• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಹೊಸ ಸ್ವರೂಪದ ಕೊರೋನಾ ವೈರಸ್​ ಹರಡದಂತೆ ಸರ್ಕಾರದಿಂದ ಅಗತ್ಯ ಕ್ರಮ: ಸಿಎಂ ಬಿಎಸ್​ ಯಡಿಯೂರಪ್ಪ

ಹೊಸ ಸ್ವರೂಪದ ಕೊರೋನಾ ವೈರಸ್​ ಹರಡದಂತೆ ಸರ್ಕಾರದಿಂದ ಅಗತ್ಯ ಕ್ರಮ: ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೆ ತಪಾಸಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ವೈರಸ್ ಹರಡದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸಹಕರಿಸಿ

  • Share this:

    ಬೆಂಗಳೂರು (ಡಿ. 22): ಬ್ರಿಟನ್​ನ ಹೊಸ ಸ್ವರೂಪದ ಕೊರೋನಾ ವೈರಸ್​ ಜಗತ್ತಿನೆಲ್ಲೆಡೆ ಆತಂಕ ಮೂಡಿಸಿದೆ. ಅತಿ ವೇಗವಾಗಿ ಹರಡಬಲ್ಲ ಈ ವೈರಸ್​ ಬಗ್ಗೆ ಭಾರತ ಕೂಡ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಇಂದಿನಿಂದ ಬ್ರಿಟನ್​ ಮತ್ತು ಭಾರತದ ನಡುವಿನ ವಿಮಾನ ಹಾರಾಟ ಬಂದ್​ ಮಾಡುವ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗಿದೆ. ಈ ನಡುವೆ ರಾಜ್ಯದಲ್ಲಿ ಕೂಡ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸರ್ಕಾರ ಮುಂದಾಗಿದೆ. ಈಗಾಗಲೇ ಕಳೆದೊಂದು ವಾರದಿಂದ ಬ್ರಿಟನ್​ನಿಂದ ಆಗಮಿಸಿದವರ ಟ್ರಾವೆಲ್​ ಹಿಸ್ಟರಿ ಹುಡುಕಾಟ ನಡೆಸಲಾಗಿದೆ. ಅಲ್ಲದೇ ಬ್ರಿಟನ್​ನಿಂದ ರಾಜ್ಯಕ್ಕೆ ಬಂದಿಳಿದವರ ಮಾಹಿತಿ ಸಂಗ್ರಹಿಸುವಂತೆ ಈಗಾಗಲೇ ಆರೋಗ್ಯ ಸಚಿವರು ತಿಳಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಈ ಬಗೆಯ ಪ್ರಕರಣಗಳ ಮಾಹಿತಿ ಕಲೆ ಹಾಕಿ ನೀಡಲು ಆಯಾ ಜಿಲ್ಲಾಧಿಕಾರಿ ಮತ್ತು ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತೀ ಜಿಲ್ಲೆಯಲ್ಲೂ ಯುಕೆಯಿಂದ ಬಂದ ಪ್ರಯಾಣಿಕರ ಪಟ್ಟಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾಡಲಿದ್ದಾರೆ. ಈ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗಿದೆ.



    ಈ ನಡುವೆ ರಾಜ್ಯದಲ್ಲಿ ಆತಂಕ ಮೂಡಿಸುತ್ತಿರುವ ಈ ಕೊರೋನಾ ರೂಪಾಂತರ ಹರಡದಂತೆ ತಡೆಯಲು ಅಗತ್ಯ ಕ್ರಮ ಕೈಗೊಂಡಿದ್ದು, ಜನರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಮನವಿ ಮಾಡಿದ್ದಾರೆ. ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲೆ ತಪಾಸಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ವೈರಸ್ ಹರಡದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸಹಕರಿಸಿ ಎಂದು ಟ್ವೀಟ್​ ಮೂಲಕ ಕೋರಿದ್ದಾರೆ.


    ಇನ್ನು ಈಗಾಗಲೇ ಜಿಲ್ಲೆಗಳಲ್ಲಿ ಬ್ರಿಟನ್​ನಿಂದ ವಾಪಸ್ಸಾದವರ ಮಾಹಿತಿ ಪಡೆದು ಅವರನ್ನು ಐಸೋಲೇಷನ್​ಗೆ ಒಳಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಈ ಬಗ್ಗೆ ಕೆ ಸುಧಾಕರ್​ ಮಾಹಿತಿ ನೀಡಿದ್ದು, ಬ್ರಿಟನ್​ನಿಂದ ಬಂದವರನ್ನು ಕಡ್ಡಾಯವಾಗಿ ಆರ್​ಟಿಪಿಎಸ್​ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

    Published by:Seema R
    First published: