ಬೆಂಗಳೂರು; ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಗಲಾಟೆ ನಡೆದಿದೆ. ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ, ಹಾಗೂ ರಾಜಾಜಿನಗರದ ಕಾಂಗ್ರೆಸ್ ಯುವ ನಾಯಕ ಮೋನಹರ್ ನಡುವೆ ಗಲಾಟೆ ನಡೆದಿದ್ದು, ಉಭಯ ನಾಯಕರು ಕೈ ಕೈ ಮೀಲಾಯಿಸಿದ್ದಾರೆ. ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಈ ಗಲಾಟೆ ನಡೆದಿದೆ.
ಗಲಾಟೆ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸುದ್ದಿಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದಾರೆ. ರಾಜಭವನ ಚಲೋ ಕಾರ್ಯಕ್ರಮದಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಭಾಗವಹಿಸಿದ್ದ ಎಲ್ಲರಿಗೂ ಕೆಪಿಸಿಸಿ ವತಿಯಿಂದ ಧನ್ಯವಾದಗಳು. ಪಂಚಾಯತಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ ನಡೆಸುವ ವಿಚಾರಕ್ಕೆ ಚರ್ಚೆ ನಡೆದಿದೆ. ಈ ವೇಳೆ ಜೋರಾಗಿ ಮಾತುಕತೆ ನಡೆದಿದೆ. ಬಿಜೆಪಿಯ ಕೆಲ ಸದಸ್ಯರನ್ನು ಸೇರಿಸುವ ವಿಚಾರಕ್ಕೆ ಚರ್ಚೆ ನಡೆದಿದೆ ಅಷ್ಟೇ. ಅದು ಬಿಟ್ಟು ನಮ್ಮ ಕಚೇರಿಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ಚರ್ಚೆ ನಡೆಯುವಾಗ ದೊಡ್ಡ ಧ್ವನಿಯಲ್ಲಿ ಚರ್ಚೆ ಆಗಿದೆ ಅಷ್ಟೇ. ಯಾರ ಮೇಲೂ ಹಲ್ಲೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ: ಸಾಲ ಕೊಡಿಸುವುದಾಗಿ ಆಮಿಷ, ಲಕ್ಷಾಂತರ ರೂಪಾಯಿ ವಂಚನೆ, ಇಬ್ಬರ ಬಂಧನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ