• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Lokayukta Raid: 40 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದ ಶಾಸಕರ ಮಗ, ಮಾಡಾಳು ವಿರೂಪಾಕ್ಷಪ್ಪ ಪುತ್ರನಿಗೆ 'ಲೋಕಾ' ಶಾಕ್!

Lokayukta Raid: 40 ಲಕ್ಷ ಹಣದೊಂದಿಗೆ ಸಿಕ್ಕಿಬಿದ್ದ ಶಾಸಕರ ಮಗ, ಮಾಡಾಳು ವಿರೂಪಾಕ್ಷಪ್ಪ ಪುತ್ರನಿಗೆ 'ಲೋಕಾ' ಶಾಕ್!

ಲೋಕಾಯುಕ್ತ ಭರ್ಜರಿ ಬೇಟೆ

ಲೋಕಾಯುಕ್ತ ಭರ್ಜರಿ ಬೇಟೆ

ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ ಬಿಜೆಪಿ ನಾಯಕ, ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ಶಾಸಕ (Channagiri MLA) ಮಾಡಾಳು ವಿರೂಪಾಕ್ಷಪ್ಪ (Madalu Virupakshappa) ಅವರ ಪುತ್ರ, ಮಾಡಾಳು ಪ್ರಶಾಂತ್ (Madalu Prashanth) ಎನ್ನಲಾಗಿದೆ. ಬೆಂಗಳೂರು ಜಲಮಂಡಳಿಯಲ್ಲಿ (BWSSB) ಚೀಫ್ ಅಕೌಂಟೆಂಟ್ (Chief Accountant) ಆಗಿರುವ ಮಾಡಾಳು ಪ್ರಶಾಂತ್, ಬರೋಬ್ಬರಿ 80 ಲಕ್ಷ ರೂಪಾಯಿ ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ವೇಳೆ 40 ಲಕ್ಷ ಹಣದೊಂದಿಗೆ ಮಾಡಾಳು ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾಳಿ ವೇಳೆ 40 ಲಕ್ಷ ಹಣದ ಜೊತೆ ಒಟ್ಟೂ 1 ಕೋಟಿ 62 ಲಕ್ಷ ರೂಪಾಯಿ ಹಣ ಪತ್ತೆ ಆಗಿದೆ ಎನ್ನಲಾಗುತ್ತಿದೆ.

ಮುಂದೆ ಓದಿ ...
  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಲೋಕಾಯುಕ್ತ ಪೊಲೀಸರು (Lokayukta police) ಭರ್ಜರಿ ಬೇಟೆಯಾಡಿದ್ದಾರೆ. ಲೋಕಾಯುಕ್ತರ ಬಲೆಗೆ  ದೊಡ್ಡ ಭ್ರಷ್ಟ ತಿಮಿಂಗಿಲವೇ ಬಿದ್ದಿದೆ. ಭ್ರಷ್ಟನನ್ನು ಬೃಹತ್ ಗಾತ್ರದ ಹಣದೊಂದಿಗೆ ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಅಂದಹಾಗೆ ಲೋಕಾಯುಕ್ತ ಬಲೆಗೆ ಬಿದ್ದ ವ್ಯಕ್ತಿ ಬೇರೆ ಯಾರೂ ಅಲ್ಲ ಬಿಜೆಪಿ ನಾಯಕ, ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ಶಾಸಕ (Channagiri MLA) ಮಾಡಾಳು ವಿರೂಪಾಕ್ಷಪ್ಪ (Madalu Virupakshappa) ಅವರ ಪುತ್ರ, ಮಾಡಾಳು ಪ್ರಶಾಂತ್ (Madalu Prashanth) ಎನ್ನಲಾಗಿದೆ. ಬೆಂಗಳೂರು ಜಲಮಂಡಳಿಯಲ್ಲಿ (BWSSB) ಚೀಫ್ ಅಕೌಂಟೆಂಟ್ (Chief Accountant) ಆಗಿರುವ ಮಾಡಾಳು ಪ್ರಶಾಂತ್, ಬರೋಬ್ಬರಿ 80 ಲಕ್ಷ ರೂಪಾಯಿ ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ವೇಳೆ 40 ಲಕ್ಷ ಹಣದೊಂದಿಗೆ ಮಾಡಾಳು ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.


ಯಾರು ಈ ಮಾಡಾಳು ಪ್ರಶಾಂತ್?


ಮಾಡಾಳು ಪ್ರಶಾಂತ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ. ವೃತ್ತಿಯಲ್ಲಿ ಬೆಂಗಳೂರು ಜಲಮಂಡಳಿಯ ಚೀಫ್ ಅಕೌಂಟೆಂಟ್ ಆಗಿದ್ದಾನೆ.


80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮಾಡಾಳು ಪ್ರಶಾಂತ್


ಮಾಡಾಳು ಪ್ರಶಾಂತ್ ಬರೋಬ್ಬರಿ 80 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ಪೈಕಿ ಬರೋಬ್ಬರಿ 40 ಲಕ್ಷ ಹಣದೊಂದಿಗೆ ಮಾಡಾಳು ಪ್ರಶಾಂತ್ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.


ಇದನ್ನೂ ಓದಿ: BBMP Budget-2023: 11,158 ಕೋಟಿ ರೂಪಾಯಿ ಗಾತ್ರದ 'ಬೃಹತ್' ಬಜೆಟ್, ಯಾವುದಕ್ಕೆ ಎಷ್ಟು ಅನುದಾನ?


ಮಾಡಾಳು ಪ್ರಶಾಂತ್ ಲಂಚ ಕೇಳಿದ್ದು ಯಾಕೆ?


BWSSBಯಲ್ಲಿ ಚೀಫ್ ಅಕೌಂಟೆಂಟ್ ಆಗಿರುವ ಮಾಡಾಳು ಪ್ರಶಾಂತ್ ಕಚ್ಚಾ ವಸ್ತುಗಳ ಖರೀದಿ ಟೆಂಡರ್‌ಗಾಗಿ ಕೆಎಸ್‌ಡಿಎಲ್ ಅಧ್ಯಕ್ಷರ ಪರವಾಗಿ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ಕೇಳಿದ್ದ ಎನ್ನಲಾಗಿದೆ. ಈ ವೇಳೆ 40 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಎಸ್‌ಪಿ ಅಶೋಕ್, ಇನ್ಸ್‌ಪೆಕ್ಟರ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು.


ಪ್ರಶಾಂತ್ ಕಚೇರಿಯಲ್ಲಿ ಲೋಕಾಯುಕ್ತರಿಂದ ಪರಿಶೀಲನೆ


ಇನ್ನು ಮಾಡಾಳು ಪ್ರಶಾಂತ್ ಖಾಸಗಿ ಕಚೇರಿಯಲ್ಲಿ ಲೋಕಾಯುಕ್ತರಿಂದ ಪರಿಶೀಲನೆ ನಡೆಯುತ್ತಿದೆ. ಪ್ರಶಾಂತ್ ಕಚೇರಿಗೆ ಲೋಕಾಯುಕ್ತ ಐಜಿಪಿ ಸುಬ್ರಮಣ್ಯೇಶ್ವರ ರಾವ್ ಆಗಮಿಸಿದ್ದಾರೆ. ಆತನ ಕಚೇರಿಯಲ್ಲಿರೋ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ.


ಸಿಕ್ಕಿದ್ದು 40 ಲಕ್ಷವೋ, 2 ಕೋಟಿ ರೂಪಾಯಿಯೋ?


ಮೂಲಗಳ ಪ್ರಕಾರ ದಾಳಿಯ ವೇಳೆ ಒಂದು ಕೋಟಿ 62 ಲಕ್ಷ ರೂಪಾಯಿ ಹಣ ಸಿಕ್ಕಿದೆ ಎನ್ನಲಾಗಿದೆ. ಮಾಡಾಳು ಪ್ರಶಾಂತ್ 40 ಲಕ್ಷ ಹಣಕ್ಕೆ ಡಿಮಾಂಡ್ ಮಾಡಿದ್ದ. ಆದರೆ ದಾಳಿ ವೇಳೆ 40 ಲಕ್ಷ ಹಣದ ಜೊತೆ ಒಟ್ಟೂ 1 ಕೋಟಿ 62 ಲಕ್ಷ ರೂಪಾಯಿ ಹಣ ಪತ್ತೆ ಆಗಿದೆ ಎನ್ನಲಾಗುತ್ತಿದೆ. ಇನ್ನು ಹಲವು ಸ್ಥಳಗಳಲ್ಲಿ ದಾಳಿ ಮಾಡಲಾಗುತ್ತಿದ್ದು, ಸದ್ಯ ಕಚೇರಿಯಲ್ಲಿ ಸಿಕ್ಕಿರೋ ಹಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.


ಚುನಾವಣೆ ಸಿದ್ಧತೆಯಲ್ಲಿದ್ದ ಮಾಡಾಳು ವಿರೂಪಾಕ್ಷಪ್ಪಗೆ ಶಾಕ್


ಇನ್ನು ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಇನ್ನೊಬ್ಬ ಮಗನನ್ನ ಚುನಾವಣೆಗೆ ನಿಲ್ಲಿಸಬೇಕು ಅಂತ ಸಿದ್ದತೆ ನಡೆಸುತ್ತಿದ್ದಾರೆ. ಚನ್ನಗಿರಿ ಕ್ಷೇತ್ರದಿಂದ ಪುತ್ರ ಮಲ್ಲಿಕಾರ್ಜುನನನ್ನು ಈ ಬಾರಿ ಬಿಜೆಪಿಯಿಂದ ನಿಲ್ಲಿಸಲು ಚನ್ನಗಿರಿ ಕ್ಷೇತ್ರದ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷ ಸಿದ್ದತೆ ಮಾಡಿಕೊಳ್ತಾ ಇದ್ದರು. ಇದರ ನಡುವೆ ಪ್ರಶಾಂತ್ ಮಾಡಳ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಶಾಸಕರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Published by:Annappa Achari
First published: