• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • 2022 ಜೂನ್​ ಅಂತ್ಯದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ; ಸಿಎಂ ಬಿಎಸ್​ ಯಡಿಯೂರಪ್ಪ

2022 ಜೂನ್​ ಅಂತ್ಯದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ; ಸಿಎಂ ಬಿಎಸ್​ ಯಡಿಯೂರಪ್ಪ

ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ

ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ

ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಆಗುವುದರಿಂದ ದೊಡ್ಡ ದೊಡ್ಡ ಕೈಗಾರಿಕೆಗಳು ನಗರಕ್ಕೆ ಬರಲಿದೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದ್ದು, ಅಭಿವೃದ್ಧಿ ಸಾಕಾರವಾಗಲಿದೆ

  • Share this:

 ಶಿವಮೊಗ್ಗ (ಜೂ. 12): ಸಿಎಂ ಬಿಎಸ್​ ಯಡಿಯೂರಪ್ಪ ಅವರ ಕನಸಿನ ಕೂಸಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯನ್ನು ಮುಂದಿನ ವರ್ಷಕ್ಕೆ ಸಿದ್ಧವಾಗುವ ಸಾಧ್ಯತೆ ಇದೆ. ಇಂದು ಇಲ್ಲಿನ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಂದಿನ ಜೂನ್​ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಇದೇ ವೇಳೇ ಮಾತನಾಡಿದ ಅವರು 2022ರ ಜೂನ್​ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಆಗುವುದರಿಂದ ದೊಡ್ಡ ದೊಡ್ಡ ಕೈಗಾರಿಕೆಗಳು ನಗರಕ್ಕೆ ಬರಲಿದೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದ್ದು, ಅಭಿವೃದ್ಧಿ ಸಾಕಾರವಾಗಲಿದೆ ಎಂದರು


ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು. ಬಳಿಕ ಮಾತನಾಡಿದ ಅವರು, ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.



ಟರ್ಮಿನಲ್ ಕಟ್ಟಡದ ವಿನ್ಯಾಸ ಅನಾವರಣ 384 ಕೋಟಿ ರೂ ಆಗಿದೆ , ಫೇಸ್-1ರಲ್ಲಿ ಅನುಮೋದನೆಯಾದ ಮೊತ್ತ 220 ಕೋಟಿ ರೂ. ಫೇಸ್-2ರಲ್ಲಿ ಅನುಮೋದನೆಯಾದ ಮೊತ್ತ - 180 ಕೋಟಿ ರೂ. ರನ್‌ವೇ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳ ನ್ನೊಳಗೊಂಡ ಪ್ಯಾಕೇಜ್-1ರ ಕಾಮಗಾರಿಯ ಅಂದಾಜು ಮೊತ್ತ ರೂ. 164.00 ಕೋಟಿಗಳು, ರೂ. 216.06 ಕೋಟಿಗಳಾಗಿವೆ. ಪ್ಯಾಸೆಂಜರ್ ಟರ್ಮಿನಲ್ ಕಟ್ಟಡ, ಎ.ಟಿಸಿ ಟವರ್ ಕಟ್ಟಡ, ಎಲೆಕ್ಟಿಕಲ್ ಸಬ್ ಸ್ಟೇಷನ್, (2 ಸಂಖ್ಯೆ) ಟೈರ್ ಸ್ಟೇಷನ್, ಮೇಲ್ಮಟ್ಟದ ನೀರಿನ ತೊಟ್ಟಿ, ವಾಚ್ ಟವರ್ (09 ಸಂಖ್ಯೆ), ಪಂಪ್‌ಹೌಸ್, ನೆಲಮಟ್ಟದಲ್ಲಿ ನೀರಿನ ತೊಟ್ಟಿ, ಕೂಅಂಗ್ ಪಿಟ್ ಒಳಗೊಂಡ ಪ್ಯಾಕೇಜ್-02 ಕಾಮಗಾರಿಗೆ ಕರಾರು ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭಿಸಬೇಕಾಗಿರುತ್ತದೆ. ಹೆಚ್ಚಿನ ಹಣಕಾಸು ಸಮಸ್ಯೆ ಇದ್ದರೂ ಹಣಕಾಸು ಜೋಡಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು


ಇದನ್ನು ಓದಿ: ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಿಜೆಪಿ ಕೆಲ ನಾಯಕರಿಂದ ಅರುಣ್ ಸಿಂಗ್ ಮೇಲೆ ಒತ್ತಡ


ಇದೇ ವೇಳೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಕುರಿತು ಮಾತನಾಡಿದ ಅವರು, ಅಲ್ಲೂ ಕೂಡ ಶೀಘ್ರವಾಗಿ ಕಾಮಗಾರಿ ನಡೆಯಲಿದೆ. ಇಲ್ಲಿ ಕಾಮಗಾರಿ ನಡೆಸುತ್ತಿರುವವರೆ ಅಲ್ಲೂ ಆರಂಭಿಸಲು ಆಸಕ್ತಿ ತೋರಿದರೆ ಅವಕಾಶ ನೀಡಲಾಗುವುದು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೊಂದಿಗೆ ವೀಕ್ಷಸಲು ಸದ್ಯದಲ್ಲಿಯೇ ಹಾಸನಕ್ಕೆ ಭೇಟಿ ನೀಡಿ ಶೀಘ್ರದಲ್ಲಿ ಆರಂಭ ಮಾಡುತ್ತೇವೆ. ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟ ರೈತರು ಆತಂಕ ಪಡುವ ಹಾಗೆ ಇಲ್ಲ. ನಿಮಗೆ ಮನೆ ನಿರ್ಮಾಣಕ್ಕೆ ಜಾಗ‌ ಹಾಗೂ ಇತರೆ ಸವಲತ್ತುಕೊಡುವ ಭರವಸೆಯನ್ನ ಈಡೇರಿಸಲಿದ್ದೇವೆ ಎಂದು ಭರವಸೆ ನೀಡಿದರು.


ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶಿಕಾರಿಪುರ ಸಮೀಪವಿರುವ ಶಿವ ಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ರಾಘವೇಂದ್ರ ಹಾಗೂ ಮಲೆನಾಡು ಮಠಾಧೀಶರ ಪರಿಷತ್ತಿನ ಸ್ವಾಮೀಜಿಗಳು ಹಾಜರಿದ್ದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

First published: