ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ (Karnataka – Maharashtra Border Row) ಪ್ರಕರಣ ಸುಪ್ರೀಂಕೋರ್ಟ್ನಲ್ಲಿ (Supreme court) ವಿಚಾರಣೆಗೆ ಬರಲಿದೆ. ಈ ಹಿನ್ನೆಲೆ ಎರಡು ರಾಜ್ಯಗಳ ಗಡಿ ಪ್ರದೇಶದಲ್ಲಿ ಗ್ರಾಮಗಳ ಸೇರ್ಪಡೆ ಕುರಿತು ಹೋರಾಟ, ಬಸ್ಗಳ ಮೇಲೆ ಕಪ್ಪು ಮಸಿ ಬಳಸಿ ಬರಹ ಮತ್ತು ಕಲ್ಲು ತೂರಾಟದಂತಹ ಪ್ರಕರಣಗಳು ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮಹಾರಾಷ್ಟ್ರದ ರಾಜಕೀಯ ನಾಯಕರ ಹೇಳಿಕೆಗಳು (Political Leaders) ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣವಾಗುತ್ತಿದೆ. ಇನ್ನು ಬೆಳಗಾವಿಯಲ್ಲಿ (Belagavi) ಮೊದಲಿನಿಂದಲೂ ಭಾಷಾ ವಿವಾದ ಸೇರಿದಂತೆ ಗಡಿಗೆ ಸಂಬಂಧಿಸಿದಂತೆ ಹಲವು ಕಲಹಗಳು ಇಲ್ಲಿ ನಡೆದಿವೆ. ಇದೀಗ ಕನ್ನಡ ಬಾವುಟ (Kannada Flag) ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಹಲ್ಲೆ ನಡೆಸಲಾಗಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದೆ. ಗಡಿನಾಡು ಬೆಳಗಾವಿಯ ಕಾಲೇಜವೊಂದರಲ್ಲಿ (Belagavi College) ಈ ಘಟನೆ ನಡೆದಿದೆ.
ಕನ್ನಡ ಬಾವುಟ ಹಾರಿಸಿದ್ದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರೋ ಘಟನೆ ಟಿಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ, ಪರಿಶೀಲನೆ
ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಪಿ ರವೀಂದ್ರ ಗಡಾದಿ, ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಈವರೆಗೂ ಪ್ರಕರಣದ ಕುರಿತು ದೂರು ದಾಖಲಾಗಿಲ್ಲ. ಎಲ್ಲರೂ ಅಪ್ರಾಪ್ತರಾಗಿದ್ದು ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಅಂತ ಹೇಳಿದ್ದಾರೆ.
ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕನ್ನಡದ ಹಾಡು ಪ್ಲೇ ಆಗುತ್ತಿದ್ದಂತೆ ದ್ವಿತೀಯ ಪಿಯು ವಿದ್ಯಾರ್ಥಿ ಕನ್ನಡದ ಧ್ವಜ ಹಿಡಿದು ಡ್ಯಾನ್ಸ್ ಮಾಡಲು ಮುಂದಾಗಿದ್ದಾನೆ.
ಎಲ್ಲಾ ವಿದ್ಯಾರ್ಥಿಗಳು ಅಪ್ರಾಪ್ತರು
ವಿದ್ಯಾರ್ಥಿ ಡ್ಯಾನ್ಸ್ ಮಾಡುತ್ತಿರುವಾಗಲೇ ವೇದಿಕೆ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಕೂಡಲೇ ಕಾಲೇಜು ಸಿಬ್ಬಂದಿ ವರ್ಗವನ್ನು ವಿದ್ಯಾರ್ಥಿಗಳನ್ನು ನಿಯಂತ್ರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಹಲ್ಲೆಗೊಳಗಾದ ಮತ್ತು ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಅಪ್ರಾಪ್ತರಾಗಿರುವ ಹಿನ್ನೆಲೆ ಅವರ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಇದನ್ನೂ ಓದಿ: Bengaluru: ಬಿಜೆಪಿ ಮುಖಂಡನ ಪುತ್ರನಿಂದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ; 15 ಮಂದಿ ವಿರುದ್ಧ ದೂರು
ಇಂದು ಕಾಲೇಜಿಗೆ ಮುತ್ತಿಗೆ
ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಬೆಳಗಾವಿಯ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಹಲ್ಲೆ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. ಇಂದು ಬೆಳಗ್ಗೆ 9 ಗಂಟೆಗೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಘಟನೆ ಟಿಳಕವಾಡಿಯಲ್ಲಿನ ಗೋಗಟೆ ಕಾಲೇಜಿಗೆ ಮುತ್ತಿಗೆ ಹಾಕಿ, ಹಲ್ಲೆಗೈದ ವಿದ್ಯಾರ್ಥಿಗಳ ಅಮಾನತಿಗೆ ಆಗ್ರಹಿಸಲಿದ್ದಾರೆ.
ಕಾಲೇಜು ಸುತ್ತಮುತ್ತ ಪೊಲೀಸರ ನಿಯೋಜನೆ
ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಕಾಲೇಜು ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಬೆಳಗಾವಿ ನಗರದ ಸೂಕ್ಷ್ಮ ಪ್ರದೇಶಗಳ ಮೇಲೆಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: Islam College: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು; ಗುರುಕುಲ ಸ್ಥಾಪನೆಗೆ ಆಗ್ರಹಿಸಿದ ಹಿಂದೂ ಸಂಘಟನೆಗಳು
ಬೆಳಗಾವಿ ಪೊಲೀಸರು ಅಲರ್ಟ್
ಇಡೀ ರಾತ್ರಿ ಪೊಲೀಸರು ಅಲರ್ಟ್ ಆಗಿದ್ದು, ಗಸ್ತು ತಿರುಗುತ್ತಿದ್ದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ