ಬೆಂಗಳೂರು: ಆಹಾರ ಮತ್ತು ನಾಗರೀಕ ಖಾತೆ ಸಚಿವರಾದ ಉಮೇಶ್ ಕತ್ತಿ ಅವರಿಗೆ ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವ ವಿಚಾರವಾಗಿ ಕರೆ ಮಾಡಿ, ನಾವು ಸಾಯಬೇಕಾ ಬದುಕಬೇಕಾ ಎಂದು ಕೇಳಿದಾಗ ಸಾಯಿ ಅಂತ ಹೇಳಿರುವುದು ಭಾರೀ ವಿವಾದ ಸೃಷ್ಟಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇರುವ ಸಚಿವರು ಹೀಗೆ ಮಾತನಾಡಿರುವುದಕ್ಕೆ ವಿಪಕ್ಷಗಳು ಸಚಿವ ಉಮೇಶ್ ಕತ್ತಿ ವಿರುದ್ಧ ಹರಿಹಾಯ್ದಿವೆ. ಈ ವಿಚಾರವಾಗಿ ಸ್ವತಃ ಮುಖ್ಯಮಂತ್ರಿಗಳೇ ವಿಷಾದ ವ್ಯಕ್ತಪಡಿಸಿದ್ದಾರೆ.
ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು ರೈತನೊಬ್ಬ 5 ಕೆ.ಜೆ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಸಾಯಬೇಕಾ ಬದುಕಬೇಕಾ ಎಂದು ಕೇಳಿದಾಗ ಸಾಯಿ ಅಂತ ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ . ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು . ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಫೋನ್ ಸಂಭಾಷಣೆಯ ಮಾತುಕತೆ
ರೈತ: ಎರಡು ಕೆ.ಜಿ. ಅಕ್ಕಿ ಮಾಡಿದ್ದಿರಾ ಅದು ಸಾಲುತ್ತಾ ಸಾರ್.
ಕತ್ತಿ: ಮೂರು ಕೆ.ಜಿ. ರಾಗಿ ಮಾಡಿದ್ದಿವಿ
ರೈತ: ನಮ್ಮ ಉತ್ತರ ಕರ್ನಾಟಕ ಭಾಗದವರಿಗೆ ಎಲ್ಲಿ ರಾಗಿ ಕೊಡ್ತಾ ಇದೀರಾ?
ಕತ್ತಿ: ಉತ್ತರ ಕರ್ನಾಟಕದಲ್ಲಿ ಜೋಳ ಮತ್ತು ಅಕ್ಕಿ ಮಾಡಿದ್ದಿವಿ.
ರೈತ: ಅದೇ ಸಾರ್ ಸಾಲುತ್ತಾ ಸಾರ್. ಅದು, ಲಾಕ್ಡೌನ್ನಲ್ಲಿ ಕೆಲಸ ಇಲ್ಲ.
ಕತ್ತಿ; ಲಾಕ್ಡೌನ್ ಟೈಮಲ್ಲಿ ಕೇಂದ್ರ ಸರ್ಕಾರ ಪ್ರತಿ ತಿಂಗಳು ಮೇ, ಜೂನ್ನಲ್ಲಿ 5 ಕೆ.ಜಿ. ಅಕ್ಕಿ ಕೊಡ್ತಾ ಇದೆ.
ರೈತ: ಯಾವಾಗ ಕೊಡ್ತಾ ಇದೀರಾ?
ಕತ್ತಿ: ಬರೋ ತಿಂಗಳಲ್ಲಿ
ರೈತ: ಅಲ್ಲಿಯವರೆಗೂ ಉಪವಾಸ ಇರೋದಾ ಸಾರ್. ಇಲ್ಲಾ ಸತ್ತೋಗೊದಾ?
ಕತ್ತಿ: ಸತ್ತೋದ್ರೆ ಒಳ್ಳೆಯದು. ಅದಕ್ಕಿಂದ ಅಕ್ಕಿ ಮಾರೋದು ಅಲ್ಲೇ ಬಂದ್ ಮಾಡಿಬಿಡಿ. ಇಡಿ ನಮಗೆ ಫೋನ್ ಮಾಡಬೇಡಿ.
ಇದನ್ನು ಓದಿ: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರಕ್ಕೆ ಹಲವು ಸಲಹೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ