮತ್ತೆ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.
ಇಂದು ಒಂದೇ ದಿನ ನಗರದ ಎರಡು ಕಡೆ ಸರಗಳ್ಳತನ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಯನಗರ ಮತ್ತು ಕೊಡಿಗೆಹಳ್ಳಿಯಲ್ಲಿ ಖದೀಮರು ಸರ ಎಗರಿಸಿದ್ದಾರೆ. ಕೊಡಿಗೆಹಲ್ಳಿಯಲ್ಲಿ ಕಳ್ಳರು ವೃದ್ದೆಯ ಸರ ಕಸಿದು ಪರಾರಿಯಾಗಿದ್ದಾರೆ. ಬೆಳಗ್ಗೆ 8.30ರ ಸುಮಾರಿಗೆ ಲಕ್ಷ್ಮಿ ಎಂಬ ವೃದ್ದೆ ರಸ್ತೆಯಲ್ಲಿ ವಾಕ್ ಮಾಡುವಾಗ ಇಬ್ಬರು ಕಳ್ಳರು ಬೈಕ್ನಲ್ಲಿ ಬಂದು ಸರವನ್ನು ಕಸಿದಿದ್ದಾರೆ. ಈ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಅದೇ ರೀತಿ ಜಯನಗರ ಸಾಕಮ್ಮ ಗಾರ್ಡನ್ ಬಳಿ ಮತ್ತೊಂದು ಸರಗಳ್ಳತನ ನಡೆದಿದೆ. ರಾಜೇಶ್ವರಿ ಎಂಬುವರ 72 ಗ್ರಾಂ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರಿಂದ ಕೃತ್ಯ ನಡೆದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ