ಬಳ್ಳಾರಿ(ಏ.25): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಜನ್ರಲ್ಲಿ ಆತಂಕ ಸೃಷ್ಟಿ ಮಾಡಿದೆ. ಮಹಾಮಾರಿ ಕೊರೋನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಕೂಡ ಟಫ್ ರೂಲ್ಸ್ ಜಾರಿ ಮಾಡಿದೆ. ವಿಪರ್ಯಾಸವೆಂದರೆ ಜಿಲ್ಲಾಡಳಿತ ನಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವ ರೀತಿ ವರ್ತನೆ ಮಾಡುತ್ತಿದೆ . ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪಕ್ಕದ ರಾಜ್ಯದಿಂದ ಜನರು ಜಿಲ್ಲೆಗೆ ಬರುತ್ತಾರೆ. ಕೋವಿಡ್ ಚೆಕ್ ಅಪ್, ಥರ್ಮಲ್ ಸ್ಕ್ಯಾನಿಂಗ್ ಮಾಡಲು ಜಿಲ್ಲೆಯ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಆದ್ರೆ ಆ ಚೆಕ್ ಪೋಸ್ಟ್ಗಳು ಮಾತ್ರ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ರೀತಿಯಲ್ಲಿವೆ.
ಹೌದು, ಹೀಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ರೀತಿಯಲ್ಲಿ ನಿರ್ಮಾಣ ಮಾಡಿರುವ ಚೆಕ್ ಪೋಸ್ಟ್, ಚೆಕ್ ಪೋಸ್ಟ್ ನಲ್ಲಿ ಕ್ಯಾಮರಾ ನೋಡುತ್ತಲೇ ಡ್ಯೂಟಿ ಡ್ರೆಸ್ ಹಾಕಿಕೊಳ್ಳುತ್ತಿರುವ ಪೊಲೀಸ್ ಸಿಬ್ಬಂದಿ, ಅತ್ತಿಂದಿತ್ತ ವಾಹನಗಳ ಸಂಚಾರವಾದ್ರು ಡೋಂಟ್ ಕೇರ್ ಎನ್ನದೆ ನಿಂತಿರುವ ಆರೋಗ್ಯ ಇಲಾಖೆ ಸಿಬ್ಬಂದಿ. ಈ ಎಲ್ಲ ದೃಶ್ಯಗಳು ಕಂಡು ಬಂದಿದ್ದು ಗಣಿನಾಡು ಬಳ್ಳಾರಿ ಜಿಲ್ಲೆಯ ಮತ್ತು ಆಂಧ್ರಪ್ರದೇಶದ ಮಧ್ಯ ಭಾಗದಲ್ಲಿರುವ ಸಿಂಧ್ವಾವಾಳ್ ಗ್ರಾಮದಲ್ಲಿ ನಿರ್ಮಾಣವಾದ ಚೆಕ್ ಪೋಸ್ಟ್ ನಲ್ಲಿ.
ಹೌದು ಬಳ್ಳಾರಿ ಜಿಲ್ಲೆಯಲ್ಲಿ ದಿನ ಒಂದಕ್ಕೆ 900 ಕ್ಕೂ ಅಧಿಕ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಕೂಡ ಕೊರೋನಾ ವೈರಸ್ ಅನ್ನು ಕಟ್ಟಿ ಹಾಕಲು ಹಲವು ತಂತ್ರಗಳನ್ನು ರೂಪಿಸಿದೆ. ಆದರೆ ಯಾವ ತಂತ್ರಗಳು ಸರಿಯಾದ ರೀತಿ ಕೆಲಸ ಮಾಡುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ನೇರ ಕಾರಣ ಎಂದು ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ಇನ್ನು ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿ ಐದು ಕಡೆ ಚಕ್ಕ ಪೋಸ್ಟ್ಗಳನ್ನು ನಿರ್ಮಾಣ ಮಾಡಿದ್ದು, ಹೊರರಾಜ್ಯಗಳಿಂದ ಬರುವಂತಹ ವಾಹನಗಳನ್ನು ಮತ್ತು ಜನರನ್ನು ತಪಾಸಣೆ ಮಾಡುವ ಮೂಲಕ ಜಿಲ್ಲೆಗೆ ಎಂಟ್ರಿ ಮಾಡಲಾಗುತ್ತೆ. ಬರುವಂತಹ ಜನರಿಗೆ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್ ಚೆಕಪ್ ಮಾಡುವುದು ಕಡ್ಡಾಯವಾಗಿದೆ. ಇನ್ನೂ ಒಂದು ವೇಳೆ ಕೊರೋನಾ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳಿಗೆ ಕೋವಿಡ್ ಚಕ್ ಸಹ ಮಾಡಬೇಕಾಗುತ್ತೆ. ಆದರೆ ಈ ನಿಯಮಗಳನ್ನ ಅಧಿಕಾರಿಗಳು ಪಾಲನೆ ಮಾಡದೇ ಬೇಕಾ ಬಿಟ್ಟಿಯಾಗಿ ವಾಹನಗಳನ್ನ ಹಾಗೆ ಬಿಡುತ್ತಿದ್ದಾರೆ.. ಇದರಿಂದ ಬಳ್ಳಾರಿ ನಗರದಲ್ಲಿ ಮತ್ತಷ್ಟು ಕೊರೊನ ಉಲ್ಬಣ ಆಗುವುದರಲ್ಲಿ ಅನುಮಾನವಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ